Kottigehara; ಅಪರಿಚಿತ ಜಿಪ್ಸಿ ಢಿಕ್ಕಿ:ವ್ಯಕ್ತಿಗೆ ಗಂಭೀರ ಗಾಯ
Team Udayavani, Sep 30, 2023, 9:48 PM IST
ಕೊಟ್ಟಿಗೆಹಾರ: ಬಣಕಲ್ ಪೇಟೆಯಲ್ಲಿ ಮೂಡಿಗೆರೆಯಿಂದ ಕೊಟ್ಟಿಗೆಹಾರ ಕಡೆಗೆ ಸಾಗುತ್ತಿದ್ದ ಅಪರಿಚಿತ ಜಿಪ್ಸಿ ವಾಹನ ವ್ಯಕ್ತಿಗೆ ಢಿಕ್ಕಿ ಹೊಡೆದು ವಾಹನ ನಿಲ್ಲಿಸದೇ ಹೋಗಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.ವಿನಯ್ ಎಂಬ ಯುವಕ ಗಾಯಾಳು.
ಬಣಕಲ್ ಸಮೀಪದ ಮತ್ತಿಕಟ್ಟೆಯಿಂದ ಬಿ.ಎಸ್ ರಕ್ಷಿತ್ ಅವರ ಬೈಕ್ನಲ್ಲಿ ವಿನಯ್ ಸೇರಿ ಅಂಗಡಿ ದಿನಸಿ ತರಲು ಬಣಕಲ್ ಗೆ ಬಂದಿದ್ದರು.ಬೈಕನ್ನು ಆಲಂ ಸೂಪರ್ ಮಾರ್ಕೆಟ್ ಬಳಿ ನಿಲ್ಲಿಸಿ ಇತರ ವಸ್ತುಗಳನ್ನು ಖರೀದಿಸಲು ರಾತ್ರಿ 8ಗಂಟೆ ಸಮಯದಲ್ಲಿ ವಿನಯ್ ರಸ್ತೆ ದಾಟುತ್ತಿದ್ದಾಗ ಮೂಡಿಗೆರೆ ಕಡೆಯಿಂದ ಕೊಟ್ಟಿಗೆಹಾರ ಕಡೆ ಸಾಗುವ ವಾಹನವು ಚಾಲಕನ ಅತಿಯಾದ ವೇಗದಿಂದ ವಿನಯ್ ಗೆ ಢಿಕ್ಕಿ ಹೊಡೆದಿದೆ.ವಿನಯ್ ಗಂಭೀರ ಗಾಯಗೊಂಡು ತಲೆಗೆ, ಕಾಲಿಗೆ ಪೆಟ್ಟಾಗಿತ್ತು.ಆದರೆ ಅಪರಿಚಿತ ಜಿಪ್ಸಿ ವಾಹನ ನಿಲ್ಲಿಸದೇ ಕೊಟ್ಟಿಗೆಹಾರ ಕಡೆಗೆ ಸಾಗಿತ್ತು.ಕೂಡಲೆ ಸ್ಥಳೀಯ ಯುವಕರು ನಮ್ಮ ಊರು ಬಣಕಲ್ ವ್ಯಾಟ್ಸಾಪ್ ಗ್ರೂಪಿನಲ್ಲಿ ಒಬ್ಬರಿಂದೊಬ್ಬರಿಗೆ ಜಿಪ್ಸಿ ಹಿಡಿಯುವಂತೆ ಬಾಳೂರು ಪೊಲೀಸ್ ಠಾಣೆ ಸುತ್ತಮುತ್ತ ಮಾಹಿತಿ ತಲುಪಿಸಿದ್ದಾರೆ.
ಬಾಳೂರು ಪೊಲೀಸರು ಬ್ಯಾರಿಕೇಡ್ ಗಳನ್ನು ಹಾಕಿ ವಾಹನ ನಿಲ್ಲಿಸಲು ಹೇಳಿದರೆ ಚಾಲಕ ಬ್ಯಾರಿಕೇಡ್ ಗೆ ಗುದ್ದಿ ಎಲ್ಲಿಯೂ ನಿಲ್ಲಿಸದೇ ಗಬ್ಗಲ್ ಮೂಲಕ ನಾಪತ್ತೆಯಾಯಿತು.ಕೆಲವು ಯುವಕರು ರಾತ್ರಿವರೆಗೂ ಬೆನ್ನಟ್ಟಿದರೂ ಇವರ ಸುಳಿವು ಸಿಗಲಿಲ್ಲ.ಬಾಳೂರು ಠಾಣೆಯ ಪೊಲೀಸರು ಹಿರೇಬೈಲ್, ಬಿಳಗಲಿ ಬಳಿ ಜಿಪ್ಸಿ ವಾಹನವನ್ನು ಹಿಡಿದು ಪೊಲೀಸ್ ಠಾಣೆಗೆ ತಂದರು.ಘಟನೆ ಬಣಕಲ್ ನಲ್ಲಿ ಆದುದರಿಂದ ಜಿಪ್ಸಿ ವಾಹನವನ್ನು ಬಣಕಲ್ ಗೆ ತಂದು ಪ್ರಕರಣ ದಾಖಲಿಸಲಾಯಿತು.ಗಾಯಾಳು ವಿನಯ್ ಗಂಭೀರ ಸ್ಥಿತಿಯಲ್ಲಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