ತರುವೆ ಕ್ವಾರಂಟೈನರ್ಸ್ ಸ್ವಗ್ರಾಮಕ್ಕೆ ರವಾನೆ
Team Udayavani, May 25, 2020, 1:38 PM IST
ಸಾಂದರ್ಭಿಕ ಚಿತ್ರ
ಕೊಟ್ಟಿಗೆಹಾರ: ಮೂಡಿಗೆರೆ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರಿಗೆ ಕೋವಿಡ್ ಪಾಸಿಟಿವ್ ಎನ್ನಲಾಗಿದ್ದ ವರದಿ ವಿವಿಧ ಹಂತದ ಮರು ಪರೀಕ್ಷೆಗಳಿಂದ ನೆಗೆಟಿವ್ ಬಂದ ಹಿನ್ನೆಲೆಯಲ್ಲಿ ತರುವೆಯ ಏಕಲವ್ಯ ವಸತಿ ಶಾಲೆಯ ಕ್ವಾರಂಟೈನ್ನಲ್ಲಿದ್ದ ವೈದ್ಯರೊಂದಿಗೆ ಪ್ರಥಮ ಹಂತದಲ್ಲಿ ಸಂಪರ್ಕದಲ್ಲಿದ್ದವರನ್ನು ಸ್ವಗ್ರಾಮಗಳಿಗೆ ಕಳಿಸಲಾಯಿತು.
ತರುವೆ ಏಕಲವ್ಯ ವಸತಿ ಶಾಲೆಯ ಕ್ವಾರಂಟೈನ್ನಲ್ಲಿ ಮಾಕೋನಹಳ್ಳಿ, ನಂದಿಪುರ, ಸಂಗಮಾಪುರ, ಕನ್ನಾಪುರದ 82 ಮಂದಿ ಇದ್ದರು. ಶನಿವಾರ ಮಧ್ಯಾಹ್ನದ ವೇಳೆಗೆ ವೈದ್ಯರ ಕೋವಿಡ್ ವರದಿ ನೆಗೆಟಿವ್ ಬಂದ ಹಿನ್ನೆಲೆಯಲ್ಲಿ ಕ್ವಾರಂಟೈನ್ನಲ್ಲಿದ್ದ ಎಲ್ಲರನ್ನೂ ಮೂರು ಬಸ್ಸುಗಳಲ್ಲಿ ಸ್ವಗ್ರಾಮಕ್ಕೆ ಕಳಿಸಿಕೊಡಲಾಯಿತು. ಸ್ವಗ್ರಾಮಗಳಿಗೆ ತೆರಳುವ ಮುನ್ನ ಪತ್ರಿಕೆಯೊಂದಿಗೆ ಮಾತನಾಡಿದ ಸಂಗಮಾಪುರದ ಕಲಾವತಿ, ಕಳೆದ ಕೆಲ ದಿನಗಳಿಂದ ತರುವೆಯ ಏಕಲವ್ಯ ಶಾಲೆಯಲ್ಲಿ ಕ್ವಾರಂಟೈನ್ನಲ್ಲಿದ್ದೆವು. ಇಲ್ಲಿ ಎಲ್ಲಾ ರೀತಿಯ ಮೂಲ ಸೌಕರ್ಯಗಳನ್ನು ಕಲ್ಪಿಸಿ ಯಾವುದೇ ತೊಂದರೆ ಆಗದಂತೆ ನೋಡಿಕೊಂಡಿದ್ದಾರೆ. ವೈದ್ಯರ ಕೋವಿಡ್ ವರದಿಯಲ್ಲಿ ನೆಗೆಟಿವ್ ಬಂದ ಹಿನ್ನೆಲೆಯಲ್ಲಿ ನಮ್ಮ ಮನೆಗೆ ಹೊರಟಿದ್ದೇವೆ ಎಂದರು.
ನೋಡೆಲ್ ಅಧಿಕಾರಿ ಮಲ್ಲಿಕಾರ್ಜುನ್, ಉಪ ತಹಶೀಲ್ದಾರ್ ರಾಜು, ಕಂದಾಯ ನಿರೀಕ್ಷಕ ಮಂಜುನಾಥ್, ಗ್ರಾಮ ಲೆಕ್ಕಾ ಧಿಕಾರಿ ಆನಂದ್, ತರುವೆ ಗ್ರಾಪಂ ಪಿಡಿಒ ಕೆ.ವಿ. ಶಾರದಾ, ಗ್ರಾಮ ಸಹಾಯಕ ಅಣ್ಣಪ್ಪ, ಪೂರ್ಣೇಶ್, ಸತೀಶ್, ಅರಣ್ಯ ಇಲಾಖೆಯ ಸಂತೋಷ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
MUST WATCH
ಹೊಸ ಸೇರ್ಪಡೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು