ಲಾಕ್ ಡೌನ್ : ಮೊದಲ ದಿನ ಕಾಫಿನಾಡು ಸಂಪೂರ್ಣ ಸ್ತಬ್ಧ
Team Udayavani, Apr 28, 2021, 12:55 PM IST
ಚಿಕ್ಕಮಗಳೂರು: ಲಾಕ್ ಡೌನ್ ಮೊದಲ ದಿನ ಕಾಫಿನಾಡು ಸಂಪೂರ್ಣ ಸ್ತಬ್ಧಗೊಂಡಿದ್ದು, ಬುಧವಾರ ಜಿಲ್ಲಾದ್ಯಂತ ಜನಜೀವನ ಸ್ತಗಿತಗೊಂಡಿದೆ.
ಅಗತ್ಯ ವಸ್ತುಗಳ ಖರೀದಿಗೆ ಸರಕಾರ ಅವಕಾಶ ನೀಡಿರುವುದರಿಂದ ಬೆಳಗ್ಗೆ 6 ರಿಂದ 10 ರವರೆಗೆ ಸಾರ್ವಜನಿಕರು ಚಿಕ್ಕಮಗಳೂರು ನಗರ ಸೇರಿದಂತೆ ಪಟ್ಟಣ ಪ್ರದೇಶಗಳಲ್ಲಿನ ತರಕಾರಿ, ದಿನಸಿ, ಮೀನು ಮಾಂಸ ಖರೀದಿಗೆ ಮುಗಿಬಿದ್ದ ದೃಶ್ಯಗಳು ಸಾಮಾನ್ಯವಾಗಿತ್ತು.
ಬೆಳಗ್ಗೆ ಸಮಯ 10 ಆಗುತ್ತಿದ್ದಂತೆ ಪೊಲೀಸರು ರಸ್ತೆಗಿಳಿದ ಪರಿಣಾಮ ಅಂಗಡಿ ಮುಂಗಟ್ಟುಗಳು ಬಾಗಿಲು ಹಾಕಿದವು, ರಸ್ತೆಯಲ್ಲಿದ್ದ ವಾಹನಗಳು, ಸಾರ್ವಜನಿಕರು ನಿಧಾನವಾಗಿ ಮನೆ ಸೇರಿಕೊಂಡರು.
ಮೊದಲ ದಿನದ ಲಾಕ್ಡೌನ್ ಗೆ ಕಾಫಿನಾಡು ಜನಸಂಚಾರ, ವಾಹನ ಸಂಚಾರ ಸ್ತಬ್ಧಗೊಂಡಿದ್ದು ಚಿಕ್ಕಮಗಳೂರು ನಗರ ಸೇರಿದಂತೆ ಪ್ರಮುಖ ಪಟ್ಟಣ, ಗ್ರಾಮೀಣ ಪ್ರದೇಶದ ರಸ್ತೆಗಳು ಖಾಲಿ ಖಾಲಿಯಾಗಿದ್ದು, ಬಿಕೋ ಎನ್ನುತ್ತಿವೆ. ಕೆಲವು ಅಗತ್ಯ ವಸ್ತುಗಳ ಸರಕು ವಾಹನಗಳು ಮಾತ್ರ ಅಲ್ಲಲ್ಲಿ ಸಂಚಾರ ನಡೆಸಿದ್ದು, ಉಳಿದ ವಾಹನಗಳು ನಿಂತಲ್ಲೇ ನಿಲ್ಲುವಂತಾಗಿದೆ, ಅನಗತ್ಯ ತಿರುಗಾಡುವ ವಾಹನ ಸವಾರರು, ಜನರನ್ನು ಚೆಕ್ಪೋಸ್ಟ್ಗಳಲ್ಲಿ ತಪಾಸಣೆ ಮಾಡುತ್ತಿರುವ ಪೊಲೀಸರು ಆಸ್ಪತ್ರೆ, ಮೆಡಿಕಲ್ ಗೆ ತೆರಳುವವರನ್ನು ಬಿಡುತ್ತಿದ್ದು, ಸುಖಾಸುಮ್ಮನೆ ತಿರುಗುವವರಿಗೆ ದಂಡ ಹಾಕುತ್ತಿದ್ದಾರೆ.
ಪಡಿತರ ಅಂಗಡಿಗಳ ಮುಂದೆ ಸಾರ್ವಜನಿಕರು ಸರತಿ ಸಾಲಿನಲ್ಲಿ ನಿಂತು ಪಡಿತರ ಪಡೆಯುತ್ತಿರುವ ದೃಶ್ಯಗಳು ಜಿಲ್ಲಾದ್ಯಂತ ಸಾಮಾನ್ಯವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