ಪಡಿತರಕ್ಕಾಗಿ ಪ್ರತಿಭಟನೆ : ಕಳ್ಳಿಕೊಪ್ಪಲು ಗ್ರಾಮಕ್ಕೆ ಭೇಟಿ ನೀಡಿದ ಶಾಸಕ ಸಿಟಿ ರವಿ
Team Udayavani, May 30, 2021, 1:00 PM IST
ಚಿಕ್ಕಮಗಳೂರು : ಕಳಸಾಪುರ ಗ್ರಾಮದ ನ್ಯಾಯಬೆಲೆ ಅಂಗಡಿ ಎದುರು ಕಳ್ಳಿಕೊಪ್ಪಲು ಗ್ರಾಮಸ್ಥರು ರೇಷನ್ ವಿಚಾರವಾಗಿ ಪ್ರತಿಭಟನೆ ನಡೆಸಿದ ಬೆನ್ನಲ್ಲೆ ಇಂದು ( ಮೇ.30) ಶಾಸಕ ಸಿ.ಟಿ ರವಿ ಗ್ರಾಮಕ್ಕೆ ಭೇಟಿ ನೀಡಿ ಸಮಸ್ಯೆ ಆಲಿಸಿದರು.
ಈ ವೇಳೆ ಮಾತನಾಡಿದ ಶಾಸಕರು, ನಾನು ಅಕ್ಕಿ ಕೊಟ್ಟಿರಲಿಲ್ಲ, ನಾನು ಕೊಟ್ಟಿದ್ದು ಸಾಂಬಾರು ಪದಾರ್ಥ ವಸ್ತುಗಳು. ಗ್ರಾಮ ಪಂಚಾಯಿತಿಯವರು ನಿಮಗೆ ಅಕ್ಕಿ ನೀಡಿದ್ದಾರೆ. ಅವರು ಪೂರ್ಣ ಪ್ರಮಾಣದಲ್ಲಿ ನೀಡದಿದ್ರೆ ಅಕ್ಕಿ, ಗೋಧಿ ನೀಡಲು ತಹಶೀಲ್ದಾರ್ ಗೆ ಹೇಳಿದ್ದೇನೆ ಎಂದು ಭರವಸೆ ನೀಡಿದರು.
ಕಳ್ಳಿಕೊಪ್ಪಲು ಗ್ರಾಮದಲ್ಲಿ ಸೋಂಕಿಗೆ ತುತ್ತಾಗಿದ್ದ ಕುಟುಂಬಗಳು ನ್ಯಾಯಬೆಲೆ ಅಂಗಡಿಯಲ್ಲಿ ತಮಗೆ ಸರಕಾರದ ರೇಷನ್ ನೀಡುತ್ತಿಲ್ಲ ಎಂದು ಆರೋಪಿಸಿ ಶನಿವಾರ ಕಳಸಾಪುರ ಗ್ರಾಮದ ನ್ಯಾಯಬೆಲೆ ಅಂಗಡಿ ಎದುರು ಧರಣಿ ನಡೆಸಿದ್ದರು.
ಕಳ್ಳಿಕೊಪ್ಪಲು ಗ್ರಾಮದ 47 ಕುಟುಂಬದ 75 ಜನರಿಗೆ ಪಾಸಿಟಿವ್ ಬಂದಿತ್ತು. ಎಲ್ಲರಿಗೂ ಕ್ವಾರಂಟೈನ್ ಮಾಡಿ ತಾಲೂಕು ಆಡಳಿತ ಕಿಟ್ ನೀಡಿತ್ತು. 10 ಕೆ.ಜಿ. ಅಕ್ಕಿ, ಎಣ್ಣೆ, ಬೆಳೆ, ಉಪ್ಪು ಸೇರಿ ವಿವಿಧ ಸಾಮಾಗ್ರಿಗಳ ಕಿಟ್ ನೀಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್