ದೇಗುಲ ಸಾಕ್ಷಿಪ್ರಜ್ಞೆ ಎಚ್ಚರಿಸುವ ತಾಣವಾಗಲಿ


Team Udayavani, Feb 11, 2019, 9:26 AM IST

chikk-2.jpg

ಚಿಕ್ಕಮಗಳೂರು: ಸಾತ್ವಿಕ ಪ್ರಜೆಗಳನ್ನು ತಯಾರಿಸುವ ಪ್ರಯೋಗಶಾಲೆಗಳಾಗಿ ದೇವಸ್ಥಾನಗಳು ಕಾರ್ಯನಿರ್ವಹಿಸಬೇಕು. ಏಕಾಗ್ರತೆ ಮತ್ತು ಪ್ರಶಾಂತತೆಯ ತಾಣಗಳಾದ ದೇಗುಲಗಳು ದೇವರ ಇರುವಿಕೆಗಿಂತ ಸಾಕ್ಷಿಪ್ರಜ್ಞೆ ಎಚ್ಚರಿಸುವ ತಾಣಗಳಾಗಬೇಕೆಂದು ಸಾಹಿತಿ ಚಟ್ನಳ್ಳಿ ಮಹೇಶ್‌ ಹೇಳಿದರು.

ಬ್ಯಾಗದಹಳ್ಳಿ ಗ್ರಾಮದ ಉದ್ಭವರಾಮೇಶ್ವರಸ್ವಾಮಿ ದೇವಸ್ಥಾನ ಜೀರ್ಣೋದ್ಧಾರ ಪ್ರವೇಶೋತ್ಸವದ ಅಂಗವಾಗಿ ಆಯೋಜಿಸಿದ್ದ ಧರ್ಮ ಸಮಾರಂಭದಲ್ಲಿ ಅವರು ಪ್ರಧಾನ ಉಪನ್ಯಾಸ ನೀಡಿದರು.

ಕಲ್ಪನೆ ನಿರೀಕ್ಷೆಗಳಿಗಿಂತ ಮೀರಿ ವಿಜ್ಞಾನ ಬೆಳೆದಿದೆ. ಆದರೂ ವಿಜ್ಞಾನದಿಂದಲೇ ಎಲ್ಲ ಪ್ರಶ್ನೆಗಳಿಗೆ ಉತ್ತರ ಸಿಕ್ಕಿಲ್ಲ. ಸಂಸ್ಕೃತಿ, ಸಂಪ್ರದಾಯ, ಆಧ್ಯಾತ್ಮಕತೆಯಿಂದ ಶಾಂತಿ-ನೆಮ್ಮದಿಯನ್ನು ನಮ್ಮ ಹಿರಿಯರು ಕಂಡುಕೊಂಡಿದ್ದರು. ಭಕ್ತಿ ಭ್ರಮೆ ಅಲ್ಲ. ದೃಢವಾದ ನಂಬಿಕೆಯೆ ಭಕ್ತಿ. ದೇವಾಲಯದ ಒಳಗಿನ ವಿಗ್ರಹದ ಶಕ್ತಿ-ಎದುರು ಕುಳಿತ ಕುಬ್ಜಭಕ್ತನ ನಡುವಿನ ಭಕ್ತಿ ಮಾತಿಗೆ ಸಿಲುಕಿದೆ ಎಂದರು.

ನೈಜವಾದ ಪ್ರಾರ್ಥನೆ ದೇವರಿಗೆ ತಲುಪುತ್ತದೆ. ಅಂತರಂಗದ ಪ್ರೀತಿಗೆ ದೈವಸಾಕ್ಷಾತ್ಕಾರದ ಶಕ್ತಿ ಇದೆ. ನೇರ, ನಿಖರ, ಪ್ರಖರವಾದ ಭಕ್ತಿಯ ಪ್ರಾರ್ಥನೆಯಿಂದ ದೈವಶಕ್ತಿಯನ್ನು ವಶಮಾಡಿಕೊಳ್ಳಬಹುದು. ಶ್ರದ್ಧೆ ಮತ್ತು ಭಕ್ತಿ ಅಗತ್ಯ. ಆದರೆ ಹಠ ಮತ್ತು ದ್ವೇಷ ಬೇಡ. ದೇವಸ್ಥಾನದಲ್ಲಿ ಭಕ್ತಿಯ ಸಾಕ್ಷಾತ್ಕಾರವಾಗುತ್ತದೆ. ಒಳ್ಳೆಯ ವಿಚಾರಗಳಷ್ಟೇ ಇಲ್ಲಿ ಮೂಡಲು ಸಾಧ್ಯ ಎಂದರು.

