ಶಿಥಿಲಾವಸ್ಥೆ ತಲುಪಿದ ಸಮುದಾಯ ಭವನಗಳು

ಸೂಕ್ತ ನಿರ್ವಹಣೆ ಇಲ್ಲದೆ ಹಾಳು

Team Udayavani, Apr 13, 2022, 3:43 PM IST

shringeri

ಶೃಂಗೇರಿ: ವರ್ಷಕ್ಕೊಮ್ಮೆ ಬಳಸುವ ರಂಗ ಮಂದಿರದಂತೆ ಸೀಮಿತವಾಗಿ ಬಳಸುವ ಸಮುದಾಯ ಭವನಗಳು ತಾಲೂಕಿನಾದ್ಯಂತ ಇದ್ದು, ಬಹುತೇಕ ಸಮುದಾಯ ಭವನಗಳು ನಿರ್ವಹಣೆ ಇಲ್ಲದೇ ಶಿಥಿಲಾವಸ್ಥೆ ತಲುಪಿವೆ.

ಸರಕಾರದಿಂದ ವಿವಿಧ ಯೋಜನೆಯಡಿ ನಿರ್ಮಿಸಲಾಗಿರುವ ಸಮುದಾಯ ಭವನ ಇದ್ದು ಉಪಯೋಗಕ್ಕೆ ಇಲ್ಲದಂತಾಗಿದೆ. ಹಳ್ಳಿ- ಹಳ್ಳಿಗೆ ಬಸ್‌ ತಂಗುದಾಣದ ಬೇಡಿಕೆಯಂತೆ ಜನಪ್ರತಿನಿಧಿಗಳ ಬಳಿ ಸಂಘ- ಸಂಸ್ಥೆ ಮೂಲಕ ಸಮುದಾಯ ಭವನದ ಬೇಡಿಕೆ ಇಟ್ಟು ಅದನ್ನು ಪಡೆಯಲು ಯಶಸ್ವಿಯಾಗಿದ್ದಾರೆ. ಸ್ವ-ಸಹಾಯ ಸಂಘ, ಸ್ತ್ರೀಶಕ್ತಿ ಸಂಘದ ಸಭೆ ನಡೆಸಲು ಅನುಕೂಲವಾಗವಂತೆ ಸಮುದಾಯ ಭವನ ನಿರ್ಮಿಸಲಾಗಿತ್ತು.

ನಿರ್ವಹಣೆ ಕೊರತೆ

ಸಮುದಾಯ ಭವನಗಳು ನಿರ್ಮಾಣವಾದ ನಂತರ ನಿರ್ವಹಣೆ ಇಲ್ಲದೆ ಸೊರಗುತ್ತಿವೆ. ಲಕ್ಷಾಂತರ ರೂ. ವ್ಯಯಿಸಿ ನಿರ್ಮಿಸಿದ ಭವನ ಉಪಯೋಗಕ್ಕೆ ಇಲ್ಲವಾಗುತ್ತಿದೆ. ಕಿಟಿಕಿ, ಬಾಗಿಲು, ಮೇಲ್ಛಾವಣಿ ಗೆದ್ದಲು ಹಿಡಿದು ಹಾಳಾಗುತ್ತಿದೆ. ಸಂಘದ ಸಭೆಗಾಗಿ ತಿಂಗಳಿಗೊಮ್ಮೆ ತೆಗೆಯುತ್ತಿದ್ದ ಭವನದ ಬಾಗಿಲು ತೆರೆಯುತ್ತಿಲ್ಲ. ಸಂಘದ ಸಭೆಯನ್ನು ಸದಸ್ಯರ ಮನೆಗೆ ಸ್ಥಳಾಂತರಿಸಿಕೊಂಡಿದ್ದಾರೆ.

ಸಮುದಾಯ ಭವನದಲ್ಲಿ ಸಭೆ ನಡೆಸಲು ಗ್ರಾಪಂ ಅನುಮತಿ ಪಡೆಯವುದು, ಶೌಚಾಲಯ ಕೊರತೆ, ಸಮೂಲಭೆ ನಡೆಸಲು ಅಗತ್ಯವಾದ ಪೀಠೊಪಕರಣ ಇಲ್ಲದಿರುವುದು, ವಿದ್ಯುತ್‌ ವ್ಯವಸ್ಥೆ ಇಲ್ಲದಿರುವುದು, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಸೌಲಭ್ಯದ ಕೊರತೆಯಿಂದ ಸಂಘಗಳ ಸಭೆಯು ಭವನದಲ್ಲಿ ನಡೆಯುತ್ತಿಲ್ಲ.

