ಭಾರೀ ಗಾಳಿ-ಮಳೆಗೆ ನೆಲಕ್ಕೊರಗಿದ ಬಾಳೆ!


Team Udayavani, May 2, 2020, 1:04 PM IST

2-May-10

ಎನ್‌.ಆರ್‌.ಪುರ: ಭಾರೀ ಮಳೆ, ಗಾಳಿಗೆ ಬಾಳೆ ಹಾಳಾಗಿದೆ.

ಎನ್‌.ಆರ್‌.ಪುರ: ತಾಲೂಕಿನ ವ್ಯಾಪ್ತಿಯಲ್ಲಿ ಗುರುವಾರ ಸಂಜೆ ಸುರಿದ ಭಾರಿ ಗಾಳಿ, ಮಳೆಗೆ ಬೆಳೆ ಮತ್ತು ಮನೆಗಳಿಗೆ ಹಾನಿ ಸಂಭವಿಸಿದ್ದು, ಲಕ್ಷಾಂತರ ರೂ. ಹಾನಿ ಸಂಭವಿಸಿದೆ. ತಾಲೂಕಿನ ವ್ಯಾಪ್ತಿಯಲ್ಲಿ ಮಳೆ ಬಂದಿದ್ದರೂ ಸಹ ಮುತ್ತಿನಕೊಪ್ಪ ಗ್ರಾಪಂ ವ್ಯಾಪ್ತಿಯಲ್ಲಿ ಭಾರಿ ಗಾಳಿ,ಮಳೆ ಸುರಿದಿದೆ. ಮಲ್ಲಿಕೊಪ್ಪ ಗ್ರಾಮದಲ್ಲಿ ರನ್ನಿ ಎಂಬ ರೈತ ತೋಟದಲ್ಲಿ ಬೆಳೆದಿದ್ದ ಫಸಲು ಬಿಟ್ಟಿದ್ದ 3,800 ನೆಂದ್ರ ಬಾಳೆಯಲ್ಲಿ 3,600ಕ್ಕೂ ಹೆಚ್ಚು ನೆಂದ್ರ ಬಾಳೆಗಿಡ ಸಂಪೂರ್ಣ ಮುರಿದು ಲಕ್ಷಾಂತರೂ ನಷ್ಟ ಸಂಭವಿಸಿದೆ.

ಬಾಳೆ ಬೆಳೆಯಲು 6ಲಕ್ಷಕ್ಕೂ ರೂ. ವೆಚ್ಚ ಮಾಡಲಾಗಿತ್ತು. ಇನ್ನೂ 20 ದಿನದಲ್ಲಿ ಬಾಳೆ ಫಸಲು ಕೊಯ್ಯಬಹುದಿತ್ತು. ಭಾರಿ ಗಾಳಿಯಿಂದ ಬೆಳೆ ನೆಲಕಚ್ಚಿದ್ದು, ಕೈಗೆ ಬಂದ ತುತ್ತು ಬಾಯಿಗೆ ಬರದಂತಾಯಿತು ಎಂದು ರೈತ ರನ್ನಿ ಬೇಸರ ವ್ಯಕ್ತಪಡಿಸಿದರು. ಇದೇ ಗ್ರಾಮದ ವ್ಯಾಪ್ತಿಯ ಪಿ.ಸಿ.ವರ್ಗೀಸ್‌ ಅವರ ರಬ್ಬರ್‌ ತೋಟದಲ್ಲಿ ಗಾಳಿಗೆ 65ಕ್ಕೂ ಹೆಚ್ಚು ರಬ್ಬರ್‌ ಮರ ತುಂಡಾಗಿ ಧರೆಗುರುಳಿಬಿದ್ದಿವೆ.

