ನೆಟ್ವರ್ಕ್ ಸಮಸ್ಯೆ: ಗ್ರಾಹಕರ ಪರದಾಟ
Team Udayavani, Mar 18, 2020, 6:11 PM IST
ಕೊಟ್ಟಿಗೆಹಾರ: ನ್ಯಾಯಬೆಲೆ ಅಂಗಡಿಯಲ್ಲಿ ಬಯೋಮೆಟ್ರಿಕ್ ನೀಡಲು ನೆಟ್ವರ್ಕ್ ಸಮಸ್ಯೆಯಿಂದಾಗಿ ಸಾಧ್ಯವಾಗದ ಕಾರಣ, ಬಾಳೂರು ದರ್ಬಾರ್ ಪೇಟೆಯ ನ್ಯಾಯಬೆಲೆ ಅಂಗಡಿ ಬಸ್ ತಂಗುದಾಣದಲ್ಲಿ ನಡೆಯುತ್ತಿದೆ.
ಬಾಳೂರು ದರ್ಬಾರ್ ಪೇಟೆಯಲ್ಲಿ ನ್ಯಾಯಬೆಲೆ ಅಂಗಡಿ ಇದ್ದು, ಅಲ್ಲಿ ಪಡಿತರದಾರರು ಬಯೋಮೆಟ್ರಿಕ್ನಲ್ಲಿ ಬೆರಳಚ್ಚು ನೀಡಿ ಪಡಿತರ ಪಡೆಯಬೇಕು. ಆದರೆ, ನೆಟ್ವರ್ಕ್ ಸಮಸ್ಯೆಯಿಂದಾಗಿ ಬಯೋಮೆಟ್ರಿಕ್ನಲ್ಲೂ ಬೆರಳಚ್ಚು ನೀಡಲು ಸಾಧ್ಯವಾಗದೇ ಇರುವುದರಿಂದ ಸುಮಾರು 1 ಕಿ.ಮೀ. ದೂರದಲ್ಲಿರುವ ಬಸ್ ತಂಗುದಾಣದಲ್ಲಿ ಬಯೋಮೆಟ್ರಿಕ್ನಲ್ಲಿ ಬೆರಳಚ್ಚು ಪಡೆದು ಪಡಿತರ ನೀಡಲಾಗುತ್ತಿದೆ.
ಬಸ್ ತಂಗುದಾಣದಲ್ಲಿ ವಿದ್ಯುತ್ ವ್ಯವಸ್ಥೆ ಇಲ್ಲದಿರುವುದರಿಂದ ನ್ಯಾಯಬೆಲೆ ಅಂಗಡಿ ಸಿಬ್ಬಂದಿ ಆಗಾಗ ಲ್ಯಾಪ್ಟಾಪ್ ಅನ್ನು ಬೇರೆಡೆ ಚಾರ್ಜ್ ಮಾಡಿಕೊಂಡು ಬರಬೇಕಾಗಿದೆ. ಬಾಳೂರು ಗ್ರಾಪಂ ಪ್ರದೇಶದಲ್ಲಿ ನೆಟ್ವರ್ಕ್ ಸಮರ್ಪಕವಾಗಿ ಸಿಗುತ್ತಿದ್ದು, ಆ ಭಾಗದಲ್ಲಿ ನ್ಯಾಯಬೆಲೆ ಅಂಗಡಿ ತೆರೆದರೆ ಈ ಎಲ್ಲಾ ಸಮಸ್ಯೆಗಳಿಗೆ ತೆರೆ ಎಳೆಯಬಹುದಾಗಿದೆ.
ನೆಟ್ವರ್ಕ್ ಸಮಸ್ಯೆಯಿಂದಾಗಿ ಬಸ್ ತಂಗುದಾಣದಲ್ಲಿ ನ್ಯಾಯಬೆಲೆ ಅಂಗಡಿ ನಡೆಯುತ್ತಿದೆ. ಇನ್ನೆನ್ನೂ ಕೆಲ ತಿಂಗಳುಗಳಲ್ಲೇ ಮಳೆಗಾಲ ಪ್ರಾರಂಭವಾಗುವುದರಿಂದ ಈ ಸಮಸ್ಯೆಗೆ ಆಹಾರ ಇಲಾಖೆ ಸೂಕ್ತ ಪರಿಹಾರ ಕಂಡುಕೊಳ್ಳಬೇಕಿದೆ ಎಂದು ಬಾಳೂರಿನ ಸುಪ್ರೀಮ್ ಆಗ್ರಹಿಸಿದ್ದಾರೆ.
ಈ ಬಗ್ಗೆ ಪತ್ರಿಕೆಯೊಂದಿಗೆ ಮಾತನಾಡಿದ ಮೂಡಿಗೆರೆ ಆಹಾರ ಶಿರಸ್ತೇದಾರ್ ಇಂದ್ರೇಶ್, ನೆಟ್ವರ್ಕ್ ಸಮಸ್ಯೆಯಿಂದಾಗಿ ತೊಂದರೆ ಉಂಟಾಗಿದೆ. ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್ಡಿಡಿ
MUST WATCH
ಹೊಸ ಸೇರ್ಪಡೆ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