ಕೂಡಿ ಬಾಳಿದರೆ ಸ್ವರ್ಗ ಸುಖ: ರಂಭಾಪುರಿ ಜಗದ್ಗುರು


Team Udayavani, Oct 27, 2020, 5:05 PM IST

ಕೂಡಿ ಬಾಳಿದರೆ ಸ್ವರ್ಗ ಸುಖ: ರಂಭಾಪುರಿ ಜಗದ್ಗುರು

ಬಾಳೆಹೊನ್ನೂರು: ಮನುಷ್ಯ ಯಾವಾಗಲೂ ಸಂಘ ಜೀವಿ. ಸಂಘ ಜೀವನದಿಂದ ಸಮಾಜ ನಿರ್ಮಾಣ ಸಾಧ್ಯ. ಪರಸ್ಪರ ಅರಿತು ಬೆರೆತು ಬಾಳಿದರೆ ಜೀವನದಲ್ಲಿ ಸುಖ- ಸಮೃದ್ಧಿ- ಶಾಂತಿ ಪ್ರಾಪ್ತವಾಗುವುದೆಂದು ಶ್ರೀ ರಂಭಾಪುರಿಡಾ| ವೀರಸೋಮೇಶ್ವರ ಜಗದ್ಗುರುಗಳು ಹೇಳಿದರು.

ಭಾನುವಾರ ಬಾಳೆಹೊನ್ನೂರು ಶ್ರೀ ರಂಭಾಪುರಿ ಪೀಠದಲ್ಲಿ ಜರುಗಿದ29ನೇ ವರ್ಷದ ಸಾಂಪ್ರದಾಯಕ ಸರಳಶರನ್ನವರಾತ್ರಿ ಆಚರಣೆಯ 9ನೇ ದಿನದಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು. ಗಳಿಸುವುದನ್ನು ಕಲಿತಂತೆ ಬದುಕುವುದನ್ನು ಕಲಿಸುವುದೇ ನಿಜವಾದ ಧರ್ಮ. ಪ್ರತಿಯೊಬ್ಬರಿಗೂ ನೀರು, ಅನ್ನಮತ್ತು ಸುಭಾಷಿತ ಎಂಬ ಮೂರುರತ್ನಗಳು ಬೇಕೇ ಬೇಕು ಎಂದರು.

ಪಾದಯಾತ್ರೆ: ಕೋವಿಡ್ ಹಿನ್ನೆಲೆಯಲ್ಲಿ ವಿಜಯ ದಶಮಿಯಂದು ಜರುಗಬೇಕಾಗಿದ್ದ ಅಡ್ಡಪಲ್ಲಕ್ಕಿ ಉತ್ಸವದ ಬದಲಾಗಿ ಪಾದ ಯಾತ್ರೆಯ ಮೂಲಕ ಬನ್ನಿ ಮಂಟಪಕ್ಕೆ ತೆರಳಿ ಶಮಿ ಪೂಜೆ ಸಲ್ಲಿಸುವುದಾಗಿ ಶ್ರೀ ರಂಭಾಪುರಿ ಜಗದ್ಗುರುಗಳು ತಿಳಿಸಿದರು.

ಸಂಗೊಳ್ಳಿ ಹಿರೇಮಠದ ಗುರುಲಿಂಗ ಶಿವಾಚಾರ್ಯ ಸ್ವಾಮಿಗಳು ನಾಂದಿ ನುಡಿಯಲ್ಲಿ ಗುರಿ ತಲುಪಿಸಲು ಗುರು ಮಾರ್ಗದರ್ಶನದ ಅವಶ್ಯಕ ಎಂದರು.ರಂಭಾಪುರಿ ಜಗದ್ಗುರುಗಳವರ ವಿಶೇಷ ಭಾವಚಿತ್ರವನ್ನು ಬೇಲೂರ ಶಾಸಕ ಕೆ.ಎಸ್‌. ಲಿಂಗೇಶ್‌ ಅನಾವರಣಗೊಳಿಸಿದರು.

ಸಹಾಯಕ ಕಾರ್ಯಪಾಲಕ ಅಭಿಯಂತ ವಿ. ನಟರಾಜ, ಶಿವಶರಣಪ್ಪ ಸೀರಿ ಕಲಬುರ್ಗಿ ಹಾಗೂ ಅ.ಭಾ. ವೀರಶೈವ ಮಹಾಸಭಾ ಎನ್‌.ಅರ್‌.ಪುರ ತಾಲೂಕು ಘಟಕದ ಅಧ್ಯಕ್ಷ ರವಿಕುಮಾರ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಶ್ರೀ ರಂಭಾಪುರಿ ಜಗದ್ಗುರುಗಳ ಆಶೀರ್ವಾದ ಪಡೆದರು. ಎಡೆಯೂರು ಕ್ಷೇತ್ರದ ರೇಣುಕ ಶಿವಾಚಾರ್ಯ ಸ್ವಾಮಿಗಳು ನೇತೃತ್ವ ವಹಿಸಿ ಮಾತನಾಡಿದರು. ಬೇರುಗಂಡಿ ಬೃಹನ್ಮಠದ, ಜಕ್ಕಲಿ ಹಿರೇಮಠದ, ಕುಮಾರಪಟ್ಟಣ ಪುಣ್ಯಕೋಟಿಮಠದ, ಮಹಾರಾಷ್ಟ್ರದ ವಾಯಿಕರ್‌ ಶ್ರೀಗಳು ಸಮಾರಂಭದಲ್ಲಿ ಇದ್ದರು.

