![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-415x218.jpg)
ಆರ್ಥಿಕ ಗಣತಿಗೆ ಮೊಬೈಲ್ ಆ್ಯಪ್
Team Udayavani, Jan 3, 2020, 3:18 PM IST
![cm-tdy-1](https://www.udayavani.com/wp-content/uploads/2020/01/cm-tdy-1-620x191.jpg)
ಚಿಕ್ಕಮಗಳೂರು: ದೇಶದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಮೊಬೈಲ್ ಆ್ಯಪ್ ಮೂಲಕ ಆರ್ಥಿಕ ಗಣತಿ ಕಾರ್ಯ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್ ಹೇಳಿದರು.
ನಗರದ ಜಿಲ್ಲಾ ಪಂಚಾಯತ್ ಕಚೇರಿಯ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಗುರುವಾರ ನಡೆದ ಗಣತಿದಾರರ ಕಾರ್ಯಾಗಾರದಲ್ಲಿ ಮೊಬೈಲ್ ಆ್ಯಪ್ ತಂತ್ರಾಂಶ ಬಿಡುಗಡೆ ಮಾಡಿ ಅವರು ಮಾತನಾಡಿದರು.
ಭಾರತ ಸರ್ಕಾರ ಈಗಾಗಲೇ 6 ಆರ್ಥಿಕ ಗಣತಿಗಳನ್ನು ಪೂರೈಸಿದೆ. 7ನೇ ಆರ್ಥಿಕ ಗಣತಿಯನ್ನು ವಿಶೇಷವಾಗಿ ಪ್ರಾರಂಭಿಸುವ ಉದ್ದೇಶದಿಂದ ಮೊಬೈಲ್ ಆ್ಯಪ್ ತಂತ್ರಾಂಶದ ಮೂಲಕ ಗಣತಿ ಕೈಗೊಳ್ಳಲು ನಿರ್ಧರಿಸಿದೆ ಎಂದು ಹೇಳಿದರು.
ಈಗಾಗಲೇ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗಣತಿಗೆ ಚಾಲನೆ ಸಿಕ್ಕಿದ್ದು, ಕಾರಣಾಂತರಗಳಿಂದ ನಮ್ಮ ಜಿಲ್ಲೆಯಲ್ಲಿ 6 ತಿಂಗಳು ವಿಳಂಬವಾಗಿದೆ. ಸದ್ಯ ಗಣತಿ ಕಾರ್ಯವನ್ನು ಮಾ.15ರ ಒಳಗೆ ಸಂಪೂರ್ಣಗೊಳಿಸಬೇಕಿದೆ. ಇದೊಂದು ಕೇವಲ ಆರ್ಥಿಕ ಸಮೀಕ್ಷೆಯಾಗಿದ್ದು, ಜಿಲ್ಲೆಯ ಎಲ್ಲಾ ಸಂಘಟಿತ ಮತ್ತು ಅಸಂಘಟಿತ ವಲಯದ ವ್ಯಕ್ತಿಗಳ ಆದಾಯ ಮತ್ತು ಉದ್ಯಮ ಪಟ್ಟಿಗಳ ಕುರಿತು ಮಾಹಿತಿ ಕಲೆಹಾಕಬೇಕಿದೆ ಎಂದರು.
ಇದೊಂದು ಮಹತ್ವದ ಗಣತಿ ಕಾರ್ಯವಾಗಿದ್ದು, ಗಣತಿದಾರರು ಮನೆ ಮನೆಗೆ ತೆರಳಿ ದತ್ತಾಂಶಗಳನ್ನು ಸರಿಯಾದ ರೀತಿಯಲ್ಲಿ ಕಲೆಹಾಕಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು. ಸಾಮಾನ್ಯ ಸೇವಾ ಕೇಂದ್ರದಡಿಯಲ್ಲಿ ಗಣತಿದಾರರನ್ನು ನೇಮಿಸಲಾಗಿದ್ದು, ಜಿಲ್ಲೆಯಲ್ಲಿರುವ ಒಟ್ಟು 1117 ಗ್ರಾಮಗಳಲ್ಲಿ ಹಾಗೂ 9 ನಗರ ಪ್ರದೇಶಗಳ ವ್ಯಾಪ್ತಿಯಲ್ಲಿನ ಮನೆ, ಉದ್ಯಮಗಳಲ್ಲಿನ ಆರ್ಥಿಕ ದತ್ತಾಂಶಗಳನ್ನು ಮೊಬೈಲ್ ಆ್ಯಪ್ ಮೂಲಕ ಸಂಗ್ರಹಿಸುವಂತೆ ತಿಳಿಸಿದರು.
ಈ ವೇಳೆ ಮನೆಗಳಿಗೆ ಭೇಟಿ ನೀಡುವ ಗಣತಿದಾರರಿಗೆ ಸಾರ್ವಜನಿಕರು ಅಗತ್ಯ ಮಾಹಿತಿ ನೀಡುವುದರ ಮೂಲಕ ಸಹಕರಿಸುವಂತೆ ಕೋರಿದರು. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಹನುಮಂತಪ್ಪ, ಜಿಲ್ಲಾ ಸಾಂಖೀಕ ಸಂಗ್ರಹಣಾಧಿಕಾರಿ ಕರೇಗೌಡ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಜಂಟಿ ನಿರ್ದೇಶಕ ಸಿದ್ದರಾಜು ಮತ್ತು ಪಿಎಸ್ಐ ರಮ್ಯಾ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-415x218.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-aaaa](https://www.udayavani.com/wp-content/uploads/2024/07/1-aaaa-8-150x100.jpg)
ಚಾರ್ಮಾಡಿ ಘಾಟಿ ; ರಸ್ತೆಗೆ ಅಡ್ಡಲಾಗಿ ಬಿದ್ದ ಮರ: ವಾಹನ ಸಂಚಾರಕ್ಕೆ ತಾತ್ಕಾಲಿಕ ತಡೆ
![1-sadasd](https://www.udayavani.com/wp-content/uploads/2024/07/1-sadasd-150x90.jpg)
July27;ಚಿಕ್ಕಮಗಳೂರಿನ 6 ತಾಲೂಕುಗಳಲ್ಲಿ ಪ್ರೌಢ ಶಾಲೆಗಳವರೆಗೆ,ಕೊಡಗಿನಲ್ಲಿ ಪಿಯುಸಿವರೆಗೆ ರಜೆ
![N.R.Pura; ಸೊಂಟಕ್ಕೆ ವೈರ್ ಕಟ್ಟಿಕೊಂಡು ಈಜಿ ಕೆಲಸ ಮಾಡಿದ ಲೈನ್ ಮ್ಯಾನ್; ವಿಡಿಯೋ ವೈರಲ್](https://www.udayavani.com/wp-content/uploads/2024/07/lineman-150x83.jpg)
N.R.Pura; ಸೊಂಟಕ್ಕೆ ವೈರ್ ಕಟ್ಟಿಕೊಂಡು ಈಜಿ ಕೆಲಸ ಮಾಡಿದ ಲೈನ್ ಮ್ಯಾನ್; ವಿಡಿಯೋ ವೈರಲ್
![Rain: ರಾಷ್ಟ್ರೀಯ ಹೆದ್ದಾರಿಗೆ ಉರುಳಿ ಬಿದ್ದ ಮರ… ತಪ್ಪಿದ ಭಾರಿ ಅನಾಹುತ, ಕಾರುಗಳು ಜಖಂ](https://www.udayavani.com/wp-content/uploads/2024/07/mara-1-150x101.jpg)
Rain: ರಾಷ್ಟ್ರೀಯ ಹೆದ್ದಾರಿಗೆ ಉರುಳಿ ಬಿದ್ದ ಮರ… ತಪ್ಪಿದ ಭಾರಿ ಅನಾಹುತ, ಕಾರುಗಳು ಜಖಂ
![Kadur; ಪಶ್ಚಿಮ ಘಟ್ಟಗಳ ಸಾಲಿನ ಭಾರೀ ಮಳೆ; ಕೋಡಿ ಬಿದ್ದ ಮದಗದ ಕೆರೆ](https://www.udayavani.com/wp-content/uploads/2024/07/madaga-150x83.jpg)
Kadur; ಪಶ್ಚಿಮ ಘಟ್ಟಗಳ ಸಾಲಿನ ಭಾರೀ ಮಳೆ; ಕೋಡಿ ಬಿದ್ದ ಮದಗದ ಕೆರೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.