ಕಲೆಗೆ ಗೌರವ ಕೊಡುವುದನ್ನು ಕಲಿಯಿರಿ


Team Udayavani, Jan 28, 2019, 9:52 AM IST

chikk-2.jpg

ಚಿಕ್ಕಮಗಳೂರು: ಕಲೆಯನ್ನು ಗೌರವಿಸುವ ಸಮಾಜ ಆರೋಗ್ಯ ಪೂರ್ಣವಾಗಿರುತ್ತದೆ ಎಂದು ಖ್ಯಾತ ಸಂಗೀತ ನಿರ್ದೇಶಕ ಹಾಗೂ ಗಾಯಕ ಉಪಾಸನಾ ಮೋಹನ್‌ ಅಭಿಪ್ರಾಯಪಟ್ಟರು.

ಮಲ್ಲಿಗೆ ಸುಗಮ ಸಂಗೀತ ಟ್ರಸ್ಟ್‌ ಪ್ರಥಮ ವಾರ್ಷಿಕೋತ್ಸವದ ಅಂಗವಾಗಿ ನಗರದ ಶ್ರೀ ಶಂಕರಮಠ ಪ್ರವಚನಮಂದಿರದಲ್ಲಿ ಶನಿವಾರ ರಾತ್ರಿ ಆಯೋಜಿಸಿದ್ದ ವರ್ಷ ಮಲ್ಲಿಗೆ ಸಮಾರಂಭದಲ್ಲಿ ನೀಡಲಾದ ಮಲ್ಲಿಗೆ ಪುರಸ್ಕಾರ ಸ್ವೀಕರಿಸಿ ಅವರು ಮಾತನಾಡಿದರು.

ಕಲೆಗೆ ಗೌರವ ಕೊಡುವುದನ್ನು ಎಲ್ಲರೂ ಕಲಿಯಬೇಕು. ಕಲಾವಿದ ತನ್ನ ಜೀವನವನ್ನೆ ತನ್ನಿಷ್ಟದ ಕಲೆಗಾಗಿ ಸಮರ್ಪಿಸಿರುತ್ತಾನೆ. ಸಮಾಜ ಆ ಕಲೆಯನ್ನು ಆಸ್ವಾದಿಸಿ ಸಂತೋಷಪಟ್ಟಿರುತ್ತದೆ. ತಮಗಿಂದು ಸಂದಿರುವ ಪ್ರಶಸ್ತಿಯನ್ನು ಸುಗಮ ಸಂಗೀತಕ್ಕೆ ಸಮರ್ಪಿಸುವುದಾಗಿ ನುಡಿದರು.

ಮೈಸೂರು ಮಲ್ಲಿಗೆ ಖ್ಯಾತಿಯ ಕೆ.ಎಸ್‌.ನರಸಿಂಹಸ್ವಾಮಿ ಅವರ ಹುಟ್ಟಿದ ಈ ದಿನವೇ ನೀಡಿರುವ ಮಲ್ಲಿಗೆ ಪುರಸ್ಕಾರ ಸುಗಮ ಸಂಗೀತಕ್ಕೆ ಗರಿ ಮೂಡಿಸಿದೆ. ತಮ್ಮ ಸಂಗೀತ ಗುರು ಜಿ.ವಿ.ಅತ್ರಿ ನೀಡಿದ ಭಿಕ್ಷೆ. ಅವರಿಂದ ಕಲಿತ ತಾವೂ ಸೇರಿದಂತೆ ಏಳೆಂಟು ತಂಡಗಳ ಸಂಗೀತದಿಂದ ಬೆಂಗಳೂರು ಮಹಾನಗರ ಹಸಿರಾಗಿದೆ. ಅತ್ರಿ ಅವರು ಎಲ್ಲೆಡೆ ಹಾಡುತ್ತಿದ್ದ ಗಂಗಾವತರಣ ಗೀತೆ ಹಾಡುವ ಮೂಲಕ ಗುರುವಿಗೆ ಗೌರವ ಸಲ್ಲಿಸಿದರು.

ಶಿಕ್ಷಣತಜ್ಞ ಎಂ.ಎನ್‌.ಷಡಕ್ಷರಿ ಸಮಾರಂಭದ ಅಧ್ಯಕ್ಷತೆವಹಿಸಿ ಮಾತನಾಡಿ, ನಾಗರಿಕತೆಯ ಉತ್ತುಂಗಕ್ಕೆ ಲಲಿತ ಕಲೆಗಳ ಕೊಡುಗೆ ಮಹತ್ವದ್ದು. ಬೇಸರವನ್ನು ಹೋಗಲಾಡಿಸಿ ಸಂತೋಷವನ್ನು ಹೊಮ್ಮಿಸುವ ಶಕ್ತಿ ಸಂಗೀತಕ್ಕಿದೆ. ಮೋಹನ್‌ರಿಂದ ಮಲ್ಲಿಗೆ ಪುರಸ್ಕಾರಕ್ಕೆ ಗೌರವ ಬಂದಿದೆ ಎಂದರು.

