Kottigehara: ಅಕ್ರಮ ಭೂ ಕಬಳಿಕೆ ತೆರವುಗೊಳಿಸದ ಕಂದಾಯ ಇಲಾಖೆ ವಿರುದ್ದ ಪ್ರತಿಭಟನೆ
Team Udayavani, Sep 22, 2023, 3:37 PM IST
ಕೊಟ್ಟಿಗೆಹಾರ: ಬಾಳೂರು ಗ್ರಾ.ಪಂ.ವ್ಯಾಪ್ತಿಯ ದರ್ಬಾರ್ ಪೇಟೆಯಲ್ಲಿ ಅಂಗನವಾಡಿ ಕಟ್ಟಡ ಕಟ್ಟಲು 22 ಗುಂಟೆ ಜಾಗ ಮಂಜೂರಾಗಿದ್ದರೂ ಖಾಸಗಿ ವ್ಯಕ್ತಿಯೋರ್ವರು ಈ ಜಾಗವನ್ನು ಆಕ್ರಮಿಸಿರುವುದರಿಂದ ಅಂಗನವಾಡಿ ಕಟ್ಟಡ ಕಟ್ಟಲು ಬೇಲಿ ಹಾಕಿರುವ ಹಿನ್ನಲೆ ಸಾಧ್ಯವಾಗುತ್ತಿಲ್ಲ. ಕಂದಾಯ ಅಧಿಕಾರಿಗಳು ಈ ಅಕ್ರಮ ಜಾಗವನ್ನು ತೆರವುಗೊಳಿಸಿಲ್ಲ ಎಂದು ವಿರೋಧಿಸಿ ಬಾಳೂರಿನಲ್ಲಿ ಗ್ರಾಮಸ್ಥರು ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಬಾಳೂರು ಗ್ರಾ.ಪಂ.ಅಧ್ಯಕ್ಷ ಬಿ.ಬಿ.ಮಂಜುನಾಥ್ ಮಾತನಾಡಿ, ಅಂಗನವಾಡಿ ಕಟ್ಟಡ ಕಟ್ಟಲು ಹಣ ಮಂಜೂರಾಗಿದೆ. ಆದರೆ ಈ ಜಾಗವನ್ನು ಖಾಸಗಿ ವ್ಯಕ್ತಿಯೋರ್ವರು ಒತ್ತುವರಿ ಮಾಡಿದ್ದು, ಅದನ್ನು ಬಿಡಿಸಿ ಕೊಡಲು ತಾಲೂಕು ಆಡಳಿತ ಮೀನಾ ಮೇಷ ಎಣಿಸುತ್ತಿದೆ. ಜಾಗ ಸಿಗುವವರೆಗೂ ನಿರಂತರ ಪ್ರತಿಭಟನೆ ಮಾಡುತ್ತೇವೆ. ಗ್ರಾಮಸ್ಥರೊಂದಿಗೆ ಗ್ರಾ.ಪಂ. ಸದಸ್ಯರು ಕೂಡಾ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ. ಕಂದಾಯ ಅಧಿಕಾರಿಗಳು ಶೀಘ್ರವೇ ಜಾಗ ತೆರವುಗೊಳಿಸಿ ಅಂಗನವಾಡಿ ಕಟ್ಟಡ ಕಟ್ಟಲು ಸ್ಪಂದಿಸಬೇಕು.ಇಲ್ಲವಾದರೆ ಬೇಡಿಕೆ ಈಡೆರುವವರೆಗೂ ನಿರಂತರ ಪ್ರತಿಭಟನೆ ನಡೆಸುತ್ತೇವೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಉಪಾಧ್ಯಕ್ಷೆ ಗೀತಾ, ಸದಸ್ಯರಾದ ಮನೋಜ್, ಜಯಶ್ರೀ, ಪ್ರಕಾಶ್, ಗ್ರಾಮಸ್ಥರಾದ ರಘುಪತಿ, ಜಗದೀಶ್, ಪ್ರಭಾಕರ್, ಸಂದೀಪ್, ಮದನ್, ರಮೇಶ್ ,ಅವಿನಾಶ್, ಕೇಶವ, ವೆಂಕಟೇಶ್, ಪ್ರಮೀಳಾ, ಜ್ಯೋತಿ, ನಳಿನಿ ಹಾಗೂ ಊರಿನ ಎಲ್ಲ ಪ್ರಮುಖರು, ಮಹಿಳಾ ಸಂಘದ ಎಲ್ಲಾ ಸದಸ್ಯರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