ನಾಲ್ಕು ಮಳೆಗಾಲ ಬಂದರೂ ನೆಲೆಯಾಗದ ಬದುಕು : ಸಂತ್ರಸ್ಥರಿಂದ ಸಾಮೂಹಿಕ ಆತ್ಮಹತ್ಯೆ ಎಚ್ಚರಿಕೆ


Team Udayavani, Aug 9, 2022, 9:07 AM IST

ನಾಲ್ಕು ಮಳೆಗಾಲ ಬಂದರೂ ನೆಲೆಯಾಗದ ಬದುಕು : ಪುನರ್ವಸತಿ ನಿರೀಕ್ಷೆಯಲ್ಲಿ ನೆರೆಸಂತ್ರಸ್ಥರು

ಕೊಟ್ಟಿಗೆಹಾರ : 2019 ರಲ್ಲಿ ಸುರಿದ ಮಹಾಮಳೆಗೆ ಮಲೆ ಮನೆಯ ನೆರೆ ಸಂತ್ರಸ್ಥರು ನೆಲೆ ಕಳೆದುಕೊಂಡಿದ್ದು ನಾಲ್ಕು ವರ್ಷ ಕಳೆದರೂ ನೆರೆ ಸಂತ್ರಸ್ಥರು ನೆಲೆ ಕಂಡುಕೊಂಡಿಲ್ಲ.

2019ರ ಆಗಸ್ಟ್‌ 9 ರಂದು ಸುರಿದ ಭಾರಿ ಮಳೆಗೆ ಮಲೆಮನೆಯ 5 ಮನೆ ಹಾಗೂ 2 ದೇವಸ್ಥಾನಗಳು ಕೊಚ್ಚಿ ಹೋಗಿದ್ದವು. ಅಂದಿನ ಮುಖ್ಯಮಂತ್ರಿಯಾಗಿದ್ದ ಬಿ.ಎಸ್‌ ಯಡಿಯೂರಪ್ಪ ಹಾದಿಯಾಗಿ ರಾಜ್ಯ ಸರ್ಕಾರವೇ ಗ್ರಾಮಕ್ಕೆ ಬಂದು ಬದುಕು ಕಟ್ಟಿಕೊಡುವ ಭರವಸೆ ನೀಡಿ ಹೋಗಿದ್ದರು. ಆದರೆ ಅದು ಕೇವಲ ಭರವಸೆಯಾಗಿಯೇ ಉಳಿಯಿತೇ ಹೊರತು ಕಾರ್ಯರೂಪಕ್ಕೆ ಬರಲೇ ಇಲ್ಲ.

ಕಳೆದ ವರ್ಷದ ಮಳೆಗಾಲದಲ್ಲಿ ಉಸ್ತುವಾರಿ ಸಚಿವರಾಗಿದ್ದ ಎಸ್‌ ಅಂಗಾರ ಅವರೂ ಕೂಡಾ ಜಿಲ್ಲಾಡಳಿತದ ಜೊತೆಗೆ ಬಂದು ಪುನರ್ವಸತಿಯ ಭರವಸೆ ನೀಡಿದ್ದರು. ಮನೆ ಕಳೆದುಕೊಂಡಿದ್ದ ನೆರೆಸಂತ್ರಸ್ಥರಿಗೆ ಒಂದು ಲಕ್ಷ ಪರಿಹಾರ ನೀಡಲಾಗಿತ್ತು. ಆದರೆ ನಾಲ್ಕು ವರ್ಷ ಕಳೆದರೂ ಕೂಡ ಪುನರ್ವಸತಿ ಕಲ್ಪಸದೇ ಇರುವುದರಿಂದ ನೆರೆಸಂತ್ರಸ್ಥರ ಬದುಕು ಅತಂತ್ರವಾಗಿದೆ.

