ಕಾಫಿನಾಡಲ್ಲಿ ಎಂ.ಬಿ.ಪಾಟೀಲ್ ಟೆಂಪಲ್ ರನ್; ದತ್ತ ಪೀಠಕ್ಕೂ ಭೇಟಿ
Team Udayavani, Sep 9, 2022, 4:05 PM IST
ಚಿಕ್ಕಮಗಳೂರು: ಕಾಫಿನಾಡಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಅವರು ಹಲವು ಧಾರ್ಮಿಕ ಕೇಂದ್ರಗಳಿಗೆ ಶುಕ್ರವಾರ ಭೇಟಿ ನೀಡಿದ್ದಾರೆ.
ಶೃಂಗೇರಿ, ಹರಿಹರಪುರ ಮಠಕ್ಕೆ ಭೇಟಿ ನೀಡಿದ ಎಂ.ಬಿ.ಪಾಟೀಲ್ ಸ್ವಾಮೀಜಿಗಳ ದರ್ಶನ ಪಡೆದರು. ಹಿಂದೂ-ಮುಸ್ಲಿಮರ ವಿವಾದಿತ ಕೇಂದ್ರವಾಗಿರುವ ಚಿಕ್ಕಮಗಳೂರಿನ ವಿವಾದಿತ ಕೇಂದ್ರ ದತ್ತಾತ್ರೇಯ ಬಾಬಾಬುಡನ್ ಗಿರಿಗೂ ಎಂ.ಬಿ. ಪಾಟೀಲ್ ಭೇಟಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.
ಪಾಟೀಲ್ ಅವರೊಂದಿಗೆ ಸ್ಥಳೀಯ ಕಾಂಗ್ರೆಸ್ ನಾಯಕರು ಹಾಜರಿದ್ದರು.