ಶೌಚಾಲಯವಿದೆ ಬಳಕೆಯೇ ಆಗ್ತಿಲ್ಲ!

ಕಟ್ಟಡ ಬೀಗ ತೆರೆದು ದುರಸ್ತಿಗೊಳಿಸಿ ಮರುಬಳಕೆಗೆ ನೀಡಲು ಸಾರ್ವಜನಿಕರ ಮನವಿ

Team Udayavani, Feb 10, 2020, 12:58 PM IST

10-February-10

ಮೂಡಿಗೆರೆ: ಸರ್ಕಾರವು ಕೋಟ್ಯಂತರ ರೂಪಾಯಿ ವೆಚ್ಚ ಮಾಡಿ ಸ್ವಚ್ಛ ಭಾರತ್‌, ನಿರ್ಮಲ ಭಾರತ್‌ ಅಭಿಯಾನ ಸೇರಿದಂತೆ ನಾನಾ ಯೋಜನೆಗಳ ಮೂಲಕ ಶೌಚಾಲಯಗಳ ಮಹತ್ವ ಸಾರುವ ಮೂಲಕ ಸಾರ್ವಜನಿಕರಿಗೆ ಸ್ವತ್ಛತೆಯ ಬಗ್ಗೆ ಅರಿವು ಮೂಡಿಸುತ್ತಿರುವ ಇಂದಿನ ದಿನಗಳಲ್ಲಿ ಪಟ್ಟಣದ ಪೊಲೀಸ್‌ ಸ್ಟೇಷನ್‌ ಎದುರಿನಲ್ಲಿರುವ ಸಾರ್ವಜನಿಕ ಶೌಚಾಲಯಕ್ಕೆ ಬೀಗ ಹಾಕಿರುವುದು ಸಾರ್ವಜನಿಕರ ಆಕ್ಷೇಪಕ್ಕೆ ಕಾರಣವಾಗಿದೆ.

ದಶಕದ ಹಿಂದೆ ಸಾರ್ವಜನಿಕರಿಗೆ ಅನುಕೂಲವಾಗಲೆಂದು ಪಟ್ಟಣ ಪಂಚಾಯತಿ ವತಿಯಿಂದ ಸಾರ್ವಜನಿಕ ಶೌಚಾಲಯವನ್ನು ನಿರ್ಮಿಸಿ ಸಾರ್ವಜನಿಕರ ಬಳಕೆಗೆ ಅನುವು ಮಾಡಿಕೊಡಲಾಗಿತ್ತು. ಈ ಕಾರ್ಯವು ಅಂದಿನ ದಿನಗಳಲ್ಲಿ ಸಾರ್ವಜನಿಕರ ಪ್ರಶಂಸೆಗೆ ಕೂಡ ಕಾರಣವಾಗಿತ್ತು. ಆದರೆ ದಿನ ಕಳೆದಂತೆ ಸೂಕ್ತ ನಿರ್ವಹಣೆಯ ಕೊರತೆಯಿಂದಾಗಿ ಶೌಚಾಲಯವು 7 ವರ್ಷಗಳಿಂದ ಮುಚ್ಚಲ್ಪಟ್ಟಿದ್ದು, ಸಾರ್ವಜನಿಕರು ತಮ್ಮ ಶೌಚ ಕಾರ್ಯಗಳನ್ನು ತೀರಿಕೊಳ್ಳಲು ಖಾಲಿ ಜಾಗ ಹುಡುಕಿಕೊಳ್ಳಬೇಕಾದ ಅನಿವಾರ್ಯತೆ ಎದುರಾಗಿದೆ.

ಶೌಚಾಲಯ ನಿರ್ಮಾಣ ಮಾಡಿರುವ ಸ್ಥಳವು ಪಟ್ಟಣದ ಮುಖ್ಯ ವಾಣಿಜ್ಯ ಕೇಂದ್ರದಲ್ಲಿದ್ದು, ಪಿ.ಡಬ್ಲ್ಯು.ಡಿ ಇಲಾಖೆ, ತಾಲೂಕು ಕಚೇರಿ, ಶಾಸಕರ ಕಚೇರಿ, ಪೊಲೀಸ್‌ ಠಾಣೆ, ಎಲ್‌ಐಸಿ ಕಚೇರಿ, ವ್ಯವಸಾಯ ಸಹಕಾರಿ ಸಂಘ, ಬ್ಯಾಂಕುಗಳು ಸೇರಿದಂತೆ ಹಲವು ವಾಣಿಜ್ಯ ವ್ಯಾಪಾರದ ಜನನಿಬಿಡ ಸ್ಥಳವಾಗಿದೆ. ಸದಾ ಚಟುವಟಿಕೆಯಿಂದ ಕೂಡಿರುವ ಇಂತಹ ಸ್ಥಳದಲ್ಲಿ ಸಾರ್ವಜನಿಕರು ತಮ್ಮ ಶೌಚ ಕಾರ್ಯಗಳನ್ನು ಪೂರೈಸಲು ಪರದಾಡುತ್ತಿದ್ದರು.

