ಸ್ತ್ರೀಯರ ಆತ್ಮರಕ್ಷಣೆಗೆ “ಮಿಷನ್ ಸಾಹಸಿ’
Team Udayavani, Dec 20, 2019, 4:09 PM IST
ಮೂಡಿಗೆರೆ: “ಮಿಷನ್ ಸಾಹಸಿ’ ಕಾರ್ಯಕ್ರಮ ಹೆಣ್ಣು ಮಕ್ಕಳಿಗೆ ಪೂರಕವಾಗಿದೆ. ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ವಿರೋಧಿ ಹಾಗೂ ಆತ್ಮ ರಕ್ಷಣೆ ಕಾರ್ಯಕ್ರಮಗಳ ಬೆಂಗಾವಲಾಗಿದೆ ಎಂದು ಸ್ಥಳೀಯರಾದ ಕನ್ನಡ ಚಿತ್ರನಟ ರವಿತೇಜ ಹೊಸಕೆರೆ ಹೇಳಿದರು.
ಅಖೀಲ ಭಾರತ ವಿದ್ಯಾರ್ಥಿ ಪರಿಷತ್ ಪಟ್ಟಣದ ಜೆಸಿಐ ಸಭಾಂಗಣದಲ್ಲಿ ಆಯೋಜಿಸಿದ್ದ “ಮಿಷನ್ ಸಾಹಸಿ’ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಹೆಣ್ಣುಮಕ್ಕಳು ಜನ್ಮತಃ ಧೈರ್ಯಶಾಲಿಗಳು. ಆದರೆ, ಸಮಾಜದಲ್ಲಿ ಅವರ ಮೇಲೆ ನಿರಂತರವಾಗಿ ಆಗುತ್ತಿರುವ ಶೋಷಣೆಗಳಿಂದಾಗಿ ತಮ್ಮ ಧೈರ್ಯ ಪ್ರದರ್ಶಿಸಲು ಹಿಂದೇಟು ಹಾಕುತ್ತಿದ್ದಾರೆ. ಒಬ್ಬ ಹೆಣ್ಣು ಮಗಳು ವಿವಿಧ ಆಯಾಮಗಳಲ್ಲಿ ತನ್ನ ಪಾತ್ರಗಳನ್ನು ಜವಾಬ್ದಾರಿಯುತವಾಗಿ ನಿರ್ವಹಣೆ ಮಾಡುತ್ತಾಳೆ. ಹಣ್ಣುಮಕ್ಕಳನ್ನು ತಾಯಿಗೆ ಹೋಲಿಕೆ ಮಾಡಿ ಗೌರವಿಸುವ ಸಂಸ್ಕೃತಿ ನಮ್ಮದು. ಹೈದರಾಬಾದ್ನಲ್ಲಿ ನಡೆದ ಅತ್ಯಾಚಾರ ಪ್ರಕರಣ ಎಲ್ಲರೂ ತಲೆ ತಗ್ಗಿಸಬೇಕಾದ ಕೃತ್ಯ ಎಂದು ಬೇಸರ ವ್ಯಕ್ತಪಡಿಸಿದರು.
ಸಮಾಜದ ಕೆಲವು ಘಾತುಕ ಶಕ್ತಿಗಳಿಂದ ಆಗುವ ದೌರ್ಜನ್ಯದಿಂದಾಗಿ ವಿಶ್ವದ ಎದುರು ತಲೆ ತಗ್ಗಿಸುವಂತಾಗಿದೆ. ಎಲ್ಲರೂ ಸಮಾನ ಮನಸ್ಕರಾಗಿ ಇಂತಹ ಕೆಟ್ಟ ಘಟನೆಗಳ ವಿರುದ್ಧ ಹೋರಾಡಬೇಕು ಎಂದರು. ಹೆಣ್ಣುಮಕ್ಕಳು ಸಮಾಜದಲ್ಲಿ ಮುಂದೆ ಬರುವುದರ ಭರದಲ್ಲಿ ತಮ್ಮ ಸಂಸ್ಕೃತಿಯನ್ನು ಕಡೆಗಣಿಸಬಾರದು. ಪ್ರಾಕೃತಿಕವಾಗಿ ತಮಗೆ ಇರುವ ಇತಿಮಿತಿಗಳನ್ನು ಅರಿತು ಮುಂದುವರೆಯುವುದು ಎಲ್ಲಾ ದೃಷ್ಟಿಯಿಂದ ಒಳಿತು. ಸಾಮಾಜಿಕ ಜಾಲತಾಣಗಳಲ್ಲಿ ತಮ್ಮನ್ನು ಹೆಚ್ಚು ತೊಡಗಿಸಿಕೊಳ್ಳುವುದನ್ನು ಕಡಿಮೆ ಮಾಡಬೇಕು. ಅಪರಿಚಿತ ವ್ಯಕ್ತಿಗಳ ಬಳಿ ತಮ್ಮ ಖಾಸಗಿ ವಿಚಾರಗಳನ್ನು ಹಂಚಿಕೊಳ್ಳುವುದನ್ನು ಮಾಡಬಾರದು. ಹೆಣ್ಣು ಮಕ್ಕಳು ಕ್ಲಿಷ್ಟಕರ ಸನ್ನಿವೇಶಗಳನ್ನು ಎದುರಿಸಲು ಆತ್ಮ ರಕ್ಷಣೆ ಮಾಡಿಕೊಳ್ಳುವಂತಹ ಕಲೆಗಳನ್ನು ಕಲಿಯಬೇಕು. ಮಿಷನ್ ಸಾಹಸಿ ಇಂತಹ ಕಾರ್ಯಗಳಿಗೆ ವೇದಿಕೆ ಕ್ಲಪಿಸಿ ಕೊಡುತ್ತಿದೆ. ಇದೊಂದು ಉತ್ತಮ ಪ್ರಯತ್ನ. ಇಂತಹ ಕಾರ್ಯಗಳು ಎಲ್ಲೆಡೆ ನಡೆಯಬೇಕು ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ದೀಕ್ಷಿತ್ ಅವರು, 1949ರ ಜುಲೈ 9ರಂದು ಸ್ಥಾಪನೆಯಾದ ಅಖೀಲ ಭಾರತ ವಿದ್ಯಾರ್ಥಿ ಪರಿಷತ್, ಹಲವಾರು ಚಳವಳಿಗಳಲ್ಲಿ ಭಾಗವಹಿಸಿ ತನ್ನದೇ ಆದ ಸೇವೆ ಮಾಡುತ್ತ ಬಂದಿದೆ. ಇದರ ಯಶಸ್ಸು ಇಂದು ಹೆಚ್ಚು ಹೆಚ್ಚು ವಿದ್ಯಾರ್ಥಿಗಳನ್ನು ತರಬೇತು ಮಾಡಿ ದೇಶಕ್ಕೆ ಕೊಡುಗೆ ನೀಡುವ ಕಾರ್ಯದಲ್ಲಿ ನಿರತವಾಗಿದೆ. ನಾಯಕತ್ವದ ಗುಣ, ಅನ್ಯಾಯಗಳ ವಿರುದ್ಧ ಪ್ರತಿಭಟಿಸುವುದು ಸೇರಿದಂತೆ ಸಮಾಜಮುಖೀ ಕಾರ್ಯಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದೆ ಎಂದರು.
ಕಾರ್ಯಕ್ರಮದಲ್ಲಿ ನಿವೃತ್ತ ಯೋಧ ವಾಸು ಅವರು ವಿದ್ಯಾರ್ಥಿನಿಯರಿಗೆ ಕರಾಟೆ ಮಾಡಿಸುವ ಮೂಲಕ ಆತ್ಮರಕ್ಷಣೆ ಕಲೆಗಳ ಮಹತ್ವ ತಿಳಿಸಿಕೊಟ್ಟರು. ವೇದಿಕೆಯಲ್ಲಿ ಎಬಿವಿಪಿ ಜಿಲ್ಲಾ ವಿದ್ಯಾರ್ಥಿನಿ ಪ್ರಮುಖ ಬೆಟ್ಟಗೆರೆ ಕೀರ್ತನಾ, ಜಿಲ್ಲಾ ವಿದ್ಯಾರ್ಥಿ ಪ್ರಮುಖ್ ಗುತ್ತಿ ಶಶಾಂಕ್, ನಗರ ಕಾರ್ಯದರ್ಶಿ ಲೋಕವಳ್ಳಿ ಸ್ವಾತಿ ಇದ್ದರು. ಕೆಂಜಿಗೆ ಪ್ರಾಪ್ತಿ ಸ್ವಾಗತಿಸಿ, ನಿಶ್ಚಿತ ಪ್ರಾರ್ಥಿಸಿ, ಹೇಮಾ ವಂದನಾರ್ಪಣೆ ಮಾಡಿದರು. ಕಾರ್ಯಕ್ರಮದಲ್ಲಿ ಸ್ಥಳೀಯರು ಸೇರಿದಂತೆ ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Devaramane; ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರವಾಸಿಗರು ಪಾರು
Charmady ಘಾಟಿಯಲ್ಲಿ ಕೆಟ್ಟು ನಿಂತ 16 ಚಕ್ರದ ಲಾರಿ… ಕಿ.ಮೀ.ಗಟ್ಟಲೆ ಟ್ರಾಫಿಕ್ ಜಾಮ್
420 ನಂಬರ್ನವರಿಂದ 400 ಸ್ಥಾನ ಗೆಲ್ಲುವ ಮಾತು… ಬಿಜೆಪಿ ವಿರುದ್ಧ ಪ್ರಕಾಶ್ ರಾಜ್ ಕಿಡಿ
Chikkamagaluru: ಈಶ್ವರಪ್ಪನವರ ಬಂಡಾಯ ನಿರ್ಧಾರದಿಂದ ಪಕ್ಷಕ್ಕೆ ಮಾರಕವಾಗಬಾರದು: ಸಿಟಿ ರವಿ
ಈಶ್ವರಪ್ಪ ಬಂಡಾಯ ಸ್ಪರ್ಧೆ: ಶೀಘ್ರದಲ್ಲಿ ಗೊಂದಲಗಳು ಬಗೆಹರಿಯುತ್ತದೆ; ಕೋಟ ಶ್ರೀನಿವಾಸ ಪೂಜಾರಿ
MUST WATCH
ಹೊಸ ಸೇರ್ಪಡೆ
ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!
Pan India: ಯಶ್ ʼಟಾಕ್ಸಿಕ್ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ
ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ
Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್