ಕೊಟ್ಟಿಗೆಹಾರ: ಪುತ್ರನ ಸಾವಿನ ದು:ಖದಲ್ಲೂ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು
Team Udayavani, Dec 12, 2022, 10:42 AM IST
ಕೊಟ್ಟಿಗೆಹಾರ: ಪುತ್ರನ ಸಾವಿನ ದು:ಖದಲ್ಲೂ ಪೋಷಕರು ಆತನ ಅಂಗಾಂಗಗಳನ್ನು ದಾನ ಮಾಡಿ ಸಾರ್ಥಕತೆ ಮೆರೆದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಸಬ್ಬೇನಹಳ್ಳಿ ಬಳಿ ನಡೆದಿದೆ.
ತಾಲೂಕಿನ ಹೊರಟ್ಟಿ ಗ್ರಾಮದ ಧನ್ಯ ಕುಮಾರ್ (37) ಎಂಬವರು ಬೈಕ್ ನಲ್ಲಿ ಹೋಗುತ್ತಿದ್ದಾಗ ಕ್ಯಾಂಟರ್ ಡಿಕ್ಕಿಯಾಗಿ ಮೆದುಳು ಸಂಪೂರ್ಣ ನಿಷ್ಕ್ರಿಯಗೊಂಡಿತ್ತು. ಎಷ್ಟೇ ಪ್ರಯತ್ನಪಟ್ಟರೂ ಬದುಕಿಸಲು ಸಾಧ್ಯವಾಗಲ್ಲ ಎಂದು ವೈದ್ಯರು ತಿಳಿಸಿದರು.
ಧನ್ಯಕುಮಾರ್ ಅವರ ದೇಹದ ಇತರೆ ಭಾಗಗಳು ಸುರಕ್ಷಿತವಾಗಿದ್ದು, ವೈದ್ಯರ ಸಲಹೆ ಮೇರೆಗೆ ಅಂಗಾಂಗ ದಾನಕ್ಕೆ ಕುಟುಂಬಸ್ಥರು ಮುಂದಾಗಿದ್ದಾರೆ. ಹೃದಯ, ಕಿಡ್ನಿ, ಲಿವರ್, ಕಣ್ಣು ಸೇರಿದಂತೆ ದೇಹದ ಪ್ರಮುಖ ಭಾಗಗಳ ಅಂಗಾಂಗ ದಾನ ಮಾಡಲಾಗುತ್ತಿದೆ. ಸದ್ಯ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅಂಗಾಂಗ ದಾನ ಪ್ರಕ್ರಿಯೆ ನಡೆಯುತ್ತಿದೆ.
ಮೃತರು 4 ವರ್ಷದ ಪುತ್ರಿ, ಪತ್ನಿ, ತಂದೆ-ತಾಯಿಯನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