ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಕಾರ್ಯ ಆರಂಭ: ವೈಶಾಲಿ


Team Udayavani, Aug 4, 2018, 4:57 PM IST

chikk.jpg

ಚಿಕ್ಕಮಗಳೂರು: ಮತದಾರರ ವಿಶೇಷ ಪಟ್ಟಿ ಪರಿಷ್ಕರಣೆ ನಡೆಯುತ್ತಿದ್ದು, ಮತಗಟ್ಟೆ ಅಧಿಕಾರಿಗಳು ಆ.10ರವರೆಗೆ ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಹಾಗೂ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಲಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಎಂ.ಎಲ್‌. ವೈಶಾಲಿ ತಿಳಿಸಿದರು. ಅಪರ ಜಿಲ್ಲಾಧಿಕಾರಿಗಳ ಕಚೇರಿ ಕೊಠಡಿಯಲ್ಲಿ ನಡೆದ ವಿವಿಧ ರಾಜಕೀಯ ಪಕ್ಷಗಳ ಮುಖಂಡರ ಹಾಗೂ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮತದಾರರ ಪಟ್ಟಿಯಲ್ಲಿ 18 ವರ್ಷ ತುಂಬಿದ ಹಾಗೂ ಬಿಟ್ಟು ಹೋಗಿರುವವರ ಹೆಸರನ್ನು ಸೇರ್ಪಡೆ ಮಾಡಬೇಕಲ್ಲದೆ
ಮರಣ ಹೊಂದಿರುವವರ, ಬೇರೆಡೆಗೆ ವರ್ಗಾವಣೆಯಾಗಿರುವವರ ಹೆಸರುಗಳನ್ನು ಪರಿಶೀಲಿಸಿ ಕೈಬಿಡಬೇಕು. ನಗರ ಪ್ರದೇಶಗಳಲ್ಲಿ ಒಂದು ವಾರ್ಡ್‌ನಲ್ಲಿ ಅಪ್ಪ ಅಮ್ಮನ ಹೆಸರು ಇದ್ದರೆ, ಮತ್ತೂಂದು ವಾರ್ಡ್‌ನಲ್ಲಿ ಮಕ್ಕಳ ಹೆಸರಿದ್ದರೆ ಇದನ್ನು ಸರಿಪಡಿಸಬೇಕು ಎಂದು ಹೇಳಿದರು.

ಮತದಾನ ಕೇಂದ್ರಗಳ ಭೌತಿಕ ಪರಿಶೀಲನೆ ಹಾಗೂ ಮತಗಟ್ಟೆಗಳ ಪುನರ್‌ ವಿಂಗಡಣೆ ಕಾರ್ಯ ಆ.20 ರಿಂದ ಸೆ.15 ರವರೆಗೆ ನಡೆಯಲಿದೆ. ಪೂರಕ ಪಟ್ಟಿಗಳ ತಯಾರಿಕೆ, ಪೂರಕ ಪಟ್ಟಿಯ ಮತದಾರರ ಪಟ್ಟಿಗೆ ಜೋಡಣೆ ಮಾಡುವ ಹಾಗೂ ಕರಡು ಮತದಾರರ ಪಟ್ಟಿಯ ತಯಾರಿಕೆ ಕಾರ್ಯವು ಸೆ.15 ರವರೆಗೆ ನಡೆಯಲಿದ್ದು ಏಕೀಕರಣಗೊಂಡ ಮತದಾರರ ಕರಡು ಪಟ್ಟಿಯನ್ನು ಅ.10 ರಂದು ಎಲ್ಲಾ ತಾಲೂಕು ಕಚೇರಿಗಳಲ್ಲಿ ಹಾಗೂ ಉಪವಿಭಾಗಾಧಿಕಾರಿಗಳ ಕಚೇರಿ ಮತ್ತು ಆಯಾ ಮತದಾನದ ಕೇಂದ್ರಗಳಲ್ಲಿ ಪ್ರಕಟಿಸಲಾಗುವುದು ಎಂದರು. 

