ಶಿಕ್ಷಣ-ಸಂಸ್ಕೃತಿ-ಪ್ರೋತ್ಸಾಹವೇ ಕೇಂದ್ರದ ಧ್ಯೇಯ

ಆರೋಗ್ಯ ಮೇಳ ಉದ್ಘಾಟಿಸಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅಭಿಮತ

Team Udayavani, Apr 26, 2022, 4:58 PM IST

tarikere

ತರೀಕೆರೆ: ಜನಸಾಮಾನ್ಯರಿಗೆ ಮುಟ್ಟುವಂತಹ ಕೆಲಸಗಳನ್ನು ಹಮ್ಮಿಕೊಳ್ಳಬೇಕು ಎಂಬ ಹಂಬಲ ಮತ್ತು ಪ್ರಧಾನಿ ನರೇಂದ್ರ ಮೋದಿ ಆಶಯದಂತೆ ಇಡಿ ದೇಶದಲ್ಲಿ ತಾಲೂಕು ಮಟ್ಟದಲ್ಲಿ ಉಚಿತ ಆರೋಗ್ಯ ಶಿಬಿರಗಳನ್ನು ಆಯೋಜಿಸಲಾಗಿದೆ. ಜನರಿಗೆ ಉತ್ತಮ ವೈದ್ಯಕೀಯ ಸೇವೆ ಸಿಗಬೇಕು ಎನ್ನುವ ಗುರಿಯನ್ನು ಇಟ್ಟುಕೊಂಡು ಒಂದೇ ಸೂರಿನಡಿ ಜನರ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ನೀಡಲಾಗುತ್ತಿದೆ. ಅಭಿಯಾನಕ್ಕೆ ಸರಕಾರ ಹಣವನ್ನು ನಿಗದಿ ಮಾಡಿದೆ. ಶಿಕ್ಷಣ- ಸಂಸ್ಕೃತಿ ಮತ್ತು ಪ್ರೋತ್ಸಾಹ ನೀಡಬೇಕು ಎನ್ನುವುದು ಸರಕಾರದ ಗುರಿಯಾಗಿದೆ ಎಂದು ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ನುಡಿದರು.

ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ತಾಲೂಕು ಆಡಳಿತದಿಂದ ಏರ್ಪಡಿಸಿದ್ದ 75ನೇ ಸ್ವಾತ್ರಂತ್ಯದ ಅಮೃತ ಮಹೋತ್ಸವ ಅಂಗವಾಗಿ ನಡೆದ ಉಚಿತ ಆರೋಗ್ಯ ಮೇಳ ಉದ್ಘಾಟಿಸಿ ಅವರು ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಹೆಣ್ಣು ಮಕ್ಕಳು ಆನೇಕ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಯಾವುದಾದರೂ ತೊಂದರೆಗಳಿದ್ದರೂ ಕೂಡ ಅವು ಉಲ್ಬಣವಾಗುವ ತನಕ ಹೆಣ್ಣುಮಕ್ಕಳು ಹೇಳಿಕೊಳ್ಳುವುದಿಲ್ಲ. ಗರ್ಭಕೋಶ ಮತ್ತು ಸ್ತನ ಕ್ಯಾನ್ಸರ್‌ ರೋಗಕ್ಕೆ ತುತ್ತಾಗುತ್ತಿದ್ದಾರೆ. ಇಂತಹ ಕಾಯಿಲೆಗಳು ದೊಡ್ಡ ಪ್ರಮಾಣದಲ್ಲಿವೆ. ಇದಕ್ಕೆ ಕಾರಣಗಳು ತಿಳಿಯುತ್ತಿಲ್ಲ. ವಿಶೇಷ ತಜ್ಞರು ಇದಕ್ಕೆ ಉತ್ತರಿಸಬೇಕಾಗಿದೆ ಅಥವಾ ನಾವು ಬಳಸುತ್ತಿರುವ ಆಹಾರ ಮತ್ತು ವಾತಾವರಣ ಇದಕ್ಕೆ ಕಾರಣವೇ ಎಂದು ತಿಳಿಯಬೇಕಾಗಿದೆ ಎಂದರು.

