ಹಸುವಿನ ಜೀವ ಉಳಿಸಿದ ಜಾನುವಾರು ಅಧಿಕಾರಿ
Team Udayavani, Aug 14, 2021, 5:51 PM IST
ಕೊಟ್ಟಿಗೆಹಾರ: ಮಾಸ್ತಿಕಟ್ಟೆಯ ಬಿ.ಎಂ. ರಮೇಶ್ ಎಂಬುವವರು ಸಾಕಿದ್ದ ಹಸುವಿನ ಹೊಟ್ಟೆಯಲ್ಲಿ ಕರು ತಿರುಗಿಕೊಂಡಿದ್ದ ಪರಿಣಾಮ
ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದ್ದ ಹಸುವಿನ ಹೊಟ್ಟೆಯಿಂದ ಕರುವನ್ನು ಹೊರ ತೆಗೆಯುವ ಮೂಲಕ ಜಾನುವಾರು ಅಧಿಕಾರಿ
ಅಜೀಜ್ ಅಹಮ್ಮದ್ ಹಸುವಿನ ಜೀವ ಉಳಿಸಿದ್ದಾರೆ.
ಮಾಸ್ತಿಕಟ್ಟೆಯ ಬಿ.ಎಂ. ರಮೇಶ್ ಅವರ ಹಸುವೊಂದು ಹೊಟ್ಟೆಯಲ್ಲಿ ಕರು ತಿರುಗಿ ಕೊಂಡಿದ್ದ ಪರಿಣಾಮ ಕರು ಹಾಕಲಾರದೇ ಪರದಾಡಿದ್ದು ಕೂಡಲೇ ರಮೇಶ್ ಅವರು ಪಶುವೈದ್ಯ ಆಸ್ಪತ್ರೆಯ ಜಾನುವಾರು ಅಧಿಕಾರಿ ಅಜೀಜ್ ಅಹಮ್ಮದ್ ಅವರಿಗೆ ಮಾಹಿತಿ ನೀಡಿದ್ದಾರೆ. ಅಜೀಜ್ ಅಹಮದ್ ಅವರು ಹಿರಿಯ ಪಶು ವೈದ್ಯಕೀಯ ಪರೀಕ್ಷಕರಾದ ಬಸವರಾಜ ಕೋಟಿ ಅವರೊಂದಿಗೆ ಸ್ಥಳಕ್ಕೆ ಆಗಮಿಸಿದ್ದು ಸ್ಥಳೀಯರ ಸಹಕಾರದಿಂದ ಹಸುವಿನ ಹೊಟ್ಟೆಯಲ್ಲಿದ್ದ ಕರುವನ್ನು ಹೊರ ತೆಗೆದು ಹಸುವಿನ ಪ್ರಾಣ ಉಳಿಸಿದ್ದಾರೆ.
ಇದನ್ನೂ ಓದಿ:ಫಲಿತಾಂಶ ತಿರಸ್ಕರಿಸಿದವರಿಗೆ ಮತ್ತೆ ಪರೀಕ್ಷೆ
ಕರು ಹೊಟ್ಟೆಯ ಒಳಗೆ ಅಸುನೀಗಿದೆ. ಇಂತಹ ಪ್ರಕರಣಗಳಿಗೆ ವೈದ್ಯಕೀಯ ಭಾಷೆಯಲ್ಲಿ ಡಿಸ್ಟೋಕಿಯಾ ಎನ್ನಲಾಗುತ್ತದೆ. ಹೊಟ್ಟೆಯಲ್ಲಿ
ಕರು ತಿರುಗಿ ಕೊಂಡಿರುವುದರಿಂದ ಸ್ವಾಭಾವಿಕವಾಗಿ ಹಸುವಿಗೆ ಕರು ಹಾಕಲು ಸಾಧ್ಯವಾಗಿಲ್ಲ. ಕರುವನ್ನು ಹೊರ ತೆಗೆಯದೇ ಇದ್ದರೆ ಹೊಟ್ಟೆ
ಬಿಗಿಯಾಗಿ ಹಸು ಸಾವನ್ನಪ್ಪುವ ಸಾಧ್ಯತೆ ಇತ್ತು ಎಂದು ಜಾನುವಾರು ಅಧಿಕಾರಿ ಅಜೀಜ್ ಅಹಮ್ಮದ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