ಕರಡು ಪಟ್ಟಿಯ ಕುರಿತು ಅ.10 ರಿಂದ ನ.20ರವರೆ ಆಕ್ಷೇಪಣೆ ಹಾಗೂ ಹಕ್ಕನ್ನು ಸಲ್ಲಿಸಬಹುದಾಗಿದೆ. ಸ್ವೀಕೃತಗೊಂಡ ಹಕ್ಕು ಮತ್ತು ಆಕ್ಷೇಪಣೆಗಳನ್ನು ಡಿ.20 ರವರೆಗೆ ತೀರುವಳಿಗೊಳಿಸಲಾಗುವುದು ಎಂದು ಹೇಳಿದರು.

ಡಾಟಾ ಬೇಸ್‌ ಜೋಡಣೆ ಮಾಡಿ ಪೂರಕ ಪಟ್ಟಿಗಳ ತಯಾರಿಕೆ ಹಾಗೂ ಮುದ್ರಣ ಕಾರ್ಯವು 2019 ರ ಜನವರಿ 3 ರೊಳಗೆ ಮುಗಿಯಲಿದೆ. ಭಾವಚಿತ್ರವಿರುವ ಅಂತಿಮ ಮತದಾರರ ಪಟ್ಟಿಯನ್ನು 2019 ಜನವರಿ 4 ರಂದು ಪ್ರಕಟಿಸಲಾಗುವುದೆಂದು ತಿಳಿಸಿದರು. 

ಸಾರ್ವಜನಿಕರು ಈ ಸದಾವಕಾಶವನ್ನು ಸದುಪಯೋಗಪಡಿಸಿಕೊಂಡು ಮತದಾರರ ಪಟ್ಟಿಗೆ ತಮ್ಮ ಹೆಸರನ್ನು ಸೇರ್ಪಡೆ ಮಾಡುವಂತೆ ಮನವಿ ಮಾಡಿದರು. ಸಭೆಯಲ್ಲಿ ಬಹುಜನ ಸಮಾಜ ಪಕ್ಷದ ಕೆ.ಟಿ.ರಾಧಾಕೃಷ್ಣ, ಸಿಪಿಐನ ಆರಾಧ್ಯ, ಕಾಂಗ್ರೆಸ್‌ ನ ಎಂ.ಎಸ್‌.ಸುರೇಶ್‌ ಕುಮಾರ್‌, ಬಿಜೆಪಿಯ ವರಸಿದ್ಧಿ ವೇಣುಗೋಪಾಲ್‌ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Chikkaballapur: ಡಾ.ಕೆ.ಸುಧಾಕರ್‌ಗೆ ಜೈ ಎಂದ ಎಂಟಿಬಿ!

Chikkaballapur: ಡಾ.ಕೆ.ಸುಧಾಕರ್‌ಗೆ ಜೈ ಎಂದ ಎಂಟಿಬಿ!

7-politics-1

Chikkamagaluru: ಮೊದಲ ದಿನವೇ ಅಸಮಾಧಾನ ಸ್ಪೋಟ ಎದುರಿಸಿದ ಕೈ ಅಭ್ಯರ್ಥಿ

6-ckm

Mudigere: ಅಕ್ರಮವಾಗಿ ನಾಡ ಬಂದೂಕು ಇಟ್ಟುಕೊಂಡಿದ್ದ ವ್ಯಕ್ತಿ ಬಂಧನ

Horanadu, ಕಳಸ ದೇವಸ್ಥಾನಗಳಿಗೆ ಭೇಟಿ ನೀಡಿದ ಬಿಎಸ್‌ವೈ ಕುಟುಂಬ

Horanadu, ಕಳಸ ದೇವಸ್ಥಾನಗಳಿಗೆ ಭೇಟಿ ನೀಡಿದ ಬಿಎಸ್‌ವೈ ಕುಟುಂಬ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.