![court](https://www.udayavani.com/wp-content/uploads/2024/07/court-7-415x231.jpg)
ಮಳೆ ಕಡಿಮೆ; ಗಾಳಿ ಜೋರು
Team Udayavani, Aug 19, 2018, 4:10 PM IST
![chikk.jpg](https://www.udayavani.com/wp-content/uploads/2018/08/19/chikk-620x279.jpg)
ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಅನೇಕ ದಿನಗಳಿಂದ ಸುರಿಯುತ್ತಿರುವ ಮಳೆ ಶನಿವಾರ ಕಡಿಮೆಯಾಗಿದೆ ಆದರೆ ಭಾರೀ ಪ್ರಮಾಣದ ಗಾಳಿ ಬೀಸುತ್ತಿದೆ.ಅಲ್ಲಲ್ಲಿ ರಸ್ತೆ ಮತ್ತು ಮನೆಗಳ ಗುಡ್ಡ ಕುಸಿತ ಉಂಟಾಗುತ್ತಿದೆ. ಹೀಗಾಗಿ ಜನಜೀವನ ಅಸ್ತವ್ಯಸ್ತವಾಗಿದೆ.
ಮಳೆ ನಿಯಂತ್ರಣಕ್ಕೆ ಬಂದರೂ ಭೂ ಕುಸಿತ ಮುಂದುವರಿದಿರುವುದರಿಂದ ಜನ ಭಯಭೀತಗೊಂಡಿದ್ದಾರೆ. ಜಿಲ್ಲೆಯ ಕೊಪ್ಪ ತಾಲೂಕಿನ ಶಾನುವಳ್ಳಿ ಗ್ರಾಮದಲ್ಲಿ ಬಾವಿಯೊಂದು ಕುಸಿದಿದೆ. ಪ್ರೇಮಾಶೆಟ್ಟಿ ಎಂಬುವರ ಮನೆ ಸಮೀಪದ ಬಾವಿ ಕುಸಿದು ಪಕ್ಕದಲ್ಲೇ ಸುರಂಗದಂತೆ ಮಾರ್ಪಾಡಾಗಿದೆ.
ಕೊಪ್ಪ ತಾಲೂಕಿನ ಹೇರೂರು ಗ್ರಾಮದ ದೂಬಳೆ ಕೈಮರ ಎಸ್ಟೇಟ್ ಸೇರಿದಂತೆ ಐದು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ತಡೆಗೋಡೆ ಸಹಿತ ಕುಸಿದು ಬಿದ್ದಿದ್ದು, ಸುಮಾರು 20 ಅಡಿ ಆಚೆಗೆ ಸಿಮೆಂಟ್ ತಡೆಗೋಡೆ ಕುಸಿದು ಹೋಗಿದೆ. ರಸ್ತೆ ಕುಸಿಯುತ್ತಿರುವುದರಿಂದ ವಾಹನ ಸವಾರರು ಆತಂಕದಲ್ಲಿ ಸಂಚರಿಸುವಂತಾಗಿದೆ. ಗ್ರಾಮಕ್ಕೆ ಸಂಪರ್ಕ ಕಲ್ಪಿಸಲು ಪರ್ಯಾಯ ಮಾರ್ಗವಿಲ್ಲದೆ ಜನರು ಕಂಗಾಲಾಗಿದ್ದಾರೆ.
ಸಂಚಾರ ದಟ್ಟಣೆ: ಶಿರಾಡಿ ಘಾಟಿ ಸಂಚಾರ ಬಂದ್ ಆಗಿರುವ ಹಿನ್ನೆಲೆಯಲ್ಲಿ ಕರಾವಳಿ ಮಲೆನಾಡು ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟಿಯಲ್ಲಿ ವಾಹನ ದಟ್ಟಣೆ ಹೆಚ್ಚಾಗಿದೆ. ಚಾರ್ಮಾಡಿ ಘಾಟಿ ರಸ್ತೆ ಕಿರಿದಾಗಿದ್ದು, ಒಮ್ಮೆಗೆ ಸಾವಿರಾರು ವಾಹನಗಳು ಜಮಾಯಿಸುತ್ತಿರುವುದರಿಂದ ಟ್ರಾಫಿಕ್ ಜಾಮ್ ಆಗುತ್ತಿದೆ. ಶನಿವಾರ ಬೆಳಗ್ಗೆ ಲಾರಿಯೊಂದು ಕೆಟ್ಟು ನಿಂತಿದ್ದರಿಂದ ಗಂಟೆಗಟ್ಟಲೆ ಐದು ಕಿ.ಮೀ ವರೆಗೂ ವಾಹನಗಳು ಸಾಲುಗಟ್ಟಿ ನಿಲ್ಲುವಂತಾಗಿತ್ತು.
