ಮೂಡಿಗೆರೆ: ಸಂಭ್ರಮದ ತುಳು ವೈಭವೋ

ಹನ್ನೊಂದನೇ ವರ್ಷದ ಅದ್ಧೂರಿ ಸಮಾರಂಭಕ್ಕೆ ಸಾಕ್ಷಿಯಾದ ಸಮಸ್ತ ತುಳು ಭಾಷಿಕರು

Team Udayavani, Feb 16, 2020, 1:32 PM IST

16-February-12

ಮೂಡಿಗೆರೆ: ತಾಲೂಕು ಸೇರಿದಂತೆ ಸುತ್ತಮುತ್ತಲಿನ ಎಲ್ಲಾ ತುಳು ಭಾಷಿಕರನ್ನು ಒಂದೇ ವೇದಿಕೆಯಲ್ಲಿ ಸೇರಿಸುವ ಉದ್ದೇಶದಿಂದ ಪಟ್ಟಣ ಅಡ್ಯಂತಾಯ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ “ತುಳು ವೈಭವೋ’ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು.

ಕರ್ನಾಟಕ ತುಳು ಸಾಹಿತ್ಯ ಅಕಾಡಮಿ ಸಹಯೋಗದಲ್ಲಿ ಮೂಡಿಗೆರೆ ತುಳುಕೂಟದ ವತಿಯಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಮೂಡಿಗೆರೆ ಕಲಾ ಭಾರತಿ ನೃತ್ಯ ಶಾಲೆಯ ವಿದ್ವಾನ್‌ ದಯಾನಂದ ಸಾಗರ್‌ ಅವರ ಸಾರಥ್ಯದಲ್ಲಿ ನೃತ್ಯ ಕಾರ್ಯಕ್ರಮ ನಡೆಸಿಕೊಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ನೃತ್ಯ ರೂಪಕದಲ್ಲಿದ್ದ ಶಿವ ತಾಂಡವ, ಭಕ್ತ ಪ್ರಹ್ಲಾದ ಮತ್ತು ವಿವಿಧ ಶೈಲಿಯ ವೈವಿಧ್ಯಮಯ ನೃತ್ಯ ಪ್ರಕಾರಗಳು ಜನಮನ ಸೂರೆಗೊಂಡವು. ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ತುಳು ಸಾಹಿತ್ಯ ಅಕಾಡಮಿ ಅಧ್ಯಕ್ಷ ದಯಾನಂದ ಜಿ. ಕತ್ತಲ್‌ ಅವರು, ಕರಾವಳಿ ಭಾಗದಿಂದ ಹೊರಟ ತುಳು ಭಾಷೆ ಇಂದು ವಿಶ್ವಾದ್ಯಂತ ಬೆಳೆದು ನಿಂತಿದೆ. ಬಹುತೇಕರ ಪ್ರಧಾನ ಭಾಷೆಯಾಗಿ ಸಮಾಜದಲ್ಲಿ ಸಾಮರಸ್ಯ ಸೃಷ್ಟಿಸುವ ಜೊತೆಗೆ ಎಲ್ಲ ಧರ್ಮೀಯರಿಗೂ ಮಾತಿನ ರಸದೂಟ ಉಣಬಡಿಸುತ್ತಿದೆ. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯನ್ನು ರಾಜ್ಯ ಸರ್ಕಾರ ಸ್ಥಾಪಿಸಿದ ಬಳಿಕ ತುಳು ಭಾಷೆಗೆ ರಾಜ್ಯಾಂಗದ ಸ್ಥಾನ ದೊರಕಿದೆ. ಆದರೂ, ಈ ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರ್ಪಡೆ ಮಾಡದಿರುವುದು ತುಳು
ಭಾಷಿಕರ ನೋವಿಗೆ ಕಾರಣವಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರು, ತುಳು ಭಾಷೆ ಒಂದು ಗ್ರಾಮೀಣ ಭಾಷೆಯಾಗಿ ಉಳಿದಿಲ್ಲ. ಅದೊಂದು ವಿಶಿಷ್ಟ ರೀತಿಯ ಸಂಸ್ಕೃತಿಯಾಗಿದೆ. ಅದರ ಸಾಮಿಪ್ಯ ಉಂಟಾದಾಗ ಸಮಾಜ ಉತ್ತಮ ರೀತಿಯಲ್ಲಿ ಸಾಗಬಲ್ಲುದು. ಕರ್ನಾಟಕ ತುಳು ಅಕಾಡೆಮಿಯು ಕಾಲಕಾಲಕ್ಕೆ ಅನುದಾನ ಬಿಡುಗಡೆ ಮಾಡುವ ಮೂಲಕ ತುಳು ಕೂಟಕ್ಕೆ ಬೆನ್ನೆಲುಬಾಗಿ ನಿಂತಿದೆ. ಮಲೆನಾಡಿನ ಭಾಗದಲ್ಲಿ ತುಳು ಭಾಷಿಕರು ಹೆಚ್ಚಾಗಿದ್ದು, ಸಮಾಜದಲ್ಲಿ ಅವರ ಸ್ಥಾನ ಉನ್ನತವಾಗಿದೆ ಎಂದರು.

