ಬ್ಯಾಂಕಿಂಗ್‌ ಸೌಲಭ್ಯ ಸದ್ಬಳಕೆಯಾಗಲಿ


Team Udayavani, Nov 3, 2019, 2:23 PM IST

Udayavani Kannada Newspaper

ತರೀಕೆರೆ: ಇಂದಿನ ದಿನಗಳಲ್ಲಿ ಬ್ಯಾಂಕಿಂಗ್‌ ಕ್ಷೇತ್ರ ಅಗಾಧವಾಗಿ ವಿಸ್ತಾರವಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಾಲಮನ್ನಾ ಯೋಜನೆಯೂ ಸೇರಿದಂತೆ ಅನೇಕ ಸೌಲಭ್ಯಗಳನ್ನು ಸಾರ್ವಜನಿಕರಿಗೆ ನೀಡುತ್ತಿದೆ ಎಂದು ಲಿಂಗದಹಳ್ಳಿ ಇಂಡಿಯನ್‌ ಓವರ್‌ಸೀಸ್‌ ಬ್ಯಾಂಕ್‌ ವ್ಯವಸ್ಥಾಪಕ ಜಿತೇಂದ್ರಸಿಂಗ್‌ ಹೇಳಿದರು.

ತಿಗಡ ಗ್ರಾಪಂ ಆವರಣದಲ್ಲಿ ನಡೆದ ಭ್ರಷ್ಪಾಚಾರ ನಿರ್ಮೂಲನೆ ಜನಜಾಗೃತಿ ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಯೋಜನೆ ಸದುಪಯೋಗ ಪಡೆದುಕೊಳ್ಳುವ ಮೂಲಕ ಗ್ರಾಹಕರು ತಮ್ಮ ಜೀವನ ಶೈಲಿಯನ್ನೇ ಬದಲಾಯಿಸಿಕೊಳ್ಳಬಹುದು ಎಂದರು. ಸರ್ಕಾರ ಸಾರ್ವಜನಿಕರ ಜೀವನಮಟ್ಟ ಸುಧಾರಿಸುವ ಸಲುವಾಗಿ ಸರ್ಕಾರದ ವಿವಿಧ ಇಲಾಖೆಯ ಮೂಲಕ ರೈತರು ವ್ಯಾಪಾರಸ್ಥರು ವಿದ್ಯಾರ್ಥಿಗಳು ಮುಂತಾದವರಿಗೆ ಸಾಲದ ಜತೆಗೆ ಸಹಾಯಧನವನ್ನೂ ಬ್ಯಾಂಕ್‌ ನೀಡುತ್ತಿದೆ. ಬ್ಯಾಂಕ್‌ಗಳು ನೀಡುವ ಸೌಲಭ್ಯ ಪಡೆಯಲು ಗ್ರಾಹಕರು ಮಧ್ಯವರ್ತಿಗಳ ಮೂಲಕ ಪ್ರಯತ್ನಿಸಬಾರದು. ಬ್ಯಾಂಕಿನ ಅಧಿಕಾರಿಗಳನ್ನು ಸಂಪರ್ಕಿಸಿ ಅಗತ್ಯ ಸೌಲಭ್ಯ ಪಡೆದುಕೊಳ್ಳಬೇಕು. ಲಂಚ ನೀಡುವುದು ಪಡೆದುಕೊಳ್ಳುವಷ್ಟೇ ಶಿಕ್ಷಾರ್ಹ ಅಪರಾಧವಾಗಿದೆ ಎಂದರು.

ಬ್ಯಾಂಕ್‌ ಅಧಿಕಾರಿ ಸಿದ್ಧಾರ್ಥ ಮಾತನಾಡಿ, ಕೇಂದ್ರ ಸರ್ಕಾರ ಗ್ರಾಮೀಣ ಜನರ ಅನುಕೂಲಕ್ಕಾಗಿ ಪ್ರಧಾನ ಮಂತ್ರಿ ಸ್ವಾಸ್ಥ  ಬಿಮಾ ಯೋಜನೆ ಅಟಲ್‌ ಪೆನ್ಷನ್‌ ಯೋಜನೆ ಮುಂತಾದವುಗಳನ್ನು ಜಾರಿಗೆ ತಂದಿದ್ದು, ಕನಿಷ್ಟ ಹಣ ಹೂಡಿಕೆಯಿಂದ ಗರಿಷ್ಠ ಅನುಕೂಲ ಪಡೆದುಕೊಳ್ಳಬಹುದು. ಇಂಡಿನ್‌ ಓವರ್‌ಸೀಸ್‌ ಬ್ಯಾಂಕ್‌ ನಲ್ಲಿ ಶೂನ್ಯ ದರದಲ್ಲಿ ಖಾತೆಗಳನ್ನು ತೆರೆಯಬಹುದಾಗಿದ್ದು, ಎಟಿಎಂ ಮತ್ತು ರುಪೇ ಕಾರ್ಡ್‌ಗಳ ಸೌಲಭ್ಯ ಪಡೆಯಬಹುದು. ದೂರವಾಣಿ ಮೂಲಕ ಕರೆ ಮಾಡಿ ಬ್ಯಾಂಕ್‌ನಿಂದ ಕರೆ ಮಾಡಲಾಗುತ್ತಿದೆ ಎಂದು ಹೇಳಿ, ಖಾತೆಯ ವಿವರಗಳನ್ನು ನೀಡುವಂತೆ ತಿಳಿಸಿದರೆ ಯಾವುದೇ ಕಾರಣಕ್ಕೂ ನೀಡಬಾರದು. ವಿವರಗಳನ್ನು ನೀಡಿದಲ್ಲಿ ನಿಮ್ಮ ಖಾತೆಯಲ್ಲಿ ಇದ್ದ ಹಣವನ್ನು ಕೆಲ ಕ್ಷಣಗಳಲ್ಲೇ ಖಾಲಿ ಮಾಡುತ್ತಾರೆ ಎಂದರು.

ತಿಗಡ ಗ್ರಾಪಂ ಅಧ್ಯಕ್ಷೆ ಅಮುದ ಉಪಾಧ್ಯಕ್ಷ ಕೆ.ಮೂರ್ತಪ್ಪ, ಮಾಜಿ ಅಧ್ಯಕ್ಷ ಪಿ.ಎ.ಮನೋಜ್‌ ಕುಮಾರ್‌, ಸದಸ್ಯರಾದ ರಮೇಶ್‌ ನಾಯ್ಕ, ಕಾರ್ಯದರ್ಶಿ ಬಸವರಾಜಪ್ಪ, ಅಂಗನವಾಡಿ ಕಾರ್ಯಕರ್ತೆಯರು ಆಶಾ ಕಾರ್ಯಕರ್ತೆಯರು ವಿವಿಧ ಗ್ರಾಮಗಳ ಮುಖಂಡರು, ಇತರರು ಹಾಜರಿದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.