ವಕೀಲರ ರಕ್ಷಣೆಗಾಗಿ ಕಾನೂನು ಜಾರಿ ಆಗ್ರಹ
Team Udayavani, Mar 4, 2021, 7:39 PM IST
ಕಡೂರು: ವಕೀಲರ ಮೇಲೆ ದೌರ್ಜನ್ಯಮತ್ತು ಹಲ್ಲೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ವಕೀಲರನ್ನು ರಕ್ಷಿಸುವ ಕಾನೂನು ಜಾರಿಗೊಳಿಸಬೇಕೆಂದು ಒತ್ತಾಯಿಸಿ ಪಟ್ಟಣದಲ್ಲಿ ವಕೀಲರು ಧರಣಿ ಆರಂಭಿಸಿದರು.
ಪಟ್ಟಣದ ನ್ಯಾಯಾಲಯದ ಮುಂಭಾಗದಲ್ಲಿ ಬುಧವಾರ ವಕೀಲರ ಸಂಘದ ನೂರಾರು ವಕೀಲರು ಸೇರಿ ಹಲ್ಲೆ ಮತ್ತು ಹತ್ಯೆ ಖಂಡಿಸಿ ಕೋವಿಡ್ -19ರ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಧರಣಿ ಆರಂಭಿಸಿದರು.
ಈ ಸಂದರ್ಭದಲ್ಲಿ ಹಿರಿಯ ವಕೀಲರು ಮಾತನಾಡಿ, ದೇಶದಲ್ಲಿ ನ್ಯಾಯದ ಪರವಾಗಿ ವಾದ ಮಾಡಿ, ತಮ್ಮ ಕಕ್ಷಿದಾರರಿಗೆ ನ್ಯಾಯ ದೊರಕಿಸುವ ಮೂಲಕ ಹೋರಾಟ ನಡೆಸುತ್ತಿರುವ ವಕೀಲರ ಮೇಲೆ ಹಲ್ಲೆಗಳು ನಡೆಯುತ್ತಿರುವುದು ಖಂಡನೀಯ ಎಂದರು.
ತೆಲಂಗಾಣ ರಾಜ್ಯದಲ್ಲಿ ವಕೀಲರಾದ ಗತ್ತು ವಾಮನ್ರಾವ್ ಮತ್ತು ಪಿ.ವಿ. ನಾಗಮಣಿ ಅವರ ಹತ್ಯೆ ಮತ್ತುರಾಜ್ಯದ ವಿವಿಧೆಡೆ ವಕೀಲರ ಮೇಲಿನ ಹಲ್ಲೆಯನ್ನು ವಕೀಲರ ಸಮುದಾಯ ಸಾಮೂಹಿಕವಾಗಿ ಖಂಡಿಸುತ್ತದೆ. ಜೊತೆಗೆ ಪೊಲೀಸರು ಆರೋಪಿಗಳನ್ನು ಕೂಡಲೇಬಂಧಿಸಿ ಕಾನೂನು ರೀತಿಯಲ್ಲಿ ಅವರಿಗೆ ಶಿಕ್ಷೆ ನೀಡಬೇಕೆಂದು ಒತ್ತಾಯಿಸಿದರು. ವೈದ್ಯರ ಮೇಲೆ ಹಲ್ಲೆ ನಡೆದರೆ ಕಾನೂನಿನಲ್ಲಿ ಕೂಡಲೇ ಶಿಕ್ಷೆಗೆ ಅವಕಾಶವಿದೆ. ಅದೇ ರೀತಿ ವಕೀಲರ ಮೇಲೆ ನಡೆಯುವ ಹಲ್ಲೆ, ಹತ್ಯೆ ಮತ್ತು ದೌರ್ಜನ್ಯಗಳಿಗೆನೂತನ ಕಾನೂನು ರಚಿಸಿ ರಕ್ಷಣೆಗೆ ಮುಂದಾಗಬೇಕು ಎಂದು ಕಡೂರು ವಕೀಲರ ಸಂಘ ಆಗ್ರಹಿಸುತ್ತದೆ ಎಂದರು.
ವಕೀಲರ ಸಂಘದ ಅಧ್ಯಕ್ಷ ಎ.ಎಸ್ .ನರಸಿಂಹ ಭಾರತಿ, ಕಾರ್ಯದರ್ಶಿ ಕೆ.ಎನ್. ರಾಮಸ್ವಾಮಿ, ಉಪಾಧ್ಯಕ್ಷ ಕೆ.ಅನಿಲ್ಕುಮಾರ್, ಹಿರಿಯ ವಕೀಲರಾದ ಕೆ.ಎನ್.ರಾಜಣ್ಣ, ತಿಪ್ಪೇಶ್ ಸಿ.ಎಲ್.ದೇವರಾಜ್ ಹರೀಶ್, ಪ್ರಕಾಶ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
MUST WATCH
ಹೊಸ ಸೇರ್ಪಡೆ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