ಗಬ್ಬದ ಹಸುವನ್ನು ಕೊಂದು,ಹೊಟ್ಟೆಯಲ್ಲಿದ್ದ ಕರುವನ್ನು ಕಾಡಿಗೆ ಎಸೆದು ಹೋದ ದುರುಳರು
ಮಗುವಂತೆ ಸಾಕಿದ್ದ ಗಬ್ಬದ ಹಸುವಿನ ಸ್ಥಿತಿ ಕಂಡು ಕಣ್ಣೀರಿಟ್ಟ ಮಾಲೀಕ
Team Udayavani, Aug 31, 2022, 3:16 PM IST
ಕೊಟ್ಟಿಗೆಹಾರ : ಮಾಂಸಕ್ಕಾಗಿ ಹಸುವನ್ನ ಕೊಂದ ದುರುಳರು ಅದರ ಹೊಟ್ಟೆಯಲ್ಲಿದ್ದ ಕರುವನ್ನ ಕಾಡಿಗೆ ಬಿಸಾಡಿ ಹೋಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಹಳೆಕಡುಬಗೆರೆ ಗ್ರಾಮದಲ್ಲಿ ನಡೆದಿದೆ.
ಮೇವಿಗೆ ಹೋಗಿದ್ದ ಹಳೆಕಡುಬಗೆರೆ ಗ್ರಾಮದ ರವೀಂದ್ರ ಎಂಬುವರಿಗೆ ಸೇರಿದ ಹಸು ಮನೆಗೆ ಬಂದಿರಲಿಲ್ಲ. ಹಸು ಗಬ್ಬದ ಹಸುವಾಗಿದ್ದು, ಮನೆಗೆ ಬಾರದ ಕಾರಣ ರವೀಂದ್ರ ಹಸುವನ್ನ ಹುಡುಕೊಂಡು ಹೋಗಿದ್ದರು. ಈ ವೇಳೆ, ಕಾಡಿನಲ್ಲಿ ಹಸುವಿನ ತಲೆ ಪತ್ತೆಯಾಗಿದೆ. ಮಗುವಂತೆ ಸಾಕಿದ್ದ ಗಬ್ಬದ ಹಸುವಿನ ಸ್ಥಿತಿ ಕಂಡು ಕಣ್ಣೀರಿಟ್ಟಿದ್ದಾರೆ.
ಮಾಂಸಕ್ಕಾಗಿ ಹಸುವನ್ನ ಕೊಂದ ಕಿಡಿಗೇಡಿಗಳು ಹಸುವಿನ ಹೊಟ್ಟೆಯಲ್ಲಿದ್ದ ಹಸುಗೂಸಿನಂತಹಾ ಕರುವನ್ನ ಕಾಡಿಗೆ ಎಸೆದೆ ಹೋಗಿದ್ದಾರೆ.
ಮೇಯುತ್ತಿದ್ದ ಹಸುವನ್ನ ಕದ್ದ ಗೋಕಳ್ಳರು ಹಸುವನ್ನ ಎಲೇಕಲ್ ಕಾಡಿನ ಬಳಿ ತಂದು ಹಸುವಿನ ತಲೆಕಡಿದು, ಕರುವನ್ನ ಕಾಡಿಗೆ ಎಸೆದು ಮಾಂಸವನ್ನು ಬೇರೆಡೆ ಸಾಗಿಸಿದ್ದಾರೆ.
ಬಾಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿರೋ ರವೀಂದ್ರ ಈ ಕೃತ್ಯವನ್ನ ಯಾರೇ ಎಸೆದಿದ್ದರೂ ಅವರನ್ನ ಬಂಧಿಸಿ ಕಠಿಣ ಶಿಕ್ಷೆ ನೀಡಬೇಕೆಂದು ಆಗ್ರಹಿಸಿದ್ದಾರೆ. ಬಾಳೆಹೊನ್ನೂರು ಪೊಲೀಸರು ಹಾಗೂ ಪಶುವೈದ್ಯರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
Congress party: ಮಾಲೀಕಯ್ಯ ಗುತ್ತೇದಾರ್ ಇಂದು ಕಾಂಗ್ರೆಸ್ ಸೇರ್ಪಡೆ
Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
MUST WATCH
ಹೊಸ ಸೇರ್ಪಡೆ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್