ಮಾಸ್ಕ್-ಸ್ಯಾನಿಟೈಸರ್ ವಿತರಣೆ
Team Udayavani, Jun 5, 2021, 11:56 AM IST
ಬೀರೂರು: ಕೋವಿಡ್ ಸೋಂಕು ತಡೆಗಟ್ಟುವಲ್ಲಿ ಆಶಾ ಕಾರ್ಯಕರ್ತೆಯರ ಪಾತ್ರ ಬಹುಮುಖ್ಯವಾದುದು. ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿದ್ದು, ಅವರ ಆರೋಗ್ಯದ ಇಂಚಿಂಚು ವರದಿ ಕಲೆ ಹಾಕಿ ತಜ್ಞರಗಮನಕ್ಕೆ ತರುವುದರಿಂದ ಮುಂಜಾಗ್ರತಾಕ್ರಮಗಳ ಬಗ್ಗೆ ಎಚ್ಚರವಿರಲಿ ಎಂದು ಗ್ರಾಪಂ ಅಧ್ಯಕ್ಷೆ ನಾಗಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ಹುಲ್ಲೇಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಆಶಾ ಕಾರ್ಯಕರ್ತೆಯರು, ಅಂಗನವಾಡಿ, ಪಂಚಾಯಿತಿ ಸಿಬ್ಬಂದಿಗೆ ಮಾಸ್ಕ್, ಸ್ಯಾನಿಟೈಸರ್ ಹಾಗೂ ಫೇಸ್ ಶೀಲ್ಡ್ವಿತರಿಸಿ ಮಾತನಾಡಿದರು. ಪಿಡಿಒ ಮಂಜುನಾಥ್ ಮಾತನಾಡಿ, ಹುಲ್ಲೇಹಳ್ಳಿ ಪಂಚಾಯಿತಿಗೆ ಸೇರಿದ 8 ಗ್ರಾಮಗಳಲ್ಲಿಒಟ್ಟು 51 ಪಾಸಿಟಿವ್ ಪ್ರಕರಣಗಳಿದ್ದು, ಅದರಲ್ಲಿ 46 ಮಂದಿ ಸಂಪೂರ್ಣ ಗುಣಮುಖರಾಗಿದ್ದು, ಇನ್ನುಳಿದ 5 ಮಂದಿ ಹೋಂ ಐಸೋಲೇಷನ್ನಲ್ಲಿದ್ದಾರೆ. ಕೆಲವೇ ದಿನಗಳಲ್ಲಿ ಅವರು ಗುಣಮುಖರಾಗುತ್ತಾರೆ.
ಎಲ್ಲಾ ಗ್ರಾಮಗಳಿಗೂ ಸ್ಯಾನಿಟೈಸ್ ಮಾಡಿಸುತ್ತಿದ್ದು, ಹೋಂ ಐಸೋಲೇಷನ್ನಲ್ಲಿರುವವರ ಮನೆಗಳ ಬಳಿಎರಡು ದಿನಗಳಿಗೊಮ್ಮೆ ಸ್ಯಾನಿಟೈಸ್ ಮಾಡಿಸಲಾಗುತ್ತಿದೆ ಎಂದರು. ಪಂಚಾಯಿತಿ ಉಪಾಧ್ಯಕ್ಷೆ ಶಾಂತ, ಸದಸ್ಯರಾದ ಹುಲ್ಲೇಹಳ್ಳಿ ಲಕ್ಷ್ಮಣ,ನರಸಿಂಹಮೂರ್ತಿ, ಎನ್.ಮೂರ್ತಿ,ಸೌಭಾಗ್ಯ, ಧನಲಕ್ಷ್ಮಿ, ಯರೇಹಳ್ಳಿ ಲೋಕೇಶ್, ಗ್ರಾಮಸ್ಥರಾದ ಸುರೇಶ್,ವೆಂಕಟೇಶ್, ಕುಮಾರ್, ಧನಪಾಲ್, ಆಶಾ ಕಾರ್ಯಕರ್ತೆಯರಾದ ಅಂಬಿಕ,ಮೀನಾಕ್ಷಿ, ಹೇಮಾವತಿ ಮತ್ತು ಗ್ರಾಮ ಪಂಚಾಯಿತಿ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