ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

ಸುಪ್ರೀಂ ಕೋರ್ಟ್‌ ಬಯಲಿಗೆಳೆದಿರುವುದು ದೇಶಕ್ಕೆ ತಿಳಿದಿದೆ ಎಂದರು.

Team Udayavani, Apr 16, 2024, 4:32 PM IST

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

ಉದಯವಾಣಿ ಸಮಾಚಾರ
ಮೂಡಿಗೆರೆ: 10 ವರ್ಷದಿಂದ ನೆಮ್ಮದಿ ಕಳೆದುಕೊಂಡ ಜನರು ತಕ್ಕ ಉತ್ತರ ನೀಡಲು ಸಿದ್ಧರಾಗಿದ್ದಾರೆ ಎಂದು ಕಾಂಗ್ರೆಸ್‌ ಅಭ್ಯರ್ಥಿ ಕೆ.ಜಯಪ್ರಕಾಶ್‌ ಹೆಗ್ಡೆ ಹೇಳಿದರು.

ತಾಲೂಕಿನ ಬಣಕಲ್‌, ಕಸಬಾ, ಗೋಣಿ ಬೀಡು, ಬಾಳೂರು ಹೋಬಳಿ ವ್ಯಾಪ್ತಿ ಯಲ್ಲಿ ಏರ್ಪಡಿಸಿದ್ದ ಚುನಾವಣೆ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಭ್ರಷ್ಟಾಚಾರ ರಹಿತ ಆಡಳಿತದ ನಡೆಸುತ್ತಿದ್ದೇವೆ ಎಂದು ಜನರನ್ನು ಮೂರ್ಖರನ್ನಾಗಿ ಮಾಡಲು ಸಾಧ್ಯವಿಲ್ಲ. ಚುನಾವಣೆ ಬಾಂಡ್‌ ಹಗರಣದಿಂದ ಇವರ ಭ್ರಷ್ಟಾಚಾರದ ಬಗ್ಗೆ ಸುಪ್ರೀಂ ಕೋರ್ಟ್‌ ಬಯಲಿಗೆಳೆದಿ
ರುವುದು ದೇಶಕ್ಕೆ ತಿಳಿದಿದೆ ಎಂದರು.

ನಾನು ಸಂಸದನಾಗಿ ದ್ದಾಗ ಕಡೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕೆ ಅನುಮೋದನೆಯಾಗಿತ್ತು. ಆದರೆ 10 ವರ್ಷ ಕಳೆದರೂ ರಸ್ತೆ ಅಗಲೀಕರಣ ಮಾಡಲು ಬಿಜೆಪಿಯವರಿಗೆ ಸಾಧ್ಯವಾಗಿಲ್ಲ. ಅಲ್ಲದೆ ಹಿಂದಿನ ಸಂಸದೆ ಶೋಭಾ ಕರಂದ್ಲಾಜೆ ಅವರು ಕೇಂದ್ರ ಮಂತ್ರಿ ಕೂಡ ಆಗಿದ್ದರು. ಆದರೆ ಇಲ್ಲಿನ ಕಾಫಿ ಬೆಳೆಗಾರರ ಸಮಸ್ಯೆ, ಅಡಕೆ ರೋಗ ನಿವಾರಣೆ ಸೇರಿದಂತೆ ರೈತರ
ಹಾಗೂ ಜನರ ಸಮಸ್ಯೆ ನಿವಾರಿಸಲಿಲ್ಲ.

ಪೆಟ್ರೋಲ್‌ ಸೇರಿದಂತೆ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಜನ ನೆಮ್ಮದಿಯಿಂದ ಬದುಕದಂತೆ ಮಾಡಿದ್ದಾರೆ. ಯಾವುದೇ ಅಭಿವೃದ್ಧಿ ಹಾಗೂ ಜನಪರ ಯೋಜನೆ ರೂಪಿಸದೆ ಕೇವಲ ಮೋದಿ ಹೆಸರು ಹೇಳಿಕೊಂಡು ಪುನಃ ಮತ ಕೇಳಿದರೆ ಜನ ಬೆಂಬಲಿಸುತ್ತಾರೆಂಬ ಭ್ರಮೆಯಲ್ಲಿ ಬಿಜೆಪಿಯವರಿದ್ದಾರೆಂದು ದೂರಿದರು.

ಶಾಸಕಿ ನಯನಾ ಮೋಟಮ್ಮ ಮಾತನಾಡಿ, ರಾಜ್ಯ ಸರಕಾರ ನೀಡಿರುವ 5 ಗ್ಯಾರಂಟಿಯಿಂದ ಜನರಿಗೆ ಅನುಕೂಲ ವಾಗಿದೆ. ಅಲ್ಲದೆ ನಮ್ಮ ಅಭ್ಯರ್ಥಿ ಜಯ ಪ್ರಕಾಶ್‌ ಹೆಗ್ಡೆ ಅವರು ಹಿಂದೆ 20 ತಿಂಗಳು ಸಂಸದರಾಗಿದ್ದಾಗ ಅನೇಕ ಜನಪರ ಕೆಲಸ ಮಾಡಿದ್ದಾರೆ. ಇದರಿಂದಜನರ ಬಳಿ ತೆರಳಿ ಮತ ಕೇಳುವ ಧೈರ್ಯ ನಮಗಿದೆ. ಆದರೆ ಕಳೆದ 10 ವರ್ಷದಲ್ಲಿ ಕೇಂದ್ರದ ಬಿಜೆಪಿ ಸರಕಾರದ ದುರಾಡಳಿತ ಹಾಗೂ ಹಿಂದಿನ ಸಂಸದೆ ಶೋಭಾ ಕರಂದ್ಲಾಜೆ ಅವರ ಅಭಿವೃದ್ಧಿ ಕಾರ್ಯ ಶೂನ್ಯವೆಂದು ಅವರದೇ ಪಕ್ಷದವರು
ಗೋ ಬ್ಯಾಕ್‌ ಶೋಭಾ ಎಂದು ಇಲ್ಲಿಂದ ಓಡಿಸಿದ್ದಾರೆ. ಇದರಿಂದ ಬಿಜೆಪಿಯವರಿಗೆ ಜನರ ಬಳಿ ಹೋಗಿ ಮತ ಕೇಳಲು
ಅಂಜಿಕೆ ಉಂಟಾಗಿದೆ ಎಂದರು.

ಮಾಜಿ ಸಚಿವ ಬಿ.ಬಿ.ನಿಂಗಯ್ಯ, ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಚ್‌.ಜಿ. ಸುರೇಂದ್ರ, ಪಪಂ ಸದಸ್ಯ ಕೆ.ವೆಂಕಟೇಶ್‌, ಸಿ.ಬಿ.ಶಂಕರ್‌, ಸಿ.ಕೆ. ಇಬ್ರಾಹಿಂ ಮತ್ತಿತರರಿದ್ದರು.

ಟಾಪ್ ನ್ಯೂಸ್

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.