ಭೂ ಸಂಪತ್ತು ರಕ್ಷಣೆ ಎಲ್ಲರ ಹೊಣೆ

ಪರಿಸರ ಸಂರಕ್ಷಣೆ ಕಾನೂನು ಸುಪರ್ದಿಗಷ್ಟೇ ಸೀಮಿತವಲ್ಲ: ನ್ಯಾ ಎ.ಎಸ್. ಸೋಮ

Team Udayavani, Apr 28, 2022, 4:49 PM IST

protection

ಚಿಕ್ಕಮಗಳೂರು: ಅರಣ್ಯ ಹಾಗೂ ಜಲಸಂಪತ್ತು ನಶಿಸುತ್ತಿದ್ದು, ಮುಂದಿನ ಪೀಳಿಗೆ ಹಿತದೃಷ್ಟಿ ಯಿಂದ ಭೂ ಸಂಪತ್ತು ರಕ್ಷಣೆ ಮಾಡುವುದು ನಮ್ಮೆಲ್ಲರ ಹೊಣೆ. ಅದನ್ನು ಅರಿತು ಪರಿಸರ ಸಂರಕ್ಷಣೆಗೆ ಮುಂದಾಗಬೇಕು ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎ.ಎಸ್. ಸೋಮ ತಿಳಿಸಿದರು.

ತಾಲೂಕು ಮತ್ತಾವರ ಗ್ರಾಮದ ಮಾಹಿತಿ ಕೇಂದ್ರದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅರಣ್ಯ ಇಲಾಖೆ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿ ಸಂಯುಕ್ತಾಶ್ರಯದಲ್ಲಿ ವಿಶ್ವ ಭೂ ದಿನದ ಅಂಗವಾಗಿ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ನ್ಯಾಯಾಲಯಗಳು ಪರಿಸರ ಸಂರಕ್ಷಣೆಗೆ ಅನೇಕ ನಿರ್ದೇಶನಗಳನ್ನು ನೀಡಿದೆ. ಪರಿಸರ ಸಂರಕ್ಷಣೆ ಕೇವಲ ಕಾನೂನು ಸುಪರ್ದಿಗೆ ಮೀಸಲಿಡುವುದು ಮೂರ್ಖತನ. ಕಾನೂನು ಎಂಬುದು ಸಾಮಾನ್ಯ ಜ್ಞಾನವಾಗಿದ್ದು, ಪ್ರತಿಯೊಬ್ಬರು ಅರಿತು ಭೂ ದಿನವನ್ನು ಒಂದು ದಿನಕ್ಕೆ ಸೀಮಿತಗೊಳಿಸದೆ ಪ್ರತಿನಿತ್ಯ ಪರಿಸರ ಕಾಳಜಿ ಹೊಂದಬೇಕು ಎಂದರು.

ಮಾನವನಂತೆ ಸಕಲ ಜಿವರಾಶಿಗಳಿಗೂ ಪ್ರಕೃತಿಯಲ್ಲಿ ಜೀವಿಸುವ ಹಕ್ಕಿದೆ. ಸಂವಿಧಾನ ನೈಸರ್ಗಿಕ ಸಂಪನ್ಮೂಲಗಳ ರಕ್ಷಣೆ ಮೂಲಭೂತ ಕರ್ತವ್ಯ ಎಂದು ಪರಿಗಣಿಸಿದೆ. ಪರಿಸರಕ್ಕೆ ಮಾರಕ ವಾದ ವಸ್ತುಗಳನ್ನು ಬಳಸುವುದನ್ನು ಮಿತಗೊಳಿಸಿ ಪರಿಸರ ಸಂರಕ್ಷಿಸಬೇಕು ಎಂದು ಕರೆ ನೀಡಿದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಚ್‌.ಎಂ. ಸುಧಾಕರ್‌ ಮಾತನಾಡಿ, ಮಾನವ ಆಧುನಿಕ ಜೀವನದಲ್ಲಿ ಪರಿಸರವನ್ನು ಹಾನಿಗೊಳಿಸು ತ್ತಿರುವುದು ದುರದೃಷ್ಟಕರ. ಪ್ಲಾಸ್ಟಿಕ್‌ ಬಳಕೆ ಹೆಚ್ಚಾಗುತ್ತಿದು, ಪ್ಲಾಸ್ಟಿಕ್‌ ಬಳಕೆ ಮುಕ್ತ ಅರಿವು ಕಾರ್ಯಕ್ರಮಗಳು ಹೆಚ್ಚಾಗಿ ನಡೆಯಬೇಕು ಎಂದರು.

