Moodigere; ಕಂಠಪೂರ್ತಿ ಕುಡಿದು ನಡುರಸ್ತೆಯಲ್ಲಿ ಮಲಗಿದ! ಜೀವ ಉಳಿಸಿತು ಬೈಕ್ ಇಂಡಿಕೇಟರ್
Team Udayavani, Oct 9, 2023, 12:20 PM IST
ಚಿಕ್ಕಮಗಳೂರು: ಕುಡಿದು ಬೈಕ್ ನಲ್ಲಿ ಹೋಗುತ್ತಿದ್ದ ವ್ಯಕ್ತಿ ಬೈಕ್ ಓಡಿಸಲಾಗದೆ ರಸ್ತೆ ಮಧ್ಯೆ ಬೈಕ್ ನಿಲ್ಲಿಸಿ ನಡು ರಸ್ತೆಯಲ್ಲೇ ಮಲಗಿದ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಸಬ್ಬೇನಹಳ್ಳಿ ಗ್ರಾಮದಲ್ಲಿ ಭಾನುವಾರ ರಾತ್ರಿ ನಡೆದಿದೆ.
ಹಾಸನದಿಂದ ಸಂಬಂಧಿಕರ ಮನೆಗೆ ಮೂಡಿಗೆರೆ ತಾಲೂಕಿನ ಬಣಕಲ್ ಗ್ರಾಮಕ್ಕೆ ಬರುತ್ತಿದ್ದ ವೇಳೆ ವಿಪರೀತ ಮದ್ಯಪಾನ ಮಾಡಿದ ವ್ಯಕ್ತಿಗೆ ಬೈಕ್ ಓಡಿಸಲು ಸಾಧ್ಯವಾಗಿಲ್ಲ. ಪರಿಣಾಮ ಬಣಕಲ್ ಸಮೀಪದ ಹೆದ್ದಾರಿಯಲ್ಲಿ ಬೈಕ್ ನಿಲ್ಲಿಸಿ ವ್ಯಕ್ತಿ ರಸ್ತೆ ಮದ್ಯೆ ಮಲಗಿದ್ದಾನೆ. ಈ ರಸ್ತೆಯಲ್ಲಿ ಹೋಗುತ್ತಿದ್ದ ಸವಾರೊಬ್ಬರು ಅಪಘಾತವಾಗಿರವಹುದೆಂದು ಬಾವಿಸಿ ಆಂಬ್ಯುಲೆನ್ಸ್ ಗೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ಸೈರನ್ ನೊಂದಿಗೆ ಆಂಬ್ಯುಲೆನ್ಸ್ ಸ್ಥಳಕ್ಕೆ ಬರುತ್ತಿದ್ದಂತೆ ಎಚ್ಚರಗೊಂಡ ವ್ಯಕ್ತಿ ಮದ್ಯಪಾನ ಮಾಡಿದ್ದರಿಂದ ಬೈಕ್ ಓಡಿಸಲಾಗದೆ ರಸ್ತೆಯಲ್ಲಿ ಮಲಗಿದ್ದೇ ಎಂದು ತಿಳಿಸಿ ಸ್ಥಳದಿಂದ ತೆರಳಿದ್ದಾನೆ.
ಇದನ್ನೂ ಓದಿ:CWC2023: ಪ್ಲ್ಯಾನ್ ಮಾಡಿದ್ದು ಒಂದು, ಆಗಿದ್ದು ಮತ್ತೊಂದು; ರಾಹುಲ್ ಈ ಅಚ್ಚರಿಯ ಕಾರಣ ಬಹಿರಂಗ
ವ್ಯಕ್ತಿ ರಸ್ತೆಯಲ್ಲಿ ಮಲಗಿದ್ದ ವೇಳೆ ನೂರಾರು ವಾಹನಗಳು ಇದೇ ರಸ್ತೆಯಲ್ಲಿ ಸಂಚರಿಸಿದ್ದು, ಬೈಕ್ ಇಂಡಿಕೇಟರ್ ಚಾಲನೆಯಲ್ಲಿ ಇದ್ದಿದ್ದರಿಂದ ಅಪಘಾತ ತಪ್ಪದೆ ಎಂದು ತಿಳಿದು ಬಂದಿದೆ. ಈ ಸಂಬಂಧ ಬಣಕಲ್ ಪೊಲೀಸರು ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