ಟ್ರಾಫಿಕ್ ಜಾಮ್ನಿಂದ ಕೆಲ ಪ್ರಯಾಣಿಕರು ಕೊಟ್ಟಿಗೆಹಾರದಿಂದ ವಾಪಸ್ ಆದರೆ, ಅನೇಕ ಪ್ರಯಾಣಿಕರು ಟ್ರಾಫಿಕ್ ನಲ್ಲಿ ಸಿಲುಕಿ ಮುಂದೆ ಹೋಗಲೂ ಆಗದೇ ಹಿಂದೆ ಬರಲೂ ಆಗದೇ ಪರದಾಡುವಂತಾಗಿತ್ತು. ಮತ್ತೂಂದು ಕಡೆ ಘಾಟಿ ಪ್ರದೇಶದಲ್ಲಿ ಮಂಜು ಮತ್ತು ತುಂತುರು ಮಳೆ ಆವರಿಸಿರುವುದರಿಂದ ವಾಹನ ಚಾಲನೆ ಮಾಡುವುದು ಕಷ್ಟಕರವಾಗಿತ್ತು.
ಟಾಪ್ ನ್ಯೂಸ್
![court](https://www.udayavani.com/wp-content/uploads/2024/07/court-7-415x231.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-aaaa](https://www.udayavani.com/wp-content/uploads/2024/07/1-aaaa-8-150x100.jpg)
ಚಾರ್ಮಾಡಿ ಘಾಟಿ ; ರಸ್ತೆಗೆ ಅಡ್ಡಲಾಗಿ ಬಿದ್ದ ಮರ: ವಾಹನ ಸಂಚಾರಕ್ಕೆ ತಾತ್ಕಾಲಿಕ ತಡೆ
![1-sadasd](https://www.udayavani.com/wp-content/uploads/2024/07/1-sadasd-150x90.jpg)
July27;ಚಿಕ್ಕಮಗಳೂರಿನ 6 ತಾಲೂಕುಗಳಲ್ಲಿ ಪ್ರೌಢ ಶಾಲೆಗಳವರೆಗೆ,ಕೊಡಗಿನಲ್ಲಿ ಪಿಯುಸಿವರೆಗೆ ರಜೆ
![N.R.Pura; ಸೊಂಟಕ್ಕೆ ವೈರ್ ಕಟ್ಟಿಕೊಂಡು ಈಜಿ ಕೆಲಸ ಮಾಡಿದ ಲೈನ್ ಮ್ಯಾನ್; ವಿಡಿಯೋ ವೈರಲ್](https://www.udayavani.com/wp-content/uploads/2024/07/lineman-150x83.jpg)
N.R.Pura; ಸೊಂಟಕ್ಕೆ ವೈರ್ ಕಟ್ಟಿಕೊಂಡು ಈಜಿ ಕೆಲಸ ಮಾಡಿದ ಲೈನ್ ಮ್ಯಾನ್; ವಿಡಿಯೋ ವೈರಲ್
![Rain: ರಾಷ್ಟ್ರೀಯ ಹೆದ್ದಾರಿಗೆ ಉರುಳಿ ಬಿದ್ದ ಮರ… ತಪ್ಪಿದ ಭಾರಿ ಅನಾಹುತ, ಕಾರುಗಳು ಜಖಂ](https://www.udayavani.com/wp-content/uploads/2024/07/mara-1-150x101.jpg)
Rain: ರಾಷ್ಟ್ರೀಯ ಹೆದ್ದಾರಿಗೆ ಉರುಳಿ ಬಿದ್ದ ಮರ… ತಪ್ಪಿದ ಭಾರಿ ಅನಾಹುತ, ಕಾರುಗಳು ಜಖಂ
![Kadur; ಪಶ್ಚಿಮ ಘಟ್ಟಗಳ ಸಾಲಿನ ಭಾರೀ ಮಳೆ; ಕೋಡಿ ಬಿದ್ದ ಮದಗದ ಕೆರೆ](https://www.udayavani.com/wp-content/uploads/2024/07/madaga-150x83.jpg)
Kadur; ಪಶ್ಚಿಮ ಘಟ್ಟಗಳ ಸಾಲಿನ ಭಾರೀ ಮಳೆ; ಕೋಡಿ ಬಿದ್ದ ಮದಗದ ಕೆರೆ
MUST WATCH
ಹೊಸ ಸೇರ್ಪಡೆ
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
![robbers](https://www.udayavani.com/wp-content/uploads/2024/07/robbers-1-150x89.jpg)
Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!
![Kohli IPL 2024](https://www.udayavani.com/wp-content/uploads/2024/07/Kohli-IPL-2024-150x103.jpg)
Champions Trophy; ಕೊಹ್ಲಿ ಪಾಕ್ನಲ್ಲಿ ಆಡಲಿ: ಯೂನಿಸ್ ಖಾನ್
![1-tatoo](https://www.udayavani.com/wp-content/uploads/2024/07/1-tatoo-150x84.jpg)
Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!
![1-wewqewq](https://www.udayavani.com/wp-content/uploads/2024/07/1-wewqewq-2-150x98.jpg)
Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.