ಕಲ್ಕಟ್ಟೆ ಪುಸ್ತಕಮನೆಯ ಅಧ್ಯಕ್ಷ ಎಚ್.ಎಂ. ನಾಗರಾಜರಾವ್‌ ಅಭಿನಂದಿಸಿ ಮಾತನಾಡಿ, ಒಳ್ಳೆಯ ಮನಸ್ಸಿನ ಕಲಾವಿದರಲ್ಲಿ ಉಪಾಸನಾ ಮೋಹನ್‌ ಅಗ್ರಸ್ಥಾನದಲ್ಲಿ ನಿಲ್ಲುತ್ತಾರೆ. ಆಡಿಯೋ ಮತ್ತು ವಿಡಿಯೋದಲ್ಲಿ ಡಿಪ್ಲೊಮೋ ಪಡೆದು ಶಾಸ್ತ್ರಿಯ ಸಂಗೀತ, ಹಿಂದೂಸ್ತಾನಿ ಮತ್ತು ಸುಗಮ ಸಂಗೀತವನ್ನು ಅಭ್ಯಾಸ ಮಾಡಿದ್ದು ಸಂಗೀತ ಶಾಲೆಯ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸಿದವರು. ರಾಜ್ಯಾದ್ಯಂತ 70ಕ್ಕೂ ಹೆಚ್ಚು ಸಂಗೀತ ಶಿಬಿರಗಳನ್ನು ನಡೆಸಿದ್ದು, 40 ಧ್ವನಿ ಸುರುಳಿಗಳನ್ನು ಹೊರತಂದಿದ್ದಾರೆ. ಹಸಿರು ರಿಬ್ಬನ್‌ ಸೇರಿದಂತೆ ಯಶಸ್ವಿ ಚಲನಚಿತ್ರ ಸಂಗೀತ ನಿರ್ದೇಶಕರೂ ಹೌದು. ವರ್ಷದ ಗಾಯಕ ಸೇರಿದಂತೆ ಹತ್ತಾರು ಪ್ರಶಸ್ತಿಗಳಿಗೆ ಭಾಜನರಾಗಿರುವ ಮೋಹನ್‌ ಬಹುಮುಖ ಪ್ರತಿಭೆಯ ಗಾಯಕ ಎಂದು ಬಣ್ಣಿಸಿದರು.

ಕಾರ್ಯಕ್ರಮವನ್ನು ಪಲ್ಲವಿ ಸಿ.ಟಿ.ರವಿ ಉದ್ಘಾಟಿಸಿದರು. ಜಿ.ಪಂ. ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಜಸಿಂತಾ ಅನಿಲ್‌, ಯುರೇಕಾ ಅಕಾಡೆಮಿ ಪ್ರಾಂಶುಪಾಲ ದೀಪಕ ದೊಡ್ಡಯ್ಯ, ಪಾವನಿ ವೀಣಾ ಶಾಲೆಯ ಪ್ರಧಾನಗುರು ಮಾಲಿನಿ ರಮೇಶ್‌, ಬೀರೂರು ಮಲ್ಲಿಗೆಬಳಗದ ಅಧ್ಯಕ್ಷೆ ಸ್ವರ್ಣ ಮಾತನಾಡಿದರು.

ಮಲ್ಲಿಗೆ ಸುಗಮ ಸಂಗೀತ ಟ್ರಸ್ಟ್‌ ಅಧ್ಯಕ್ಷ ಮಲ್ಲಿಗೆ ಸುಧೀರ್‌ ಸ್ವಾಗತಿಸಿ, ಗೌರಿ ಮತ್ತು ನಾಗರಾಜರಾವ್‌ ನಿರೂಪಿಸಿ, ರೇಖಾ ನಾಗರಾಜ ರಾವ್‌ ವಂದಿಸಿದರು. ಗಾನಮಲ್ಲಿಗೆ-13 ಅಂಗವಾಗಿ ಉಪಾಸನಾ ಮೋಹನ್‌, ಮಲ್ಲಿಗೆ ಸುಧೀರ್‌, ನಾಗರಾಜರಾವ್‌ ಕಲ್ಕಟ್ಟೆ, ಅಭಿಷೇಕ್‌ ಮಲ್ಲಿಗೆ, ವಂದಿತಾ ಯಾಜಿ ಗೀತನಗಾಯನ ಗಮನ ಸೆಳೆಯಿತು.

ಟಾಪ್ ನ್ಯೂಸ್

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.