ಇಂತಹ ಆಯಕಟ್ಟಿನ ಜಾಗದಲ್ಲಿ ಸಾರ್ವಜನಿಕ ಶೌಚಾಲಯದ ನಿರ್ಮಾಣದ ಒತ್ತಡ ಕೇಳಿ ಬಂದಿದ್ದರಿಂದ ಶೌಚಾಲಯದ ನಿರ್ಮಾಣ ಕಾರ್ಯ ಕೂಡ ಆಗಿತ್ತು. ಆದರೆ ಪಪಂ ಜನಪ್ರತಿನಿಧಿಗಳು ಹಾಗೂ ಅಧಿ ಕಾರಿಗಳ ನಿರ್ಲಕ್ಷ್ಯದಿಂದಾಗಿ ಲಕ್ಷಾಂತರ ರೂ. ಖರ್ಚು ಮಾಡಿ ನಿರ್ಮಿಸಿದ ಕಟ್ಟಡ ಇದೀಗ ಸರಿಯಾದ ನಿರ್ವಹಣೆ ಇಲ್ಲದೆ ಪಾಳು ಬಿದ್ದಿದ್ದು, ಯಾವುದೇ ಉಪಯೋಗಕ್ಕೆ ಬಾರದಂತಾಗಿದೆ.

ಸ್ಥಳೀಯ ಹಾಗೂ ಅಂಗಡಿಯೊಂದರ ಮಾಲೀಕ ಕೇಶವ ಪೂಜಾರಿ ಪ್ರಕಾರ, ನಾನು ಹಲವು ವರ್ಷಗಳಿಂದ ಎಂ.ಜಿ ರಸ್ತೆಯ ಪಕ್ಕದಲ್ಲಿ ಅಂಗಡಿಯೊಂದನ್ನು ನಡೆಸುತ್ತಿದ್ದೇನೆ. ನನ್ನ ಅಂಗಡಿ ಸೇರಿದಂತೆ ಬಹುತೇಕ ಅಂಗಡಿ ಮಳಿಗೆಗಳ ಕಟ್ಟಡದಲ್ಲಿ ಯಾವುದೇ ಶೌಚಾಲಯಗಳಿಲ್ಲ. ಆದ್ದರಿಂದ ನಮ್ಮ ಶೌಚಾಲಯ ಕಾರ್ಯಗಳನ್ನು ಮುಗಿಸಿಕೊಳ್ಳಲು ಸಾರ್ವಜನಿಕ ಶೌಚಾಲಯದ ಅಗತ್ಯವಿದೆ. ಈ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಶೌಚಾಲಯ ನಿರ್ಮಾಣ ಮಾಡಿಕೊಡುವಂತೆ ಸಾರ್ವಜನಿಕರು ಹಾಗೂ ವಿವಿಧ ಸಂಘಟನೆಗಳು ಒಟ್ಟುಗೂಡಿ ಪಪಂ ಮೇಲೆ ಒತ್ತಡ ತಂದು ನೂತನ ಶೌಚಾಲಯದ ನಿರ್ಮಾಣ ಕಾರ್ಯದಲ್ಲಿ ಯಶಸ್ವಿಯಾಗಿದ್ದೆವು. ಶೌಚಾಲಯ ನಿರ್ಮಾಣವಾಯಿತಾದರೂ ಸೂಕ್ತ ನಿರ್ವಹಣೆಯಿಲ್ಲದೆ ಕೆಲವೇ ದಿನಗಳಲ್ಲಿ ಬಾಗಿಲು ಮುಚ್ಚಲಾಯಿತು. ಇದರಿಂದಾಗಿ ಹಳೇ ಪರಿಸ್ಥಿತಿ ಪುನಃ ಮರುಕಳಿಸಿದೆ. ಇದರೊಂದಿಗೆ ದಿನಕಳೆದಂತೆ ವ್ಯಾಪಾರ, ವಹಿವಾಟುಗಳ ಹೆಚ್ಚಳದೊಂದಿಗೆ ಸಾರ್ವಜನಿಕರ ಓಡಾಟ ಕೂಡ ಹೆಚ್ಚಳವಾಗಿರುವುದರಿಂದ ಶೌಚ ಕಾರ್ಯಗಳಿಗೆ ತೊಂದರೆಯಾಗಿದೆ ಎಂದರು.

