ನಾನು ಯಾವುದರಲ್ಲೂ ಸಾಫ್ಟ್ ಕಾರ್ನರ್ ತೋರಿಲ್ಲ.. : ಸಿಎಂ ಬಸವರಾಜ ಬೊಮ್ಮಾಯಿ
Team Udayavani, Apr 19, 2022, 11:55 AM IST
ಚಿಕ್ಕಮಗಳೂರು: ನಾನು ಯಾವುದರಲ್ಲೂ ಸಾಫ್ಟ್ ಕಾರ್ನರ್ ತೋರಿಲ್ಲ. ಖಡಕ್ ಎಂದರೆ ಏನು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಪಕ್ಷಗಳಿಗೆ ಪ್ರಶ್ನಿಸಿದರು.
ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂತೋಷ್ ಪಾಟೀಲ್ ಕೇಸ್ ತಕ್ಷಣವೇ ಎಫ್ಐಆರ್ ಮಾಡಿ ಕೆಲಸ ಮಾಡುತ್ತಿದ್ದೇವೆ. ಹುಬ್ಬಳ್ಳಿ ಘಟನೆಗೂ ಕ್ರಮ ತೆಗೆದುಕೊಂಡಿದ್ದೇವೆ. ಶಿವಮೊಗ್ಗ ಕೇಸಲ್ಲೂ ಕ್ರಮ ತೆಗೆದುಕೊಂಡಿದ್ದೇವೆ. ಹಣ್ಣಿನ ಅಂಗಡಿ ವಿಚಾರದಲ್ಲೂ ಕ್ರಮ ತೆಗೆದುಕೊಂಡಿದ್ದೇವೆ. ಯಾವುದೂ ವಿಳಂಬ ಮಾಡಿಲ್ಲ. ಇದಕ್ಕಿಂತ ಬೇರೆ ಇನೇನು ಬೇಕು ನಿಮಗೆ ಎಂದು ಪ್ರಶ್ನಿಸಿದರು.
ಹುಬ್ಬಳ್ಳಿ ಪ್ರಕರಣದಲ್ಲಿ ಯಾವ ಅಮಾಯಕನ ಬಂಧನ ಆಗಿಲ್ಲ. ಸಾಕ್ಷಿಗಳನ್ನು ಆಧರಿಸಿ ಆರೋಪಿಗಳನ್ನು ಬಂಧಿಸಲಾಗುತ್ತಿದೆ. ವಿರೋಧಪಕ್ಷಗಳು ಟೀಕೆ ಮಾಡುವುದು ಸಾಮಾನ್ಯ. ಆದರೆ ಜನರು ಏನು ಹೇಳುತ್ತಾರೆ ಮುಖ್ಯವಾಗುತ್ತದೆ ಎಂದರು.
ಇದನ್ನೂ ಓದಿ:‘ನಿಧಾನವಾಗಿ ಚಲಿಸಿ, ಇದು ಆಸ್ಪತ್ರೆ ಇಲ್ಲದ ಊರು’: ಶೃಂಗೇರಿಯಲ್ಲಿ ಸಿಎಂಗೆ ವ್ಯಂಗ್ಯದ ಸ್ವಾಗತ
ಮುಖ್ಯಮಂತ್ರಿಯಾದ ಮೇಲೆ ಚಿಕ್ಕಮಗಳೂರಿಗೆ ಮೊದಲ ಬಾರಿ ಭೇಟಿ ನೀಡುತ್ತಿದ್ದೇನೆ. ಈ ಹಿಂದೆ ಎರಡು ಬಾರಿ ಕಾರ್ಯಕ್ರಮ ನಿಗದಿಯಾಗಿದ್ದರೂ, ಬರಲಾಗಿರಲಿಲ್ಲ. ಈ ಬಾರಿ ಶಾರದಾಂಬೆಯ ದರ್ಶನ ಮಾಡಲು ಶೃಂಗೇರಿಗೆ ಬಂದಿದ್ದೇನೆ. ನಾಡಿನ ಸುಭಿಕ್ಷೆಗಾಗಿ ಆಗಿ ಶಾರದಾಂಬೆಯ ಪ್ರಾರ್ಥನೆ ಮಾಡುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
MUST WATCH
ಹೊಸ ಸೇರ್ಪಡೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್ಪೋಸ್ಟ್ಗಳಲ್ಲಿ ತಪಾಸಣೆ
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು