ಚಂದ್ರಗ್ರಹಣ: ಹೊರನಾಡು, ಶೃಂಗೇರಿಯಲ್ಲಿ ಪೂಜೆ-ಪ್ರಸಾದದ ವ್ಯವಸ್ಥೆಯಲ್ಲಿ ಬದಲಾವಣೆ
Team Udayavani, Nov 8, 2022, 10:29 AM IST
ಚಿಕ್ಕಮಗಳೂರು: ಚಂದ್ರ ಗ್ರಹಣದ ಹಿನ್ನೆಲೆಯಲ್ಲಿ ಮಂಗಳವಾರ (ನ.8) ಹೊರನಾಡು, ಶೃಂಗೇರಿ ದೇವಸ್ಥಾನಗಳಲ್ಲಿ ಪೂಜೆ-ಪ್ರಸಾದದ ವ್ಯವಸ್ಥೆಯಲ್ಲಿ ಸ್ವಲ್ಪ ಬದಲಾವಣೆ ಮಾಡಲಾಗಿದೆ.
ಕಳಸ ತಾಲೂಕಿನ ಹೊರನಾಡು ಅನ್ನಪೂರ್ಣೇಶ್ವರಿ ದೇಗುಲದಲ್ಲಿ ಬೆಳಗ್ಗೆ 11 ರಿಂದ 12 ಗಂಟೆವರೆಗೆ ಮಾತ್ರ ಪ್ರಸಾದದ ವ್ಯವಸ್ಥೆ ಇರಲಿದೆ. 12 ಗಂಟೆ ನಂತರ ಮತ್ತೆ ಪ್ರಸಾದ ಇರುವುದಿಲ್ಲ. ಮಧ್ಯಾಹ್ನ 1.30ಕ್ಕೆ ಅನ್ನಪೂರ್ಣೇಶ್ವರಿಗೆ ಮಹಾ ಮಂಗಳಾರತಿ ನಡೆಯಲಿದ್ದು, ಸಂಜೆ 4 ಗಂಟೆವರೆಗೆ ಅರ್ಚನೆ ನಡೆಯಲಿದೆ.
ಗ್ರಹಣ ಮೋಕ್ಷ ಕಾಲದ ಬಳಿಕ ಶುದ್ದಿ ಕಾರ್ಯದ ನಂತರವೇ ಪೂಜೆ-ಪ್ರಸಾದದ ವ್ಯವಸ್ಥೆ ಮಾಡಲಾಗಿದೆ. ಗ್ರಹಣ ಆರಂಭದಿಂದ ಅಂತ್ಯದವರೆಗೂ ಅನ್ನಪೂರ್ಣೇಶ್ವರಿಗೆ ನಿರಂತರ ಅಭಿಷೇಕ ಇರಲಿದೆ.
ಶೃಂಗೇರಿ ಶಾರದಾಂಬೆ ದೇವಾಲಯದಲ್ಲಿ ಎಂದಿನಂತೆ ಪೂಜೆ ನಡೆಯಲಿದ್ದು, ಗ್ರಹಣದ ವೇಳೆಯೂ ದರ್ಶನಕ್ಕೆ ಅವಕಾಶ ಇರುತ್ತದೆ. ಆದರೆ ಮಧ್ಯಾಹ್ನದ ಊಟ, ಪೂಜೆ-ಪ್ರಸಾದ ಸೇರಿದಂತೆ ಯಾವುದೇ ಪ್ರಸಾದದ ವ್ಯವಸ್ಥೆ ಇರುವುದಿಲ್ಲ. ದರ್ಶನಕ್ಕೆ ಮಾತ್ರ ಅವಕಾಶ ಇರಲಿದೆ. ಗ್ರಹಣದ ಬಳಿಕ ಪೂಜೆ-ಪ್ರಸಾದ ಎಂದಿನಂತೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್
Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ
Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ
Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್
Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