ಸರ್ಕಾರಿ ಕಚೇರಿಗಳು, ವ್ಯಾಪಾರ ವಹಿವಾಟುಗಳಿಗೆ ನಿತ್ಯ ಹಳ್ಳಿ ಹಾಗೂ ಪಟ್ಟಣದ ಸುತ್ತಮುತ್ತಲಿನ ಗ್ರಾಮಗಳಿಂದ ಬರುವ ಸಾರ್ವಜನಿಕರ ಮೂಲ ಅವಶ್ಯಕತೆ ಮರೆತು ಕುಳಿತಿರುವ ಅಧಿಕಾರಿಗಳು ಹಾಗೂ ಜನಪ್ರತಿನಿಧಿ ಗಳು ಇನ್ನು ಮುಂದಾದರೂ ಸಮಸ್ಯೆ ಬಗೆಹರಿಸಿಕೊಡುವರೇ ಎಂದು ಕಾಯ್ದು ನೋಡಬೇಕಿದೆ.

ಈ ವಿಷಯದ ಬಗ್ಗೆ ಹಲವು ಒತ್ತಾಯಗಳು ಕೇಳಿಬರುತ್ತಿವೆ. ಪಪಂಗೆ
ಆಜ್ಞೆ ಮಾಡುವ ಅಧಿಕಾರ ನಮಗೆ ಇರುವುದಿಲ್ಲ. ಆದರೆ ಸಾರ್ವಜನಿಕ ಹಿತದೃಷ್ಟಿಯಿಂದ ಈ ವಿಚಾರವಾಗಿ
ಶಾಸಕರು ಹಾಗೂ ಪಟ್ಟಣ ಪಂಚಾಯತಿ ಅಧಿಕಾರಿಗಳೊಡನೆ ಚರ್ಚಿಸಿ ಸಮಸ್ಯೆ ಬಗೆಹರಿಸಿಕೊಡುತ್ತೇವೆ.
„ಕೆ.ಸಿ.ರತನ್‌, ತಾಪಂ ಅಧ್ಯಕ್ಷರು.

ಈ ಭಾಗದಲ್ಲಿ ಸಾರ್ವಜನಿಕರ ಶೌಚಾಲಯದ ಅವಶ್ಯಕತೆಯಿದೆ. ಇದ್ದ ಒಂದು ಶೌಚಾಲಯ ನಿರ್ವಹಣೆ ಕಾರಣ ನೀಡಿ ಮುಚ್ಚಲಾಗಿದೆ. ಕಟ್ಟಡ ಭದ್ರವಾಗಿದ್ದು, ನಿರ್ವಹಣೆಯ ಕೊರತೆಯಿಂದಾಗಿ ಬಾಗಿಲು ಮುಚ್ಚಿದೆ. ಕಟ್ಟಡ ಪುನರ್‌ ನವೀಕರಿಸಿ ಸಾರ್ವಜನಿಕರ ಬಳಕೆಗೆ ಅನುಕೂಲ ಮಾಡಿಕೊಡಬೇಕು.
„ನವೀನ್‌,
ಆಟೋ ಚಾಲಕರ

ಪಟ್ಟಣದಲ್ಲಿ ಸಾರ್ವಜನಿಕ ಶೌಚಾಲಯಗಳ ಕೊರತೆಯಿದೆ. ಪಾಳು
ಬಿದ್ದಿರುವ ಹಳೆಯ ಶೌಚಾಲಯದ ಜತೆಗೆ ಇನ್ನೂ ಹೊಸ ಶೌಚಾಲಯಗಳ ನಿರ್ಮಾಣದ ಬಗ್ಗೆ ಸಂಬಂಧಪಟ್ಟ
ಅಧಿಕಾರಿಗಳೊಡನೆ ಚರ್ಚಿಸಿ ಸಮಸ್ಯೆ ಬಗೆಹರಿಸಿ ಕೊಡಲಾಗುವುದು.
„ಎಚ್‌.ಎಂ.ರಮೇಶ್‌,
ತಹಶೀಲ್ದಾರ್‌

ಸುಧೀರ್‌ ಬಿ.ಟಿ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.