Kottigehara ಸಮಾಜ ಸೇವೆಯಲ್ಲಿ ಗಬ್ಗಲ್ ಯುವ ಗೆಳೆಯರ ಬಳಗ
Team Udayavani, Jun 17, 2023, 6:16 PM IST
ಕೊಟ್ಟಿಗೆಹಾರ: ಮಲೆನಾಡಿನಲ್ಲಿ ಅನೇಕ ಸಮಾಜ ಸೇವಕರು ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡು ಗುರುತುಕೊಳ್ಳುತ್ತಾರೆ.ಕೆಲವರು ಸದ್ದಿಲ್ಲದೇ ಸಮಾಜ ಸೇವೆ ಮಾಡಿ ತೃಪ್ತಿ ಪಡುತ್ತಾರೆ ಅಂತವರ ಹಾದಿಯಲ್ಲಿ ವರುಷದ ಹಿಂದೆ ಸಮಾಜ ಸೇವೆಗಾಗಿಯೇ ತೊಡಗಿಸಿಕೊಂಡು ತೆರೆಮರೆಯಲ್ಲಿಯೇ ಸಮಾಜ ಸೇವೆಯಲ್ಲಿ ನಿರತರಾಗಿರುವ ಗಬ್ಗಲ್ ಯುವ ಗೆಳೆಯರ ಬಳಗವೂ ಒಂದು.
ತೆರೆಮರೆಯಲ್ಲಿಯೇ ಸಮಾಜ ಸೇವೆಗಳನ್ನು ಮಾಡುತ್ತಾ, ಮನೆಗಳನ್ನು ದುರಸ್ತಿ ಮಾಡುತ್ತಾ ಬಂದಿದೆ.ಈ ಯುವ ಗೆಳೆಯರ ಬಳಗವು ಯಾವುದೇ ಪ್ರತಿಫಲಾಪೇಕ್ಷೆ ಅಪೇಕ್ಷಿಸದೇ ಮನೆ ಹಾನಿಯಾದವರಿಗೆ ಮನೆ ನಿರ್ಮಾಣ ಕಾರ್ಯ,ಸರ್ಕಾರಿ ಶಾಲೆಗೆ ಉಳಿವಿಗಾಗಿ ಸೇವಾ ಕಾರ್ಯ ಮಾಡುತ್ತಾ ಬರುತ್ತಿದೆ.
ಗ್ರಾಮಗಳಲ್ಲಿ ಸ್ವಚ್ಚತಾ ಕಾರ್ಯಕ್ಕೂ ತಾವು ಮುಂದಾಗಿ ಬಳಗವು ಸೇವೆಯನ್ನು ನೀಡುತ್ತಿದ್ದಾರೆ . ಕೂವೆ ಗ್ರಾಮದ ವ್ಯಾಪ್ತಿಯ ತಲಗೂರು ಗ್ರಾಮದ ರಾಮ ಅವರ ಮನೆ ಸಂಪೂರ್ಣ ದುರಸ್ತಿ ಮಾಡಿ ರಿಪೇರಿ ಯಾವುದೇ ಇತರರ ಸಹಾಯ ಕೇಳದೇ ಬಳಗವೇ ಖರ್ಚು ಮಾಡಿ ಸೇವೆ ನೀಡಿದೆ.35 ಜನರು ಈ ಯುವ ಗೆಳೆಯರ ಬಳಗದಲ್ಲಿದ್ದು ಬಳಗದ ಅಧ್ಯಕ್ಷ ಮಂಜುನಾಥ್ ಅವರ ಸಾರಥ್ಯದಲ್ಲಿ ಕಾರ್ಯದರ್ಶಿಗಳಾಗಿ ಯತೀಶ್,ಸುಭಾಷ್,ಮೋಹನ್,ರಂಜಿತ್,ಖಜಾಂಚಿಗಳಾಗಿ ಅರುಣ್,ಕಿರಣ್,ಅಶೋಕ್,ಅವಿನಾಶ್,ಸಂಚಾಲಕರಾಗಿ ಸತೀಶ್,ಗಣೇಶ್, ಸುದರ್ಶನ್,ಪ್ರದೀಪ್,ರಘು, ಮಂಜು ಅವರ ತಂಡ ಸಮಾಜ ಸೇವೆಗಾಗಿ ರಚನೆಯಾಗಿದೆ ಎಂದು ಅಧ್ಯಕ್ಷ ಮಂಜುನಾಥ್ ಹೇಳುತ್ತಾರೆ.
ಸಮಾಜ ಸೇವೆಗಾಗಿ ಗಬ್ಗಲ್ ಯುವ ಗೆಳೆಯರ ತಂಡ ಯಾವುದೇ ಸಂಕಷ್ಟದಲ್ಲಿ ನೆರವಿಗೆ ಸನ್ನಧ್ಧವಾಗಿದೆ.ಗ್ರಾಮೀಣ ಪ್ರದೇಶದ ಯುವಕರು ಉದಾರ ಸೇವೆ ಮಾಡಲು ಮುಂದಾಗಿರುವುದು ಸಮಾಜದಲ್ಲಿ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಹಿಡಿದ ಕೈಗನ್ನಡಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ
Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್ ಉತ್ಸುಕವಾಗಿದೆ: ಪ್ರಧಾನಿ ಮೋದಿ
Brahmavara-ಉಡುಪಿ ಟ್ರಾಫಿಕ್ ಜಾಮ್ ಸಮಸ್ಯೆ: ಸವಾರರು ಸುಸ್ತೋ ಸುಸ್ತು
Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು
Pens: ಬಹುರೂಪದಲ್ಲಿ ಲಭ್ಯವಿರುವ ಬಹುಪಯೋಗಿ ಲೇಖನಿ