ಸಭಾ ಕಾರ್ಯಕ್ರಮದ ನಂತರ ಮಂಗಳೂರಿನ ತುಳುನಾಡ ರತ್ನ ದಿನೇಶ್‌ ಅತ್ತಾವರ್‌ ನಿರ್ದೇಶನದ “ಇತ್ತೆ ಗೊತ್ತಾಪುಜ್ಜಿ’ ತುಳು ನಾಟಕ ಪ್ರದರ್ಶನಗೊಂಡಿತು. ಕಾರ್ಯಕ್ರಮದಲ್ಲಿ ಬಣಕಲ್‌ ಡಾ.ಎಸ್‌ .ಪದ್ಮನಾಭ ಶೆಟ್ಟಿಗಾರ್‌, ರಾಷ್ಟ್ರಮಟ್ಟದ ವಾಲಿಬಾಲ್‌ ಆಟಗಾರ್ತಿ ಕಮ್ಮರಗೋಡಿನ ಕುಮಾರಿ ನಿಖೀತಾ ಕೆ. ಹಾಗೂ ವಂಡರ್‌ ಬುಕ್‌ ಆಫ್‌ ವರ್ಲ್ಡ್ ರೆಕಾರ್ಡ್‌ ಪ್ರತಿಭೆ ಮಾ.ತಕ್ವಿಲ್‌ ಎಂ. ದೇವಾಡಿಗ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ನಿರ್ವಹಣೆಯನ್ನು ತುಳು ಕೂಟದ ಅಧ್ಯಕ್ಷ ಪಿ.ವಿಶ್ವಕುಮಾರ್‌ ವಹಿಸಿದ್ದರು.

ತಾ.ಪಂ.ಅಧ್ಯಕ್ಷ ಕೆ.ಸಿ.ರತನ್‌, ಧರ್ಮ ಗುರುಗಳಾದ ಸಿನಾನ್‌ ಫೈಝಿ, ಫಾದರ್‌ ಪೌಲ್‌ ಮಚಾದೋ, ಮುಖಂಡರಾದ ನಿಟ್ಟೆ ಶಶಿಧರ್‌ ಶೆಟ್ಟಿ, ಡಾ| ರಾಮಚರಣ್‌ ಅಂಡ್ಯಂತಾಯ, ಐ.ವಿ.ಆರ್‌. ಪಿಂಟೋ, ಮೂಡಿಗೆರೆ ತುಳು ಕೂಟದ ಸದಸ್ಯರು ಸೇರಿದಂತೆ ನೂರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿದ್ದರು.

ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರ್ಪಡೆ ಮಾಡಲು ತುಳು ಅಕಾಡೆಮಿಯಿಂದ ನಿರಂತರ ಹೋರಾಟ ಮಾಡಲಾಗುವುದು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಸಿ.ಟಿ.ರವಿ ಅವರು ತುಳು ಭಾಷೆಗೆ ಸಂಬಂಧಿ ಸಿದ ಎಲ್ಲಾ ದಾಖಲೆಗಳನ್ನು ಸಂಗ್ರಹಿಸಿ ವರದಿ ಸಲ್ಲಿಸುವಂತೆ ಸೂಚನೆ ನೀಡಿದ್ದಾರೆ. ಸಧ್ಯದಲ್ಲಿಯೇ ತುಳು ಭಾಷೆ 8ನೇ ಪರಿಚ್ಛೇದಕ್ಕೆ ಸೇರ್ಪಡೆ ಆಗುವುದು ಸತ್ಯ.
ದಯಾನಂದ ಜಿ. ಕತ್ತಲ್‌,
ಅಧ್ಯಕ್ಷರು, ತುಳು ಸಾಹಿತ್ಯ ಅಕಾಡಮಿ

ಟಾಪ್ ನ್ಯೂಸ್

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಉಡುಪಿಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Chikkamagaluru; ದೇವೇಗೌಡರು ಆಕಸ್ಮಿಕವಾಗಿ ಪ್ರಧಾನಿಯಾಗಿದ್ದು…: ಸಿಎಂ ಸಿದ್ದರಾಮಯ್ಯ

Chikkamagaluru; ದೇವೇಗೌಡರು ಆಕಸ್ಮಿಕವಾಗಿ ಪ್ರಧಾನಿಯಾಗಿದ್ದು…: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Jamyang Tsering Namgyal missed bjp ticket in ladakh

Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್‌ ಹಾಲಿ ಸಂಸದ ನಮ್‌ಗ್ಯಾಲ್‌ ಗೆ ಕೊಕ್‌

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.