ಪೊಲೀಸ್ ಗೆ ಆವಾಜ್ ಹಾಕಿದ ಮೂಡಿಗೆರೆ ಶಾಸಕ ಕುಮಾರಸ್ವಾಮಿ; ಆಡಿಯೋ ವೈರಲ್
ಐಜಿ ಗೆ ಲಂಚ ಕೊಟ್ಟು ಬಂದಿದ್ದಿ, ಬಂದ ದಾರಿಯಲ್ಲೇ ಹಿಂದೆ ಹೋಗು..!
Team Udayavani, May 6, 2022, 10:37 AM IST
ಚಿಕ್ಕಮಗಳೂರು: ಪದೇ ಪದೇ ಸುದ್ದಿಯಲ್ಲಿರುವ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಮತ್ತೆ ನಾಲಿಗೆ ಹರಿಬಿಟ್ಟು ಸುದ್ದಿಯಾಗಿದ್ದಾರೆ.
ಮಲ್ಲಂದೂರು ಪೊಲೀಸ್ ಠಾಣೆಗೆ ಹೊಸದಾಗಿ ಚಾರ್ಜ್ ತೆಗೆದುಕೊಂಡ ಪೊಲೀಸ್ ಇನ್ಸ್ಪೆಕ್ಟರ್ ಗೆ ಏಕವಚನದಲ್ಲಿ ಅವಾಜ್ ಹಾಕಿ ಬಾಯಿಗೆ ಬಂದಂತೆ ನಿಂದಿಸಿದ್ದಾರೆ.
ಚಿಕ್ಕಮಗಳೂರು ತಾಲ್ಲೂಕು ಮಲ್ಲಂದೂರು ಠಾಣೆಯ ಇನ್ಸ್ಪೆಕ್ಟರ್ ರವೀಶ್ ಗೆ ಆವಾಜ್ ಹಾಕಿ ನಿಂದಿಸಿದ್ದಾರೆ. ಯಾರನ್ನ ಕೇಳಿ ಚಾರ್ಜ್ ತೆಗೆದುಕೊಂಡೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಲ್ಲಿದ್ದೀಯಾ? ನಿನ್ನನ್ನ ಇಲ್ಲಿಗೆ ಬರಬೇಡ ಎಂದು ಹೇಳಿದ್ದೆ ತಾನೆ? ಮತ್ತೆ ಏಕೆ ಬಂದಿದ್ದೀಯಾ? ನೀನು ವಾಪಸ್ ಹೋಗು, ವಾಪಸ್ ಹೋಗು, ಠಾಣೆಯಲ್ಲಿ ಇರಬೇಡ, ಮರ್ಯಾದೆಯಿಂದ ವಾಪಸ್ ಹೋಗೊಲೇ.! ನಾನು ಹೇಳಿದ ಹಾಗೆ ಕೇಳು, ಬೇಕಾದ್ರೆ ರೆಕಾರ್ಡ್ ಮಾಡ್ಕೋ. ಬಂದ ರೀತಿಯಲ್ಲೇ ವಾಪಸ್ ಹೋಗು, ನಾಳೆಯೇ ನಿನ್ನ ಡೆಪ್ಟೇಶನ್ ಮಾಡಿಸುತ್ತೇನೆ. ಐಜಿಗೆ ಎಷ್ಟು ಲಂಚ ಕೊಟ್ಟಿದ್ದೀಯಾ.? ಯಾವನೂ ಐಜಿ.? ಐಜಿಯಲ್ಲ, ಮೂಡಿಗೆರೆಲಿ ಎಲ್ಲ ನಾನೆ! ನನ್ನನ್ನು ನೋಡಲು ಬಂದ್ರೆ ಒದ್ದು ಓಡಿಸುತ್ತೇನೆ ಎಂದು ನಿಂದಿಸಿದ್ದಾರೆ.
ಇದನ್ನೂ ಓದಿ:ಪಿಎಸ್ಐ ನೇಮಕಾತಿ ಹಗರಣ: ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಲು ವಿಶೇಷ ಅಭಿಯೋಜಕರ ನೇಮಕ
ಇದೆ ವೇಳೆ ಶಾಸಕ ಕುಮಾರಸ್ವಾಮಿ ಐಜಿ ಅವರನ್ನು ನಿಂದಿಸಿದ್ದಾರೆ. ಈ ಸಂಬಂಧ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈಗಾಗಲೇ ಬೇಕಾಬಿಟ್ಟಿ ನಾಲಗೆ ಹರಿಬಿಟ್ಟು ಪೇಚೆಗೆ ಸಿಲುಕಿದ್ದ ಎಂ.ಪಿ.ಕುಮಾರಸ್ವಾಮಿ ಈಗ ಮತ್ತದೆ ಎಡವಟ್ಟು ಮಾಡಿಕೊಂಡಿದ್ದಾರೆ.
ಆವಾಜ್ ಹಾಕಿದ್ದು ನಿಜ: ಮಲ್ಲಂದೂರು ಠಾಣಾಧಿಕಾರಿಗೆ ಆವಾಜ್ ಹಾಕಿದ್ದು ನಿಜ, ಆತ ಹೊಸದಾಗಿ ಠಾಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಳ್ಳುವ ವೇಳೆ ಸೌಜನ್ಯಕ್ಕಾದರೂ ನನಗೆ ಮಾಹಿತಿ ನೀಡಿಲ್ಲ. ಭೇಟಿಯಾಗಿಲ್ಲ. ಕ್ಷೇತ್ರದ ಆಗು ಹೋಗುಗಳ ಬಗ್ಗೆ ನನಗೆ ಮಾಹಿತಿ ಬೇಡವೇ? ಆತ ಐಜಿ ಸೇರಿ ಎಲ್ಲರಿಗೂ ಲಂಚ ನೀಡಿ ಬಂದಿದ್ದಾನೆ. ನಾನು ಮಾತನಾಡಿದ್ದನ್ನು ರೆಕಾರ್ಡ್ ಮಾಡಿದ್ದಾನೆ. ಈ ಬಗ್ಗೆ ಆತನ ವಿರುದ್ಧ ಹಕ್ಕು ಚ್ಯುತಿ ಮಂಡಿಸುತ್ತೆನೆ. ನಾನು ಠಾಣಾಧಿಕಾರಿಗೆ ಆವಾಜ್ ಹಾಕಿದ್ದು ನಿಜ, ನನ್ನ ಮಾತಿಗೆ ನಾನು ಈಗಲೂ ಬದ್ಧ, ಅತ ಲಂಚ ನೀಡಿ ಬಂದಿದ್ದಾನೆ. ಭ್ರಷ್ಟರು ನನ್ನ ಕ್ಷೆತ್ರದಲ್ಲಿರಬಾರದು ಎಂದು ಶಾಸಕ ಎಂ.ಪಿ.ಕುಮಾರಸ್ವಾಮಿ ಸಮರ್ಥನೆ ಮಾಡಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
MUST WATCH
ಹೊಸ ಸೇರ್ಪಡೆ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