Lok Sabha Election 2024; ಅತಿ ಹೆಚ್ಚು ಮತ ತರಲು ಶ್ರಮಿಸಿ: ಸಿ.ಟಿ. ರವಿ
Team Udayavani, Apr 12, 2024, 6:30 PM IST
ಚಿಕ್ಕಮಗಳೂರು: ಮುಖಂಡರು ಮತ್ತು ಕಾರ್ಯಕರ್ತರು ಮತದಾರರ ಮನವೊಲಿಸುವ ಮೂಲಕ ಪ್ರತಿಬೂತ್ನಲ್ಲಿ ಹೆಚ್ಚು ಮತ ಗಳಿಕೆಗೆ ಶ್ರಮಿಸಬೇಕೆಂದು ಮಾಜಿ ಶಾಸಕ ಸಿ.ಟಿ. ರವಿ ಹೇಳಿದರು.
ಗುರುವಾರ ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಗರ ಮಂಡಲ ವತಿಯಿಂದ ಆಯೋಜಿಸಿದ್ದ ಬೂತ್ ಅಧ್ಯಕ್ಷರು ಹಾಗೂ ಬಿಎಲ್ 2ಗಳ ಸಭೆಯಲ್ಲಿ ಅವರು ಮಾತನಾಡಿದರು.
ಪಕ್ಷ ಹಾಗೂ ಮೋದಿ ಅಭಿಮಾನಿಗಳ ಪರವಾಗಿ ಕೆಲಸ ಮಾಡುವವರ ಪಟ್ಟಿ ತಯಾರಿಸಿ ಅಭ್ಯರ್ಥಿ ಗೆಲುವಿಗೆ ನಿರಂತರ ಕಾರ್ಯನಿರ್ವಹಿಸಬೇಕಿದೆ ಎಂದು ಹೇಳಿದರು.
ನಗರಸಭೆಯಲ್ಲಿ ಒಟ್ಟಾರೆ 12 ಮಂದಿ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದ್ದಾರೆ. ಒಬ್ಬರು ಬದುಕಿದ್ದು ಸತ್ತಂತೆ ವರ್ತಿಸುತ್ತಿದ್ದಾರೆ. ಮತ್ತೋರ್ವ ಉಂಡು ಮನೆಗೆ ದ್ರೋಹವೆಸಗಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ ಅವರು, ಹಾಲಿ ಹಾಗೂ ಮಾಜಿ ನಗರ ಸಭಾ ಸದಸ್ಯರು ಆಯಾ ಕ್ಷೇತ್ರಗಳಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿ ಗೆಲುವಿಗೆ ಸಹಕರಿಸಬೇಕು ಎಂದರು.
ಉಡುಪಿ-ಚಿಕ್ಕಮಗಳೂರು ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿ ಮಾತನಾಡಿ, ಕ್ಷೇತ್ರದಲ್ಲಿ ಅಡಕೆ, ಕಾಫಿ, ತೆಂಗಿನ ಬೆಳೆಗಾರರ ಸಮಸ್ಯೆಗಳ ಬಗ್ಗೆ ತಿಳಿದಿದೆ. ಅಲ್ಲದೇ ಪಂಚಾಯತ್ ಹಾಗೂ ನಗರಸಭಾ ಆಡಳಿತದಲ್ಲಿರುವ ಸಮಸ್ಯೆಗಳು ಗೊತ್ತಿವೆ. ಹೀಗಾಗಿ ಮತದಾರರು ಒಮ್ಮೆ ಅವಕಾಶ ಕಲ್ಪಿಸಿದರೆ ಕ್ಷೇತ್ರದಲ್ಲಿ ಮಾದರಿ ಕೆಲಸ ಕೈಗೊಳ್ಳುವ ಗುರಿ ಹೊಂದಿದ್ದೇನೆ ಎಂದರು.
ಬಿಜೆಪಿ ನಗರಾಧ್ಯಕ್ಷ ಕೆ.ಎಸ್. ಪುಷ್ಪರಾಜ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್. ದೇವರಾಜ್ ಶೆಟ್ಟಿ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷ ಜಸಂತ್ ಅನಿಲ್ಕುಮಾರ್, ಎಸ್ಸಿ ಘಟಕದ ಜಿಲ್ಲಾಧ್ಯಕ್ಷ ಕುರುವಂಗಿ ವೆಂಕಟೇಶ್, ಮುಖಂಡರಾದ ಸೀತರಾಮ ಭರಣ್ಯ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ ಸಾವು
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