ಬಸ್‌ ತಂಗುದಾಣ ನಿರ್ವಹಣೆ ಕೊರತೆಯಿಂದ ಹಾಳಾಗುತ್ತಿರುವಂತೆ ಭವನಗಳು ಹಾಳಾಗುತ್ತಿವೆ. ಅಡ್ಡಗದ್ದೆ ಗ್ರಾಪಂ ಯ ಕೆರೋಡಿಯಲ್ಲಿರುವ ಸಮುದಾಯ ಭವನ ಶಿಥಿಲಾವಸ್ಥೆ ತಲುಪಿದ್ದು, ಕಿಟಕಿ, ಬಾಗಿಲಿಗೆ ಗೆದ್ದಲು ಹಿಡಿದಿದೆ. ಭವನವನ್ನು ಖಾಸಗಿ ವ್ಯಕ್ತಿಗಳು ಸ್ವಂತ ಬಳಕೆಗೆ ಬಳಸುತ್ತಿರುವ ಬಗ್ಗೆ ಗ್ರಾಮಸ್ಥರು ದೂರಿದ್ದಾರೆ. ಕಟ್ಟಡದಲ್ಲಿ ತಮ್ಮ ಮನೆಯ ವಸ್ತುಗಳನ್ನು ದಾಸ್ತಾನು ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಕಾಂಚಿ ನಗರದಲ್ಲಿರುವ ಸಮುದಾಯ ಭವನವು ಶಿಥಿಲವಾಗುತ್ತಿದೆ.

ಸರಕಾರ ಲಕ್ಷಾಂತರ ರೂ. ವ್ಯಯಿಸಿ ನಿರ್ಮಿಸಿದ ಸಮುದಾಯ ಭವನ ನಿರ್ವಹಣೆ ಕೊರತೆಯಿಂದ ಹಾಳಾಗುತ್ತಿದೆ. ಯಾವುದೇ ಕಟ್ಟಡವಾದರೂ ಉಪಯೋಗದಲ್ಲಿದ್ದರೆ ಮಾತ್ರ ಸುಸ್ಥಿಯಲ್ಲಿರುತ್ತದೆ. ಸರಕಾರಿ ಆಸ್ತಿಯೂ ನಮ್ಮ ಆಸ್ತಿ ಎಂದು ರಕ್ಷಣೆ ಮಾಡುವ ಕರ್ತವ್ಯ ಸಾರ್ವಜನಿಕರದ್ದಾಗಿದೆ. ಭವನದಲ್ಲಿ ಮೂಲ ಸೌಕರ್ಯ ಕೊರತೆ ಇದ್ದು, ಸಾರ್ವಜನಿಕರು ಬಳಕೆ ಮಾಡುತ್ತಿಲ್ಲ. -ತ್ರಿಮೂರ್ತಿ ಹೊಸ್ತೋಟ, ಗ್ರಾಪಂ ಸದಸ್ಯ, ಮೆಣಸೆ

ಸಮುದಾಯ ಭವನವನ್ನು ವಿವಿಧ ಯೋಜನೆಯಡಿ ನಿರ್ಮಿಸಲಾಗಿದ್ದು, ಗ್ರಾಪಂಗೆ ನಿರ್ವಹಣೆ ಜವಾಬ್ದಾರಿ ನೀಡಲಾಗಿದೆ. ಸಾರ್ವಜನಿಕ ಆಸ್ತಿಯಾಗಿರುವ ಸಮುದಾಯ ಭವನಗಳನ್ನು ಕಾಪಾಡುವಲ್ಲಿ ಸಾರ್ವಜನಿಕರ ಪಾತ್ರವೂ ಮುಖ್ಯವಾಗಿದೆ. ಸಂಘ-ಸಂಸ್ಥೆಯ ಸಭೆ ನಡೆಸುವುದು, ತಿಂಗಳ ಸಭೆ ನಡೆಸಲು ಬಳಸಬೇಕು. ಭವನದ ಸುತ್ತಮುತ್ತ ಸ್ವಚ್ಛವಾಗಿಡಬೇಕು. ಗ್ರಾಪಂಗೆ ಭವನವನ್ನು ಸುಸ್ಥಿತಿಯಲ್ಲಿಡುವಂತೆ ನಿರ್ದೇಶನ ನೀಡಲಾಗಿದೆ. ಜಯರಾಂ, ತಾಪಂ ಇಒ, ಶೃಂಗೇರಿ

ಟಾಪ್ ನ್ಯೂಸ್

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್‌ಡಿಡಿ

9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್‌ಡಿಡಿ

ಕ್ರೀಡೆಯೊಂದಿಗೆ ಪಿಯುಸಿಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿನಿ ಡಿ.ಬಿ.ಶಬರಿ

ಕ್ರೀಡೆಯೊಂದಿಗೆ ಪಿಯುಸಿಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿನಿ ಡಿ.ಬಿ.ಶಬರಿ

7-

HD Devegowda: ರಾಮೇಶ್ವರ ದೇವರ ದರ್ಶನ ಪಡೆದ ಮಾಜಿ ಪ್ರಧಾನಿ

ಸಜ್ಜನ ವ್ಯಕ್ತಿತ್ವದ ಜಯಪ್ರಕಾಶ್‌ ಹೆಗ್ಡೆ ಗೆಲ್ಲಿಸಿ: ಶಾಸಕ ಎಚ್‌.ಡಿ.ತಮ್ಮಯ್ಯ

ಸಜ್ಜನ ವ್ಯಕ್ತಿತ್ವದ ಜಯಪ್ರಕಾಶ್‌ ಹೆಗ್ಡೆ ಗೆಲ್ಲಿಸಿ: ಶಾಸಕ ಎಚ್‌.ಡಿ.ತಮ್ಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.