ಬೈಕ್ ಗೆ ಢಿಕ್ಕಿ ಹೊಡೆದ ಟ್ಯಾಂಕರ್ : ಪುತ್ತೂರು ಮೂಲದ ಇಬ್ಬರು ಪ್ರಾಣಾಪಾಯದಿಂದ ಪಾರು
Team Udayavani, Aug 8, 2022, 7:40 AM IST
ಕೊಟ್ಟಿಗೆಹಾರ : ಟ್ಯಾಂಕರ್ ಮತ್ತು ಬೈಕ್ ಪರಸ್ಪರ ಮುಕಾಮುಖಿ ಡಿಕ್ಕಿ ಯಾಗಿ ಬೈಕ್ ನಲಿದ್ದ ಇಬ್ಬರಿಗೆ ಸಣ್ಣ ಪುಟ್ಟ ಗಾಯಗಳಾಗಿ ಅಪಾಯದಿಂದ ಪಾರಾದ ಘಟನೆ ರವಿವಾರ ರಾತ್ರಿ ಕೊಟ್ಟಿಗೆಹಾರ ಪಟ್ಟಣದಲ್ಲಿ ಸಂಭವಿಸಿದೆ.
ಪುತ್ತೂರಿನಿಂದ ಬಣಕಲ್ ಸಂಬಂಧಿಕರ ಮನೆಗೆ ಬೈಕ್ ನಲ್ಲಿ ಬರುತ್ತಿದ್ದ ವೇಳೆ ಎದುರಿಂದ ಬಂದ ಟ್ಯಾಂಕರ್ ಢಿಕ್ಕಿ ಹೊಡೆದಿದೆ ಪರಿಣಾಮ ಬೈಕ್ ನಲ್ಲಿದ್ದ ಇಬ್ಬರು ಸವಾರರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.
ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ಅವಘಡ ಸಂಭವಿಸಿದ್ದು ಬಣಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಅಕ್ಷತಾ ಪಕ್ಕ ಕೂರಬೇಕು ಎಂದೇ ಎಷ್ಟೋ ತರಗತಿಗಳನ್ನು ಬದಲಿಸಿಕೊಂಡಿದ್ದೆ: ರಿಷಿ ಸುನಕ್