ವಕೀಲ ಎಸ್.ಎಸ್. ವೆಂಕಟೇಶ್‌ ಮಾತನಾಡಿ, ಮಾನವ ಪರಿಸರದಿಂದ ಹಲವು ಲಾಭಗಳನ್ನು ಪಡೆದುಕೊಂಡರೂ, ನಾನೇ ಸಾರ್ವಭೌಮ ಎಂಬ ತಪ್ಪು ಅರಿವು ಬೆಳೆಸಿಕೊಂಡಿದ್ದಾನೆ. ನಾವಿಲ್ಲದೇ ಪರಿಸರ ಇರಬಹುದು, ಪರಿಸರವಿಲ್ಲದೆ ನಾವಿರಲು ಸಾಧ್ಯವಿಲ್ಲ ಎಂದರು.

ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ರಾಜೇಶ್‌ ನಾಯ್ಕ ಅಧ್ಯಕ್ಷತೆ ವಹಿಸಿ ಮಾತನಾಡಿ, ಅರಣ್ಯ ಇಲಾಖೆ ವೈಜ್ಞಾನಿಕ ಮಾದರಿಗಳನ್ನು ಅನುಸರಿಸುತ್ತಿದ್ದು, ಪರಿಸರಕ್ಕೆ ಪೂರಕವಾದ ಸಸಿಗಳನ್ನು ನೆಡುವ ಕಾರ್ಯ ನಡೆಯುತ್ತಿದೆ. ಸತ್ತ ಕಾಡುಪ್ರಾಣಿಗಳನ್ನು ಸುಡದೆ ಸಹಜ ಸ್ಥಿತಿಯಲ್ಲಿ ಪರಭಕ್ಷಕ ಪ್ರಾಣಿ-ಪಕ್ಷಿಗಳ ಆಹಾರಕ್ಕಾಗಿ ಬಿಡಲಾಗುತ್ತಿದೆ ಎಂದರು. ಕಾರ್ಯಕ್ರಮದಲ್ಲಿ ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷ ಕೆ.ಬಿ.ನಂದೀಶ್, ವಲಯ ಅರಣ್ಯಾಧಿಕಾರಿ ಎಲ್‌. ಸ್ವಾತಿ, ಮಾಲಿನ್ಯ ನಿಯಂತ್ರಣ ಮಂಡಳಿ ಸಹಾಯಕ ಪರಿಸರಾಧಿಕಾರಿ ಎಸ್‌. ಆರ್.ಶ್ವೇತ ಇದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Chikkaballapur: ಡಾ.ಕೆ.ಸುಧಾಕರ್‌ಗೆ ಜೈ ಎಂದ ಎಂಟಿಬಿ!

Chikkaballapur: ಡಾ.ಕೆ.ಸುಧಾಕರ್‌ಗೆ ಜೈ ಎಂದ ಎಂಟಿಬಿ!

7-politics-1

Chikkamagaluru: ಮೊದಲ ದಿನವೇ ಅಸಮಾಧಾನ ಸ್ಪೋಟ ಎದುರಿಸಿದ ಕೈ ಅಭ್ಯರ್ಥಿ

6-ckm

Mudigere: ಅಕ್ರಮವಾಗಿ ನಾಡ ಬಂದೂಕು ಇಟ್ಟುಕೊಂಡಿದ್ದ ವ್ಯಕ್ತಿ ಬಂಧನ

Horanadu, ಕಳಸ ದೇವಸ್ಥಾನಗಳಿಗೆ ಭೇಟಿ ನೀಡಿದ ಬಿಎಸ್‌ವೈ ಕುಟುಂಬ

Horanadu, ಕಳಸ ದೇವಸ್ಥಾನಗಳಿಗೆ ಭೇಟಿ ನೀಡಿದ ಬಿಎಸ್‌ವೈ ಕುಟುಂಬ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.