ಇತ್ತೀಚಿನ ದಿನಗಳಲ್ಲಿ ಭೂಮಿ ಮತ್ತು ವಾತಾವರಣ ಕಲುಷಿತವಾಗಿದೆ. ಹಿಂದಿನ ದಿನಗಳಲ್ಲಿ ನಮ್ಮ ಹಿರಿಯರು ಸಾವಯವ ಕೃಷಿಗೆ ಹೆಚ್ಚು ಒತ್ತು ನೀಡಿದ್ದರು. ಜೊತೆಗೆ ಇಳುವರಿ ಕಡಿಮೆಯಾದರು ಕೂಡ ಉತ್ತಮ ಗುಣಮಟ್ಟದ ಆಹಾರ ಪದಾರ್ಥ ದೊರೆಯುತ್ತಿತ್ತು. ಆದರೆ ನಾವಿಂದು ರಾಸಾಯನಿಕ ಕೃಷಿಗೆ ಹೆಚ್ಚು ಒತ್ತು ನೀಡಿದ್ದೇವೆ. ಇದರಿಂದಾಗಿ ಭೂಮಿ ಮತ್ತು ಪರಿಸರದ ಮೇಲೆ ಪ್ರಭಾವ ಬೀರಿದೆ. ರಾಸಾಯನಿಕ ಔಷಧಿಗಳು ಮತ್ತು ರಸಗೊಬ್ಬರಗಳ ಬಳಕೆ ಇದಕ್ಕೆ ಕಾರಣ. ಇಡೀ ದೇಶಕ್ಕೆ ಹಸಿರು ಕ್ರಾಂತಿಯನ್ನು ಮಾಡಿದ ಪಂಜಾಬ್‌ ಮತ್ತು ಚಂಡೀಗಢದಲ್ಲಿ ಮನೆಗೊಬ್ಬರು ರೋಗಿ ಸಿಗುತ್ತಿದ್ದಾರೆ. ಇದಕ್ಕೆ ನಾವು ಬಳಸುತ್ತಿರುವ ಆಹಾರ ಕಾರಣ. ಇದರಿಂದ ನಾವು ಹೊರಬರಬೇಕಾದಲ್ಲಿ ನಾವು ಜೈವಿಕ ಹಾಗೂ ಸಾವಯವ ಪದ್ಧತಿಯಲ್ಲಿ ಆಹಾರವನ್ನು ಬೆಳೆದು ಅವುಗಳನ್ನು ಉಪಯೋಗಿಸಬೇಕಾಗಿದೆ ಎಂದರು.

ಸರ್ಕಾರ ಆಯುಷ್ಮಾನ್‌ ಭಾರತ್‌ ಯೋಜನೆಯಲ್ಲಿ 5 ಲಕ್ಷದ ತನಕ ಉತ್ತಮ ಗುಣಮಟ್ಟದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬಹುದಾಗಿದೆ. ತರೀಕೆರೆ ಸಾರ್ವಜನಿಕ ಆಸ್ಪತ್ರೆಯಲ್ಲಿ ನಿಮಿಷಕ್ಕೆ 500 ಲೀಟರ್‌ ಆಮ್ಲಜನಕವನ್ನು ಉತ್ಪಾದನಾ ಘಟಕವನ್ನು ಸ್ಥಾಪನೆ ಮಾಡಲಾಗಿದೆ. ಇಲ್ಲಿಯ ತನಕ ಇದಕ್ಕಾಗಿ 1.37 ಕೋಟಿ ವೆಚ್ಚವನ್ನು ಮಾಡಲಾಗಿದೆ ಎಂದರು.

ತಾಯಿ ಮತ್ತು ಮಗುವಿನ ಆರೋಗ್ಯವನ್ನು ಕಾಪಾಡಲು ಪಟ್ಟಣದಲ್ಲಿ 100 ಹಾಸಿಗೆಯ ತಾಯಿ- ಮಗು ಆಸ್ಪತ್ರೆಗೆ ಮಂಜೂರಾತಿ ನೀಡಲಾಗಿದೆ. ಸರಕಾರ ಎಲ್ಲಾ ರೀತಿಯ ಅನುಮೋದನೆಯನ್ನು ನೀಡಿದೆ. ಕೋವಿಡ್‌ ನಂತರ ನಾವು ಆಕ್ಸಿಜನ್‌ಗಾಗಿ ಪರದಾಟ ನಡೆಸಿದ್ದೆವು. ಜಿಲ್ಲಾ ಆಸ್ಪತ್ರೆಯಲ್ಲಿ ನಿಮಿಷಕ್ಕೆ 1000 ಲೀಟರ್‌ ಮತ್ತು ತರೀಕೆರೆಯಲ್ಲಿ 500 ಲೀಟರ್‌ ಸಾಮರ್ಥ್ಯದ ಆಕ್ಸಿಜನ್‌ ಘಟಕ ಸ್ಥಾಪಿಸಲಾಗಿದೆ. 4 ವೆಂಟಿಲೇಟರ್‌ ಘಟಕಗಳು ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು ಸದ್ಯದಲ್ಲೇ 22 ವೆಂಟಿಲೇಟರ್‌ ಘಟಕವನ್ನು ಸ್ಥಾಪನೆ ಮಾಡಲಾಗುವುದು ಎಂದರು.

