ಜ್ಯೋತಿಷಿ ಮಾತಿಗೆ ಹೆದರಿ ಊರನ್ನೇ ತೊರೆದರು​​​​​​​


Team Udayavani, Jul 28, 2018, 6:30 AM IST

ban28071806.jpg

ಎನ್‌.ಆರ್‌.ಪುರ: ಚಿಕ್ಕಮಗಳೂರು ಜಿಲ್ಲೆ ಎನ್‌.ಆರ್‌.ಪುರ ತಾಲೂಕಿನ ಬಾಳೆ ಗ್ರಾಮ ಪಂಚಾಯತ್‌ ವ್ಯಾಪ್ತಿಯ 50ಕ್ಕೂ ಹೆಚ್ಚು ಕುಟುಂಬಗಳು ಜ್ಯೋತಿಷಿಯೊಬ್ಬರ ಮಾತು ಕೇಳಿ 15 ವರ್ಷದಿಂದ ಇದ್ದ ಊರನ್ನೇ ತೊರೆದಿದ್ದಾರೆ. 

ಜ್ಯೋತಿಷಿಯೊಬ್ಬರು ಹೇಳಿದ ಮಾತಿಗೆ ಹೆದರಿ ತಮ್ಮ ಕುಟುಂಬಗಳನ್ನು ಉಳಿಸಿಕೊಳ್ಳುವ ಅನಿವಾರ್ಯತೆಗೆ ಬಿದ್ದ ಅಲೆಮಾರಿಗಳು ಊರನ್ನೇ ತೊರೆದು ಬೇರೆಡೆ ಗುಳೆ ಹೋಗಿದ್ದಾರೆ.

ಕಳೆದ 15 ವರ್ಷದ ಹಿಂದೆ ಬೇರೆ, ಬೇರೆ ಕಡೆಗಳಿಂದ ಬಂದ ಅಲೆಮಾರಿ ಜನಾಂಗದ ಕುಟುಂಬಗಳು ತಾಲೂಕಿನ ಬಿ.ಎಚ್‌.ಕೈಮರ ವ್ಯಾಪ್ತಿಯಲ್ಲಿ ನೆಲೆಸಿದ್ದರು. ಹಾವುಗೊಲ್ಲರು, ಹಕ್ಕಿಪಿಕ್ಕಿ ಜನಾಂಗದವರು ಹೀಗೆ ಅಲೆಮಾರಿ ಜನಾಂಗದವರೆಲ್ಲ ಒಂದೇ ಕಡೆ ನೆಲೆ ನಿಂತಿದ್ದರು. ನಂತರ ಇವರಿಗೆ ತಾಲೂಕಿನ ಬಾಳೆ ಗ್ರಾಮ ಪಂಚಾಯತ್‌ ಸೀಗುವಾನಿ ಸರ್ಕಲ್‌ ಬಳಿ ಇರುವ ನಿವೇಶನದಲ್ಲಿ ಟೆಂಟ್‌ ನಿರ್ಮಿಸಿಕೊಂಡು ವಾಸ ಮಾಡಲು ಅವಕಾಶ ಕಲ್ಪಿಸಿಕೊಡಲಾಗಿತ್ತು. ಅದರಂತೆ ಅಲೆಮಾರಿಗಳು ಇಲ್ಲಿಯೇ ಟೆಂಟ್‌ ನಿರ್ಮಿಸಿಕೊಂಡು ತಮ್ಮ ಶಾಶ್ವತ ನೆಲೆಯನ್ನಾಗಿಸಿಕೊಂಡಿದ್ದರು.

ಈ ಕುಟುಂಬಗಳಿಗೆ ಪಡಿತರ ಚೀಟಿ, ಆಧಾರ್‌ ಕಾರ್ಡ್‌, ಅನಿಲ ಸಂಪರ್ಕ, ಸಾಮೂಹಿಕ ಶೌಚಾಲಯವನ್ನು ನಿರ್ಮಿಸಿಕೊಡಲಾಗಿತ್ತು. ಆದರೆ, ಮನೆ ನಿರ್ಮಿಸಿಕೊಳ್ಳಲು ಅರಣ್ಯ ಮತ್ತು ಕಂದಾಯ ಇಲಾಖೆಯಿಂದ ಹಕ್ಕು ಪತ್ರ ಸಿಕ್ಕಿರಲಿಲ್ಲ. ಇವರಲ್ಲಿ ಅನೇಕರು ಹಾವಾಡಿಗ ವೃತ್ತಿ ಬಿಟ್ಟು ಬೇರೆ, ಬೇರೆ ವೃತ್ತಿಯಲ್ಲಿ ತೊಡಗಿಕೊಂಡು ಆರ್ಥಿಕವಾಗಿಯೂ ಸಬಲರಾಗಿದ್ದರು.

