ಸಾಮಾಜಿಕ ಅಂತರ ಕಾಪಾಡಿ
Team Udayavani, May 20, 2020, 4:48 PM IST
ಸಾಂದರ್ಭಿಕ ಚಿತ್ರ
ಮೂಡಿಗೆರೆ: ಚಾಲಕರು ಸಾಮಾಜಿಕ ಜವಾಬ್ದಾರಿ ವಹಿಸಿಕೊಂಡು ತಮ್ಮ ವೃತ್ತಿ ನಿರ್ವಹಣೆ ಮಾಡಿದ್ದಲ್ಲಿ ಕುಟುಂಬದ ಹಾಗೂ ಸಮಾಜದ ಹಿತವನ್ನು ಕಾಪಾಡಬಹುದು ಎಂದು ಕಳಸ ಸರ್ಕಾರಿ ಆಸ್ಪತ್ರೆಯ ವೈದ್ಯ ಡಾ| ಪ್ರೇಮ್ ಕುಮಾರ್ ಅಭಿಪ್ರಾಯಪಟ್ಟರು.
ಕೋವಿಡ್ ಮುಕ್ತ ಕಳಸ ವಾಟ್ಸ್ಆ್ಯಪ್ ಗ್ರೂಪ್ ವತಿಯಿಂದ ಆಶೀರ್ವಾದ್ ಕಂಫರ್ಟ್ಸ್ ನಲ್ಲಿ ಆಯೋಜಿಸಲಾಗಿದ್ದ ಪ್ರಯಾಣಿಕ ಹಾಗೂ ಸರಕು ವಾಹನಗಳ ಚಾಲಕರು ಹಾಗೂ ಮಾಲೀಕರಿಗೆ ಆರೋಗ್ಯ ಜಾಗೃತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಚಾಲಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಕಣ್ಣಿಗೆ ಕನ್ನಡಕ ಧರಿಸಬೇಕು. ತಮ್ಮ ವಾಹನಗಳಿಗೆ ಹತ್ತುವಾಗ ಮತ್ತು ಇಳಿಯುವಾಗ ಕಡ್ಡಾಯವಾಗಿ ಸ್ಯಾನಿಟೈಸರ್ ಧರಿಸಬೇಕು ಎಂದರು.
ಕುದುರೆಮುಖ ಠಾಣಾಧಿಕಾರಿ ನಂಜಪ್ಪ ಮಾತನಾಡಿ, ಆರೋಗ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಮೇಲೆ ಹೆಚ್ಚಿನ ಒತ್ತಡ ಇದೆ. ಬಹುತೇಕ ಸಾರ್ವಜನಿಕರು ನಮ್ಮ ಮನವಿಗಳಿಗೆ ಸ್ಪಂದನೆ ನೀಡಿ ಸಹಕರಿಸುತ್ತಿದ್ದಾರೆ ಎಂದರು. ಕಾರ್ಯಾಗಾರಕ್ಕೆ ಬಂದಿದ್ದ ಸುಮಾರು 60 ಮಂದಿ ಚಾಲಕರುಗಳಿಗೆ ಹಾಗೂ ವಾಹನಗಳ ಮಾಲೀಕರುಗಳಿಗೆ ಸ್ಯಾನಿಟೈಸರ್ ಹಾಗೂ ಮಾಸ್ಕ್ ವಿತರಿಸಲಾಯಿತು. ಕಳಸ ವಾಟ್ಸ್ಆ್ಯಪ್ ಗ್ರೂಪ್ ಅಡ್ಮಿನ್ ರವಿ ಕೆಳಂಗಡಿ, ಕುದುರೆಮುಖ ವೃತ್ತ ನಿರೀಕ್ಷಕ ವಿಜಯ್ ಕುಮಾರ್, ಉದ್ಯಮಿ ರವಿ ರೈ, ವೈದ್ಯ ಡಾ|ವಿಕ್ರಮ್ ಪ್ರಭು, ಕಳಸ ಠಾಣಾ ಹೆಡ್ ಕಾನ್ಸಸ್ಟೇಬಲ್ ರಾಜಣ್ಣ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ
9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್ಡಿಡಿ
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!