ದಾನಿ ಗೌರಮ್ಮ ಬಸವೇಗೌಡ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ದೇವರ ಮುಂದೆ ಸ್ವಾರ್ಥದ ಬೇಡಿಕೆಗಳನ್ನು ಇಡುವ ಬದಲು ಸಮಾಜದ ಒಳಿತಿಗೆ ಪ್ರಾರ್ಥಿಸಿದರೆ ಸಾಕಾರವಾಗುತ್ತದೆ. ದೇವರಿಗೂ ಸಹನೀಯವಾಗುತ್ತದೆ. ಜನಸಾಮಾನ್ಯರ ಭಕ್ತಿ ನಂಬಿಕೆಗಳಿಗೆ ದೇವರು, ದೇವಸ್ಥಾನಗಳ ಮೂಲಕ ಭದ್ರಬುನಾದಿ ಹಿರಿಯರು ಹಾಕಿಕೊಟ್ಟಿದ್ದಾರೆ. ಕಷ್ಟನಷ್ಟಗಳನ್ನು ಸಹಿಸಿ ಬಾಳುವ ಶಕ್ತಿ ಭಗವಂತ ಕರುಣಿಸಬೇಕು. ಮಳೆ, ಬೆಳೆ ಚೆನ್ನಾಗಿ ಆಗಿ ಉತ್ತಮ ಬೆಲೆಯೂ ದೊರೆತು ರೈತರ ಬಾಳು ಹಸನಾಗಬೇಕು. ಮೂರುದಿನಗಳ ಪ್ರವೇಶೋತ್ಸವ ಧಾರ್ಮಿಕ ಕಾರ್ಯಕ್ರಮಗಳು ದೇವರಿಗೂ ಪ್ರಿಯವಾಗಿ ಮಳೆ ಸುರಿದಿದೆ ಎಂದರು.

ಶ್ರೀ ಉದ್ಭವ ರಾಮೇಶ್ವರ ದೇವಸ್ಥಾನ ಜೀರ್ಣೋದ್ಧಾರ ಸೇವಾ ಸಮಿತಿ ಅಧ್ಯಕ್ಷ ಎ.ಬಿ.ಸುದರ್ಶನ್‌ ಸಮಾರಂಭ ಉದ್ಘಾಟಿಸಿದರು.
ಹುಲಿಕೆರೆ ದೊಡ್ಡಮಠದ ಶ್ರೀ ವಿರೂಪಾಕ್ಷಲಿಂಗಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.
ಕಾಫಿಮಂಡಳಿ ಮಾಜಿಸದಸ್ಯ ಕೆ.ಕೆ.ಮನುಕುಮಾರ್‌ ಮತ್ತು ಬ್ಯಾಗದಹಳ್ಳಿ ಗ್ರಾ.ಪಂ.ಸದಸ್ಯ ಹಾಲೇಶ್‌ ಮಾತನಾಡಿದರು.
ಕಾಫಿ ಬೆಳೆಗಾರ ಎ.ಬಿ.ರವಿಶಂಕರ್‌, ಜಿ.ಪಂ.ಸದಸ್ಯ ಸೋಮಶೇಖರ, ಅಲ್ಲಂಪುರ ಗ್ರಾ.ಪಂ.ಅಧ್ಯಕ್ಷೆ ಗಾಯತ್ರಿ, ಟಿಪಿಎಸ್‌ ಸದಸ್ಯೆ ದಾಕ್ಷಾಯಣಿ, ಬ್ಯಾಗದಹಳ್ಳಿ ಗ್ರಾ.ಪಂ.ಸದಸ್ಯೆ ಸಿ.ಜೆ.ಲೀಲಾ ಪರಮೇಶ್‌, ಸ್ವಸಹಾಯ ಸಂಘದ ಪುಷ್ಪಾ, ಜೀರ್ಣೋದ್ಧಾರ ಸಮಿತಿಯ ಸ್ವಾಮಿ ಮತ್ತಿತರರು ಮುಖ್ಯಅತಿಥಿಗಳಾಗಿದ್ದರು.

ಭಗವತ್‌ ಕೃಪೆಗೆ ಭಕ್ತಿ ಮುಖ್ಯ ಕಾರಣ. ನಿರ್ಮಲವಾದ ಮನಸ್ಸಿನಿಂದ ನೆನೆಸಿದರೆ ಭಗವಂತನಿಗೆ ತಲುಪುತ್ತದೆ. ನಿತ್ಯ, ನಿರಂತರ ಪೂಜೆಯ ಜೊತೆಗೆ ವಾರಕ್ಕೊಮ್ಮೆಯಾದರೂ ಭಜನೆ, ಸತ್ಸಂಗಗಳು ನಡೆಯಬೇಕು. ಸಂಸ್ಕಾರದಿಂದ ಪದಾರ್ಥ ಪ್ರಸಾದವಾಗುತ್ತದೆ. ಹತ್ತಿ ಬಟ್ಟೆಯಾಗುತ್ತದೆ. ಅಕ್ಕಿ ಅಕ್ಷತೆ ಎನಿಸಿಕೊಳ್ಳುತ್ತದೆ. ಮಾತು ಮಂತ್ರವಾಗುತ್ತದೆ. ದೇವಸ್ಥಾನಗಳು ಸಂಪ್ರದಾಯ -ಸಂಸ್ಕೃತಿಗಳನ್ನು ಪೋಷಿಸುವ ತಾಣಗಳಾಗಬೇಕು
• ಹುಲಿಕೆರೆ ದೊಡ್ಡಮಠದ ಶ್ರೀ ವಿರೂಪಾಕ್ಷಲಿಂಗಶಿವಾಚಾರ್ಯ ಸ್ವಾಮೀಜಿ

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಉಡುಪಿಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Chikkamagaluru; ದೇವೇಗೌಡರು ಆಕಸ್ಮಿಕವಾಗಿ ಪ್ರಧಾನಿಯಾಗಿದ್ದು…: ಸಿಎಂ ಸಿದ್ದರಾಮಯ್ಯ

Chikkamagaluru; ದೇವೇಗೌಡರು ಆಕಸ್ಮಿಕವಾಗಿ ಪ್ರಧಾನಿಯಾಗಿದ್ದು…: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.