ಸಾತಿಕ ಶಕ್ತಿಗೆ ಗೆಲುವು ಉಂಟಾಗಲಿ: ರಂಭಾಪುರಿ ಶ್ರೀ :

ಬಾಳೆಹೊನ್ನೂರು: ಸಮಾಜದ ಎಲ್ಲ ರಂಗಗಳಲ್ಲೂ ಒಂದಿಲ್ಲ ಒಂದು ಸಂಘರ್ಷಗಳು ಸದಾ ನಡೆಯುತ್ತವೆ. ಕೆಟ್ಟದ್ದರ ವಿರುದ್ಧ ಹೋರಾಟ ಮಾಡಬೇಕಾಗುವುದು ಅನಿವಾರ್ಯ. ದುಷ್ಟ ಶಕ್ತಿಗಳು ಇಲ್ಲದಂತಾಗಿ ಸಾತ್ವಿಕ ಶಕ್ತಿಗಳಿಗೆ ಯಾವಾಗಲೂ ಗೆಲುವು ಉಂಟಾಗಬೇಕೆಂದು ಶ್ರೀ ರಂಭಾಪುರಿ ಡಾ| ಪ್ರಸನ್ನ ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರು ಹೇಳಿದರು.

ಸೋಮವಾರ ಬಾಳೆಹೊನ್ನೂರು ಶ್ರೀ ರಂಭಾಪುರಿ ಪೀಠದಲ್ಲಿ ಜರುಗಿದ 29ನೇ ವರ್ಷದ ಸಾಂಪ್ರದಾಯಕ ಸರಳ ಶರನ್ನವರಾತ್ರಿ ವಿಜಯ ದಶಮಿಯಂದು ಶಮಿಪೂಜೆ ಸಲ್ಲಿಸಿ ಸಿಂಹಾಸನಾರೋಹಣಗೈದು ಅವರು ಆಶೀರ್ವಚನ ನೀಡಿದರು.

ಮುಂದಿನ ವರ್ಷ ಹಾಸನ ಜಿಲ್ಲೆ

ಬೇಲೂರು ತಾಲೂಕು ಕೇಂದ್ರದಲ್ಲಿ 30ನೇ ವರ್ಷದ ಶರನ್ನವರಾತ್ರಿ ದಸರಾ ಧರ್ಮ ಸಮ್ಮೇಳನ ಜರುಗಲಿದೆ ಎಂದುಪ್ರಕಟಪಡಿಸಿದರು. ಸಮಾರಂಭದ ನೇತೃತ್ವ ವಹಿಸಿದ್ದ ಎಡೆಯೂರು ಕ್ಷೇತ್ರದ ರೇಣುಕ ಶಿವಾಚಾರ್ಯ ಸ್ವಾಮಿಗಳು ರಂಭಾಪುರಿ ಬೆಳಗು ದಸರಾ ವಿಶೇಷ ಸಂಚಿಕೆಯನ್ನು ಬಿಡುಗಡೆ ಮಾಡಿದರು. ಶ್ರೀ ರಂಭಾಪುರಿ ಜಗದ್ಗುರುಗಳಿಗೆ ಬಿನ್ನವತ್ತಳೆಯನ್ನು ಅರ್ಪಿಸುವ ಸಂದರ್ಭದಲ್ಲಿ ಬೆಳಗೊಳದ ಬಿ.ಎ. ಶಿವಶಂಕರ, ಕಲಬುರ್ಗಿಯ ಶಿವಶರಣಪ್ಪ ಸೀರಿ, ಹರಪನಹಳ್ಳಿಯ ಎಂ. ಕೊಟ್ರೇಶಪ್ಪ ಹಾಗೂ ಶ್ರೀಪೀಠದ ಆಡಳಿತಾಧಿಕಾರಿ ಎಸ್‌.ಬಿ. ಹಿರೇಮಠ ಇದ್ದರು. ಕುಪ್ಪೂರು ಗದ್ದಿಗೆಮಠದ ಡಾ| ಯತೀಶ್ವರ ಶಿವಾಚಾರ್ಯ ಸ್ವಾಮಿಗಳು ನಾಂದಿ ನುಡಿ ಸೇವೆ ಸಲ್ಲಿಸಿದರು. ಸಿದ್ಧರಬೆಟ್ಟ ಕ್ಷೇತ್ರದ ವೀರಭದ್ರ ಶಿವಾಚಾರ್ಯ ಸ್ವಾಮಿಗಳು ತಮ್ಮ ಸೇವಾ ನುಡಿ ನುಡಿದರು. ಮಳಲಿಮಠದ ಡಾ| ನಾಗಭೂಷಣಶಿವಾಚಾರ್ಯ ಸ್ವಾಮಿಗಳು, ಸಂಗೊಳ್ಳಿ ಹಿರೇಮಠದ ಗುರುಲಿಂಗ ಶಿವಾಚಾರ್ಯ ಸ್ವಾಮಿಗಳು, ಹಣ್ಣೆ ಮಠದ ಮರುಳಸಿದ್ಧ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು ಪಾಲ್ಗೊಂಡಿದ್ದರು. ಜಗದ್ಗುರು ರೇಣುಕಾಚಾರ್ಯ ಗುರುಕುಲದ ಸಾಧಕರಿಂದ ವೇದಘೋಷ ಜರುಗಿತು.

ತಾವರೆಕೆರೆ ಶಿಲಾ ಮಠದ ಡಾ| ಅಭಿನವ ಸಿದ್ಧಲಿಂಗ ಶಿವಾಚಾರ್ಯ ಸ್ವಾಮಿಗಳು ಸ್ವಾಗತಿಸಿದರು. ಸುಪ್ರಸಿದ್ಧ ಗಾಯಕ ಗುರುಲಿಂಗಯ್ಯ ಸ್ವಾಮಿ ಹಿತ್ತಲಶಿರೂರ ಪ್ರಾರ್ಥನೆ ಹಾಡಿದರು. ಶಾಂತಾ ಆನಂದ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.