ಕೊಟ್ಟಿಗೆಹಾರ : ಸ್ವಂತ ಸೂರಿನ ನಿರೀಕ್ಷೆಯಲ್ಲೆ ಕೊನೆಯುಸಿರೆಳೆದ ನೆರೆ ಸಂತ್ರಸ್ತ
Team Udayavani, Aug 1, 2022, 8:39 PM IST
ಕೊಟ್ಟಿಗೆಹಾರ :2019ರ ಮಹಾಮಳೆಗೆ ಮನೆ ಜಮೀನು ಕಳೆದುಕೊಂಡ ನೆರೆ ಸಂತ್ರಸ್ತರೊಬ್ಬರು ಸ್ವಂತ ಸೂರಿನ ನಿರೀಕ್ಷೆಯಲ್ಲೆ ಕೊನೆಯುಸಿರೆಳಿದ್ದಾರೆ.
ಜಾವಳಿ ಗ್ರಾ.ಪಂ ವ್ಯಾಪ್ತಿಯ ಮಲೆಮನೆಯ ನೆರೆ ಸಂತ್ರಸ್ತ ನಾರಾಯಣಗೌಡ (65) 2019 ರಲ್ಲಿ ಸುರಿದ ಮಹಾಮಳೆಯಿಂದಾಗಿ ಮನೆ ಹಾಗೂ ಜಮೀನನ್ನು ಕಳೆದುಕೊಂಡಿದ್ದರು.
ಮನೆಯೊಂದಿಗೆ ಮನೆಯಲ್ಲಿದ್ದ ವಸ್ತುಗಳು, ಚಿನ್ನಾಭರಣಗಳು, ದಾಖಲೆ ಪತ್ರಗಳು ಎಲ್ಲವನ್ನು ಕಳೆದುಕೊಂಡು ಅಕ್ಷರಶಃ ಬರಿಗೈನಲ್ಲಿ ಬೀದಿಗೆ ಬಿದ್ದಿದ್ದರು.
ಮೂಡಿಗೆರೆಯಲ್ಲಿ ಬಾಡಿಗೆ ಮನೆಯಲ್ಲಿ ಕುಟುಂಬದೊಂದಿಗೆ ವಾಸವಿದ್ದ ನಾರಾಯಣಗೌಡ ಅವರು ಸರ್ಕಾರ ಮನೆ ಕಟ್ಟಲು ಪರ್ಯಾಯ ಜಾಗ ಹಾಗೂ ಪರ್ಯಾಯ ಕೃಷಿಭೂಮಿಯ ನಿರೀಕ್ಷೆಯಲ್ಲಿದ್ದರು. ಆದರೆ ನಾಲ್ಕು ವರ್ಷ ಕಳೆದರೂ ಸರ್ಕಾರ ಪುನರ್ವಸತಿ ಕಲ್ಪಿಸದೇ ಇರುವುದರಿಂದ ಆ ಕೊರಗಿನಲ್ಲಿ ಜೀವನ ಸಾಗಿಸುತ್ತಿದ್ದರು.
2019 ರಲ್ಲಿ ತಲೆಮಾರುಗಳಿಂದ ಬದುಕಿದ್ದ ಮನೆ ಕೊಚ್ಚಿ ಹೋದಾಗ ಆಘಾತಕ್ಕೆ ಒಳಗಾಗಿ ಪಾಶ್ವವಾಯು ಪೀಡಿತರಾಗಿ ಹಾಸಿಗೆ ಹಿಡಿದಿದ್ದರು. ಸ್ವಂತ ಮನೆಯ ನಿರೀಕ್ಷೆಯಲ್ಲಿಯೇ ನಾರಾಯಣಗೌಡ ಅವರು ಸೋಮವಾರ ಸಂಜೆ ಮೂಡಿಗೆರೆಯ ಬಾಡಿಗೆ ಮನೆಯಲ್ಲಿಯೇ ಮೃತಪಟ್ಟಿದ್ದಾರೆ. ಮೃತದೇಹವನ್ನು ಮಲೆಮನೆ ಗ್ರಾಮಕ್ಕೆ ತೆಗೆದುಕೊಂಡು ಹೋದರೂ ಅಂತಿಮ ದರ್ಶನಕ್ಕೆ ಮೃತದೇಹವನ್ನು ಇಡಲು ಮನೆಯೂ ಕೂಡ ಇಲ್ಲದಂತಾಗಿರುವುದು ನಿಜಕ್ಕೂ ವಿಪರ್ಯಾಸವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!