ಶಾಸಕ ಡಿ.ಎಸ್. ಸುರೇಶ್‌ ಮಾತನಾಡಿ, ಮನುಷ್ಯನಲ್ಲಿ ಹಣವಿದ್ದರೆ ಏನಾದರೂ ಕೊಂಡುಕೊಳ್ಳಲು ಸಾಧ್ಯ. ಆದರೆ ಆರೋಗ್ಯವನ್ನು ಕೊಂಡುಕೊಳ್ಳಲು ಸಾಧ್ಯವಿಲ್ಲ. ನಮ್ಮ ಆರೋಗ್ಯವನ್ನು ನಾವು ಕಾಪಾಡಿಕೊಳ್ಳಬೇಕು ಎಂಬ ಕಾರಣಕ್ಕೆ ಎಲ್ಲರಿಗೂ ಆರೋಗ್ಯ ತಪಾಸಣೆ ನಡೆಯಬೇಕು ಎಂದು ಸರಕಾರ ಉಚಿತ ಆರೋಗ್ಯ ಮೇಳವನ್ನು ಆಯೋಜನೆ ಮಾಡಿದೆ ಎಂದರು.

ಕೋವಿಡ್‌ ಸಮಯದಲ್ಲಿ ರಕ್ತ ಪರೀಕ್ಷೆ ಜನರು ಹೊರ ಊರುಗಳಿಗೆ ಹೋಗಬೇಕಾಗಿತ್ತು. ಇದನ್ನು ಅರಿತು ಶಾಸಕರ ಅನುದಾನದಲ್ಲಿ 15 ಲಕ್ಷ ವೆಚ್ಚದಲ್ಲಿ ರಕ್ತ ಪರೀಕ್ಷಾ ಕೇಂದ್ರವನ್ನು ಸ್ಥಾಪಿಸಲಾಗಿದೆ. 406 ಕೋಟಿ ವೆಚ್ಚದಲ್ಲಿ 55 ಕೆರೆಗಳಿಗೆ ಭದ್ರಾ ಉಪಕಣಿವೆ ಯೋಜನೆಯಲ್ಲಿ ಪೈಪ್‌ಲೈನ್‌ ಮೂಲಕ ನೀರು ಹರಿಸುವ ಕಾಮಗಾರಿ ಆರಂಭವಾಗಿದೆ ಎಂದರು.

ಸಭೆಯನ್ನುದ್ದೇಶಿಸಿ ಜಿಲ್ಲಾಧಿಕಾರಿ ಕೆ.ಎಸ್. ರಮೇಶ್‌, ಸಿಇಒ ಜಿ.ಪ್ರಭು ಮಾತನಾಡಿದರು. ಸಭೆಯಲ್ಲಿ ಉಪವಿಭಾಗಾಧಿಕಾರಿ ಸಿದ್ಧಲಿಂಗ ರೆಡ್ಡಿ, ತಹಶೀಲ್ದಾರ್‌ ಮಹೇಂದ್ರ, ಅಜ್ಜಂಪುರ ತಹಶೀಲ್ದಾರ್‌ ವಿಶ್ವೇಶ್ವರ ರೆಡ್ಡಿ, ಇಒ ಟಿ.ಎಸ್.ಗಣೇಶ್‌, ವೈದ್ಯರಾದ ಡಾ| ಅಶ್ವಥ್‌, ಡಾ| ಭರತ್‌, ಡಿಸಿಎಫ್‌ ಶರಣಬಸಪ್ಪ, ತಾಲೂಕು ವೈದ್ಯಾಧಿಕಾರಿ ಡಾ| ಚಂದ್ರಶೇಖರ್‌, ಪುರಸಭೆ ಅದ್ಯಕ್ಷ ಟಿ.ಎಂ. ರಂಗನಾಥ್‌ ಇನ್ನಿತರರು ಇದ್ದರು.

ಟಾಪ್ ನ್ಯೂಸ್

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

7-bng-crime

Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

6-

Bengaluru: ವಿಮಾನ ಹಾರಾಟದ ವೇಳೆ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಯುವಕ ಸೆರೆ

ಯುವತಿಯ ಅಪಹರಣ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

5-fir

Bengaluru: ಠಾಣೆಯಲ್ಲೇ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ, ಪೊಲೀಸರ ಮೇಲೆ ಹಲ್ಲೆ

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

7-bng-crime

Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ

Lok Sabha Polls: ಕಾಗೆ ಮಾತು ಕಾಂಗ್ರೆಸ್‌ನ ಮನಸ್ಥಿತಿ: ಬಿ.ವೈ.ರಾಘವೇಂದ್ರ

Lok Sabha Polls: ಕಾಗೆ ಮಾತು ಕಾಂಗ್ರೆಸ್‌ನ ಮನಸ್ಥಿತಿ: ಬಿ.ವೈ.ರಾಘವೇಂದ್ರ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

Aditya’s kangaroo movie released

Kangaroo; ಥ್ರಿಲ್ಲರ್‌ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.