ಸಾಕಷ್ಟು ನೆದ್ರ ಬಾಳೆಯು ಸಹ ನೆಲ ಕಚ್ಚಿದೆ. ಅದೇ ರೀತಿ ಸಂತೋಷ್‌ ಅವರ ರಬ್ಬರ್‌ ತೋಟದಲ್ಲಿ ಹೊಸದಾಗಿ ರಬ್ಬರ್‌ ಟ್ಯಾಪಿಂಗ್‌ ಮಾಡಲು ಸಿದ್ಧವಾಗಿದ್ದ 200ಕ್ಕೂ ಹೆಚ್ಚು ರಬ್ಬರ್‌ ಮರಗಳನ್ನು ಧರೆಗುರುಳಿ ಬಿದ್ದಿದ್ದು, ಭಾರೀ ನಷ್ಟ ಸಂಭವಿಸಿದೆ. ಕೆ.ಕಣಬೂರು ವ್ಯಾಪ್ತಿಯ ಚಂಬಳ್ಳಿಯಲ್ಲಿ ಎಂ.ವಿ.ಬೇಬಿ ಯವರು ಬೆಳೆದಿದ್ದ 900 ನೆಂದ್ರ ಬಾಳೆ ಧರೆಗುಳಿದು ಬಿದ್ದು ಲಕ್ಷಾಂತರ ರೂ. ನಷ್ಟಸಂಭವಿಸಿದೆ. ಮಡಬೂರು ಸಮೀಪದ ಎಕ್ಕಡಬೈಲು ಗ್ರಾಮದ ಹೂವಣ್ಣ ಎಂಬುವರ ಮನೆಯ ಮೇಲೆ ಗಾಳಿಗೆ ಮರ ಬಿದ್ದು ಮನೆಯ ಹೆಂಚು ಮತ್ತು ಮಾಡು ಪುಡಿಯಾಗಿದ್ದು, ಗೋಡೆಗಳು ಬಿರುಕು ಬಿಟ್ಟಿದ್ದು, ಭಾರಿ ಅನಾಹುತ ತಪ್ಪಿದೆ.

ಸಾತ್ಕೋಳಿ ಗ್ರಾಮದ ಶೇಖರ್‌ ಮತ್ತು ಮಧು ಎಂಬುವರ ಮನೆ ಶೀಟ್‌ ಮತ್ತು ಹೆಂಚು ಗಾಳಿಗೆ ಹಾರಿಹೋಗಿದ್ದು ಗೋಡೆಗಳು ಬಿರುಕು ಬಿಟ್ಟು ಮನೆ ಕುಸಿಯುವ ಹಂತ ತಲುಪಿವೆ. ಮಲ್ಲಿಕೊಪ್ಪ ಗ್ರಾಮದ ಪುಷ್ಪ ಎಂಬುವರ ಮನೆಯ 12 ಶೀಟ್‌ ಗಳು ಗಾಳಿಗೆ ಹಾರಿ ಹೋಗಿ ಪುಡಿಯಾಗಿದ್ದು ಹಲವು ಶೀಟ್‌ಗಳು ಬಿರುಕು ಬಿಟ್ಟಿದ್ದು ಸಾಕಷ್ಟು ನಷ್ಟ ಸಂಭವಿಸಿದೆ. ಇದೇ ಗ್ರಾಮದ ಸಂತೋಷ್‌ ಎಂಬುವರ ಮನೆಯ ಶೀಟ್‌ ಸಹ ಹಾರಿ ಹೋಗಿದೆ. ಕುಶಾಲಪುರದ ಕೆ.ಎಸ್‌.ಸತ್ಯನಾರಾಯಣ ಅವರು ಕೂಯ್ಲಿಗೆ ಬಂದಿರುವ ಭತ್ತದ ಪೈರಿನ ತೆನೆ ಗಾಳಿ, ಮಳೆಗೆ ಉದುರಿಬಿದ್ದಿದ್ದು ನಷ್ಟ ಉಂಟಾಗಿದೆ.

ಸ್ಥಳಕ್ಕೆ ಜಿಲ್ಲಾ ಪಂಚಾಯಿತಿ ಸದಸ್ಯ ಪಿ.ಆರ್‌. ಸದಾಶಿವ, ಜಿಲ್ಲಾ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್‌, ಮುತ್ತಿನಕೊಪ್ಪ ಗ್ರಾಪಂ ಅಧ್ಯಕ್ಷ ಸೈಯದ್‌ ಸಫೀರ್‌ ಅಹಮ್ಮದ್‌, ಕಡಹಿನಬೈಲು ಗ್ರಾಪಂ ಸದಸ್ಯ ಎ.ಎಲ್‌. ಮಹೇಶ್‌, ಕಂದಾಯ ನಿರೀಕ್ಷಕ ಮಂಜುನಾಥ್‌ ಭೇಟಿ ನೀಡಿ ಪರಿಶೀಲಿಸಿದರು. ಅಕಾಲಿಕ ಭಾರಿ ಗಾಳಿ ಮಳೆಯಿಂದ ರೈತರು ಬೆಳೆದಿದ್ದ ಫಸಲು ನಷ್ಟವಾಗಿದ್ದು, ಸರ್ಕಾರ ಸೂಕ್ತ ಪರಿಹಾರ ಒದಗಿಸಬೇಕು ಎಂದು ಜಿಪಂ ಸದಸ್ಯ ಪಿ.ಆರ್‌.ಸದಾಶಿವ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.