ನೆಮ್ಮಾರು: ರಸ್ತೆ ಕಾಮಗಾರಿಗೆ ಶ್ರಮದಾನ
Team Udayavani, May 19, 2020, 7:13 AM IST
ಶೃಂಗೇರಿ: ಮಳೆಗಾಲಕ್ಕೂ ಮುನ್ನ ನಾವು ಪ್ರತಿ ದಿನ ಸಂಚರಿಸುವ ರಸ್ತೆ ಸಮರ್ಪಕವಾಗಿರಬೇಕು ಎಂದು ಕೃಷಿಕ ಸಮಾಜದ ಅಧ್ಯಕ್ಷ ಮಾವಿನಕಾಡು ರಂಗನಾಥ್ ಹೇಳಿದರು.
ನೆಮ್ಮಾರ್ ಗ್ರಾಪಂ ನ ಬುಕುಡಿಬೈಲಿನಿಂದ ವಳಲೆ ಮಾವಿನಕಾಡು ಸಂಪರ್ಕಿಸುವ ರಸ್ತೆಯಲ್ಲಿ ಭಾನುವಾರ ಶ್ರಮದಾನದ ಮೂಲಕ ಸ್ವಚ್ಛಗೊಳಿಸುವ ಸಂದರ್ಭದಲ್ಲಿ ಅವರು ಮಾತನಾಡಿದರು. ಗ್ರಾಮೀಣ ಭಾಗದ ರಸ್ತೆಗಳ ನಿರ್ವಹಣೆ ಕೊರತೆಯಿಂದ ರಸ್ತೆ ಹಾಳಾಗುತ್ತದೆ. ಸರಕಾರವೇ ಎಲ್ಲಾ ಕೆಲಸವನ್ನು ಮಾಡಲು ಸಾಧ್ಯವಿಲ್ಲ. ಸಾರ್ವಜನಿಕರ ಸಹಕಾರದಿಂದ ಮಾತ್ರ ರಸ್ತೆಯನ್ನು ಸುಸ್ಥಿತಿಯಲ್ಲಿಡಬಹುದಾಗಿದೆ ಎಂದರು.
ಕೃಷಿಕ ತಲಗಾರು ಆನಂದರಾವ್ ಮಾತನಾಡಿ, ರಸ್ತೆಯ ಗುಣಮಟ್ಟ ಕಾಪಾಡಿಕೊಳ್ಳಲು ರಸ್ತೆಗೆ ಬಾಗಿರುವ ಮರದ ರೆಂಬೆಯನ್ನು ಕಡಿಯಬೇಕು. ಇದಲ್ಲದೇ ವಿದ್ಯುತ್ ಮಾರ್ಗದ ಮರದ ರೆಂಬೆಯನ್ನು ತೆಗೆಯುವುದು ಅಗತ್ಯ ಎಂದರು. ಶ್ರಮದಾನದಲ್ಲಿ ಜಿಪಂ ಸದಸ್ಯ ಬಿ. ಶಿವಶಂಕರ್, ತಲಗಾರು ಉಮೇಶ್, ಜನಾರ್ಧನ್, ದಿವೀರ್ ಮಲಾ°ಡ್ ಮತ್ತಿತರರು ಇದ್ದರು. 50ಕ್ಕೂ ಹೆಚ್ಚು ಗ್ರಾಮಸ್ಥರು 5 ಕಿಮೀ ರಸ್ತೆಯ ಎರಡು ಬದಿ ಗಿಡಗಂಟಿಯನ್ನು ತೆಗೆದು ಹಾಕಿದರು. ಚರಂಡಿ ಸ್ವತ್ಛಗೊಳಿಸಿ, ನೀರು ಸರಾಗವಾಗಿ ಹರಿಯುವಂತೆ ಮಾಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
MUST WATCH
ಹೊಸ ಸೇರ್ಪಡೆ
Revealed; ನೇಹಾ ಹಿರೇಮಠ ಹಂತಕ ಫಯಾಜ್ನ ಮತ್ತೊಂದು ಕರಾಳ ಮುಖ ಅನಾವರಣ
Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ
Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ
Neha ಹತ್ಯೆ ಪ್ರಕರಣ; ಎನ್ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್ಪಿ ಆಗ್ರಹ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