ವರ್ಷಗಳೆ ಕಳೆದರೂ ಸರ್ಕಾರ ಪುನರ್ವಸತಿ ಕಲ್ಪಿಸದೇ ಇರುವುದು ನೆರೆಸಂತ್ರಸ್ಥರ ಬೇಸರಕ್ಕೆ ಕಾರಣವಾಗಿದ್ದು ಸರ್ಕಾರ ಶೀಘ್ರ ಪುನರ್ವಸತಿ ಕಲ್ಪಿಸಲು ಮುಂದಾಗದೇ ಇದ್ದರೆ ತಾಲ್ಲೂಕು ಕಚೇರಿ ಮುಂಭಾಗ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುವ ಎಚ್ಚರಿಕೆಯನ್ನು ನೆರೆಸಂತ್ರಸ್ಥರು ನೀಡಿದ್ದಾರೆ.

ಇದನ್ನೂ ಓದಿ : ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಿರುವ ತೀವ್ರ ನಿಗಾ ಘಟಕ ಗೃಹ ಸಚಿವರಿಂದ ಉದ್ಘಾಟನೆ

ಮಲೆಮನೆ ಗ್ರಾಮಸ್ಥರಿಗೆ2-3 ಬಾರಿ ಜಾಗ ಗುರುತಿಸಿ ಕಡತ ಸಿದ್ದಪಡಿಸಲಾಗಿತ್ತು. ನಾವು ತೋರಿಸಿದ ಜಾಗಕ್ಕೆ ಹೋಗಲು ಅವರು ಸಿದ್ದರಿಲ್ಲ. ಕಡತ ಸಂಪೂರ್ಣವಾದ ನಂತರ ಶಾಸಕರ ಬಳಿ ಹೋಗಿ ನಾವು ಅಲ್ಲಿಗೆ ಹೋಗಲ್ಲ ಎನ್ನುತ್ತಾರೆ. ಅವರ ಇಂದಿನ ಪರಿಸ್ಥಿತಿಗೆ ಅವರೇ ಕಾರಣ. ಇತ್ತೀವಿಗೆ ಒಂದು ಜಾಗ ಗುರುತಿಸಿದ್ದೇವೆ. ಇನ್ನೊಂದು ವಾರ, ಹತ್ತು ದಿನದಲ್ಲಿ ಜಾಗ ನೀಡುತ್ತೇವೆ*
– ಕೆ.ಎನ್‌.ರಮೇಶ್‌, ಜಿಲ್ಲಾಧಿಕಾರಿಗಳು.

2019ರಲ್ಲಿ ಮನೆ ಕಳೆದುಕೊಂಡ ನಮಗೆ ತಳಪಾಯ ನಿರ್ಮಾಣಕ್ಕೆಂದು 1 ಲಕ್ಷ ಕೊಟ್ಟಿದ್ದು ಬಿಟ್ಟರೇ ಬದಲಿ ಜಾಗವನ್ನೂ ನೀಡಿಲ್ಲ. ಬಾಡಿಗೆ ಮನೆಯಲ್ಲಿ ಇರಲು ಸೂಚಿಸಿದ್ದರೂ ಬಾಡಿಗೆ ಹಣವನ್ನೂ ಕೊಟ್ಟಿಲ್ಲ. ಏನೂ ಮಾಡಲಾಗದ ಪರಿಸ್ಥಿತಿಯಲ್ಲಿ ಇದ್ದೇವೆ. ಕೊನೆಯ ಹಂತಕ್ಕೆ ಬಂದು ತಲುಪಿದ್ದೇವೆ. ಮಲೆಮನೆಯ 5 ಮನೆಯವರೂ ತಾಲ್ಲೂಕು ಕಚೇರಿ ಮುಂದೆ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ದರಿಸಿದ್ದೇವೆ
– ಅಶ್ವತ್‌, ನೆರೆಸಂತ್ರಸ್ಥರು, ಮಲೆಮನೆ

– ಸಂತೋಷ್‌ ಅತ್ತಿಗೆರೆ

ಟಾಪ್ ನ್ಯೂಸ್

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.