
ಕಾಡಾನೆ ಸೆರೆ ಕಾರ್ಯಾಚರಣೆಗೆ ಮತ್ತೊಂದು ಯಶಸ್ಸು: ಮೂಡಿಗೆರೆಯಲ್ಲಿ ಎರಡನೇ ಪುಂಡಾನೆ ಸೆರೆ
Team Udayavani, Dec 3, 2022, 5:44 PM IST

ಕೊಟ್ಟಿಗೆಹಾರ: ಕಾಡಾನೆಗಳ ಕಾರ್ಯಾಚರಣೆಗೆ ಮತ್ತೊಂದು ಯಶಸ್ಸು ಸಿಕ್ಕಿದೆ, ಕಳೆದ ಮೂರು ತಿಂಗಳಿಂದ ಮೂವರನ್ನು ಬಲಿ ತೆಗೆದುಕೊಂಡಿದ್ದ ಕಾಡಾನೆಗಳ ಪೈಕಿ ಎರಡನೇ ಪುಂಡಾನೆ ಸೆರೆಯಾಗಿದೆ.
ಇಂದು (ಶನಿವಾರ) ಮೂಡಿಗೆರೆ ತಾಲೂಕಿನ ತಳವಾರ ಗ್ರಾಮದಲ್ಲಿ ಕಾಡಾನೆಯನ್ನು ಸೆರೆ ಹಿಡಿಯಲಾಗಿದೆ.
ಕಳೆದ ಮೂರು ತಿಂಗಳಲ್ಲಿ ಮೂವರನ್ನು ಬಲಿ ತೆಗೆದುಕೊಂಡಿದ್ದ ಕಾಡಾನೆಗಳನ್ನು ಸೆರೆಹಿಡಿಯಲು ರಾಜ್ಯ ಸರಕಾರ ಅನುಮತಿ ನೀಡಿತ್ತು, ಅದರಂತೆ ಕಳೆದ ಐದು ದಿನಗಳ ಹಿಂದೆ ಅರಣ್ಯ ಇಲಾಖೆಯಿಂದ ಕಾಡಾನೆ ಕಾರ್ಯಾಚರಣೆ ನಡೆಸಲು ಆರಂಭಿಸಲಾಗಿತ್ತು, ಅದರಂತೆ ಮೊದಲ ದಿನವೇ ಕುಂಡ್ರ ಗ್ರಾಮದಲ್ಲಿ ಮೊದಲ ಪುಂಡಾನೆಯನ್ನು ಹಿಡಿಯುವ ಮೂಲಕ ಮೊದಲ ಯಶಸ್ಸು ಕಂಡಿದ್ದರು ಇದೀಗ ತಳವಾರ ಗ್ರಾಮದಲ್ಲಿ ಮತ್ತೊಂದು ಪುಂಡಾನೆ ಸೆರೆಯಾಗಿದೆ.
5 ಸಾಕಾನೆಗಳಿಂದ ಸತತ ಕಾರ್ಯಾಚರಣೆ ನಡೆಸ್ತಿದ್ದ ಅರಣ್ಯ ಇಲಾಖೆ ಇನ್ನೊಂದು ಪುಂಡಾನೆಯ ಸೆರೆಗೆ ಕಾರ್ಯಾಚರಣೆ ಮುಂದುವರೆಸಿದೆ, ಇದಕ್ಕಾಗಿ ಇಲಾಖೆ ಡ್ರೋನ್ ಕ್ಯಾಮೆರಾಗಳನ್ನು ಉಪಯೋಗಿಸಿತ್ತು.
ಸದ್ಯ ಎರಡು ಪುಂಡಾನೆ ಸೆರೆಯಿಂದ ಕಾಫಿನಾಡಿಗರು ಕೊಂಚ ಮಟ್ಟಿನ ನಿಟ್ಟಿಸಿರು ಬಿಟ್ಟಂತಾಗಿದೆ.
ಇದನ್ನೂ ಓದಿ: ಪೊಲೀಸರು ಎಸೆದ ತೂಕದ ಮಾಪನವನ್ನು ತರಲು ಹೋಗಿ ಕಾಲು ಕಳೆದುಕೊಂಡ ವ್ಯಾಪಾರಿ
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್

ಮತ ಎಣಿಕೆಗೆ ಎರಡು ದಿನ ಬೇಕೆ ?! ;ಏನು ಕಾಮೆಂಟ್ಸ್ ಗಳು?! ; ಕಿಡಿ ಕಾರಿದ ಉಪೇಂದ್ರ

ಸೇಡಂ: ತೆಲಂಗಾಣ ಮೂಲದ ಕಾರಿನಲ್ಲಿ ದಾಖಲೆ ಇಲ್ಲದ 35 ಲಕ್ಷ ಹಣ ಪತ್ತೆ

ಕಲಬುರಗಿ: ಶೇ. 50 ರಷ್ಟು ಮತಗಟ್ಟೆಗಳಿಗೆ ಸಿಸಿ ಕ್ಯಾಮರಾ: ಡಿಸಿ ಗುರುಕರ್
MUST WATCH
ಹೊಸ ಸೇರ್ಪಡೆ

ದೆಹಲಿ-ಎನ್ಸಿಆರ್ನಲ್ಲಿ ಗುಡುಗು ಸಹಿತ ಮಳೆ; 9 ವಿಮಾನಗಳು ಬೇರೆಡೆಗೆ

ಜಿಲ್ಲೆಯಲ್ಲಿ 1,239 ರೌಡಿಶೀಟರ್ ಗಳು: ವಿಜಯಪುರ ಡಿಸಿ ಡಾ.ವಿ.ಬಿ.ದಾನಮ್ಮನವರ

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಅಭ್ಯರ್ಥಿಗಳು ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು: ಬಳ್ಳಾರಿ ಡಿಸಿ ಪವನ್ ಕುಮಾರ್

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್