ಸಾವು ತಂದ ಭಯ:
ಆದರೆ, ಅಲೆಮಾರಿಗಳ ಕಾಲೋನಿಯಲ್ಲಿ ಸಂಭವಿಸಿದ ಸಾವುಗಳು ಇವರನ್ನು ಅಧೀರರನ್ನಾಗಿ ಮಾಡಿತ್ತು. ಕಳೆದ ನಾಲ್ಕು ವರ್ಷಗಳಲ್ಲಿ 25 ಪುರುಷರು ಹಾಗೂ ನಾಲ್ವರು ಮಹಿಳೆಯರು ಸೇರಿ ಒಟ್ಟು 29 ಮಂದಿ ಮೃತಪಟ್ಟಿದ್ದರು. ಈ ರೀತಿ ಸಾವುಗಳು ಸಂಭವಿಸುತ್ತಿರುವುದರಿಂದ ಹೆದರಿದ ಕೆಲವರು ಜ್ಯೋತಿಷ್ಯ ಕೇಳಿಸಲು ಮುಂದಾದರು. ಬುಧವಾರ ಜ್ಯೋತಿಷಿಯೊಬ್ಬರ ಬಳಿ ತೆರಳಿ ಇದಕ್ಕೆ ಕಾರಣ ಏನು ಇರಬಹುದು ಎಂದು ಕೇಳಿದರು. ಅದಕ್ಕೆ  ಜ್ಯೋತಿಷಿ ನಿಮ್ಮ ದೇವರನ್ನು ಕಟ್ಟಿ ಹಾಕಿದ್ದಾರೆ. ಕೇರಳದಿಂದ ಮಾಟ ಮಾಡಿಸಿ ತಂದು ಇಟ್ಟಿದ್ದಾರೆ. ಇಲ್ಲಿಯೇ ಉಳಿದರೆ ಮೂರು ದಿನದಲ್ಲಿ ಇನ್ನೂ ಎರಡು ಬಲಿ ಬೀಳುತ್ತದೆ ಎಂದು ಹೇಳಿದ್ದರು.

ಈ ಮಾತಿನಿಂದ ಕಂಗಾಲಾದ ಗ್ರಾಮಸ್ಥರು ಗುರುವಾರ ಸಂಜೆ 6 ಗಂಟೆ ವೇಳೆಗೆ ತಾವು ಸಾಕಿರುವ ಕೋಳಿ, ಕುರಿಗಳನ್ನು ಬಿಟ್ಟು ಪಾತ್ರೆ, ಬಟ್ಟೆ ಸಮೇತ ಮನೆ ಖಾಲಿ ಮಾಡಿದ್ದಾರೆ. ಸುಮಾರು 50ಕ್ಕೂ ಹೆಚ್ಚು ಕುಟುಂಬ ಊರನ್ನು ತೊರೆದು ಬೇರೆ ಕಡೆ ಗುಳೆ ಹೋಗಿದೆ.

ನಾವು ಇಲ್ಲಿ ಬಂದು ವಾಸಿಸಲು ಪ್ರಾರಂಭಿಸಿದ ಮೇಲೆ 29 ಮಂದಿ ಮೃತಪಟ್ಟಿದ್ದಾರೆ. ಅಲ್ಲದೆ ಜ್ಯೋತಿಷಿಗಳನ್ನು ಕೇಳಿದಾಗ ಇಲ್ಲಿ ಮಾಟ ಮಾಡಿದ್ದಾರೆ ಎಂದು ತಿಳಿದು ಬಂತು. ಅಲ್ಲದೆ ಇನ್ನು ಇಲ್ಲಿಯೇ ಇದ್ದರೆ ಇಬ್ಬರು ಸಾವನ್ನಪ್ಪುತ್ತಾರೆ ಎಂದು ತಿಳಿಸಿದ್ದಾರೆ. ಹಾಗಾಗಿ ಜೀವ ಉಳಿಸಿಕೊಳ್ಳಲು ಎಲ್ಲವನ್ನೂ ಬಿಟ್ಟು ಕೊಪ್ಪ, ನಾರ್ವೆ ಭಾಗಕ್ಕೆ ಹೋಗುತ್ತಿದ್ದೇವೆ. ಬೇರೆ ಕಡೆ ನಿವೇಶನ ನೀಡಿದರೆ ಮಾತ್ರ ವಾಪಸ್‌ ಊರಿಗೆ ಬರುತ್ತೇವೆ ಎಂದು ಅಲೆಮಾರಿಗಳು ಹೇಳುತ್ತಿದ್ದಾರೆ.

ಇಷ್ಟು ವರ್ಷ ವಾಸಮಾಡಿ ಮೂಢನಂಬಿಕೆಗೆ ಹೆದರಿ ಮನೆ ಖಾಲಿ ಮಾಡಿರುವುದು ವಿರ್ಪಯಾಸ. ಗ್ರಾಮಸ್ಥರ ಗಮನಕ್ಕೂ ತರದೆ ಇದ್ದಕ್ಕಿದಂತೆ ಗ್ರಾಮ ತೊರೆದಿರುವುದು ಬೇಸರದ ಸಂಗತಿ
– ಇ.ಸಿ ಸೇವಿಯಾರ್‌, ನಾಗಲಾಪುರ ಗ್ರಾಪಂ ಸದಸ್ಯ

15 ವರ್ಷಗಳಿಂದ ವಾಸವಿದ್ದರೂ ಅವರಿಗೆ ಮನೆ, ಹಕ್ಕು ಪತ್ರ ನೀಡಿಲ್ಲ. ಅವರ ಕುಟುಂಬಗಳಲ್ಲಿ ನಡೆದ ಅವಘಡಗಳ ಬಗ್ಗೆ ಮೂಢನಂಬಿಕೆ ಬಿತ್ತಿರುವುದರಿಂದ ಅವರು ಹೆದರಿದ್ದಾರೆ. ಅವರು ಕೊಪ್ಪ, ಸೇರಿದಂತೆ ಬೇರೆ, ಬೇರೆ ಊರುಗಳಿಗೆ ಹೋಗಿರುವ ಮಾಹಿತಿ ಇದೆ. ಅವರ ಮನವೊಲಿಸುವ ಪ್ರಯತ್ನ ಮಾಡಲಾಗುವುದು. ಬಂದರೆ ಕಂದಾಯ ಅ ಧಿಕಾರಿಗಳೊಂದಿಗೆ ಚರ್ಚಿಸಿ ಶಾಶ್ವತ ನೆಲೆ ಕಲ್ಪಿಸಲಾಗುವುದು.
– ಟಿ.ಡಿ.ರಾಜೇಗೌಡ, ಶಾಸಕ.

ಟಾಪ್ ನ್ಯೂಸ್

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.