ಗುಡ್ಡ ಕುಸಿತ ಭೀತಿ: ರಾತ್ರಿ ವೇಳೆ ಚಾರ್ಮಾಡಿ ಘಾಟಿಯಲ್ಲಿ ವಾಹನ ಸಂಚಾರಕ್ಕೆ ಇಲ್ಲ ಅನುಮತಿ
Team Udayavani, Jul 9, 2020, 2:38 PM IST
ಚಿಕ್ಕಮಗಳೂರು: ಜೋರು ಮಳೆಯ ಕಾರಣ ಗುಡ್ಡ ಕುಸಿಯುವ ಸಂಭವವಿರುವ ಕಾರಣ ಚಾರ್ಮಾಡಿ ಘಾಟಿಯಲ್ಲಿ ಸಂಜೆ 7 ರಿಂದ ಬೆಳೆಗ್ಗೆ 7ರ ತನಕ ಯಾವುದೇ ವಾಹನಗಳು ಸಂಚರಿಸದಂತೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಡಾ.ಗೌತಮ್ ಬಗಾದಿ ಆದೇಶಿಸಿದ್ದಾರೆ.
ಕಳೆದ ಬಾರಿ ಮಳೆಗಾಲದಲ್ಲಿ ಗುಡ್ಡ ಕುಸಿದಿದ್ದು, ರಸ್ತೆಗಳು ಸಂಪೂರ್ಣ ಹಾಳಾಗಿತ್ತು. ನಂತರ ತಾತ್ಕಾಲಿಕವಾಗಿ ಕೆಲಸ ಪ್ರಾರಂಭಿಸಿ ಬೇಸಿಗೆಯಲ್ಲಿ ಲಘು ವಾಹನ ಸಂಚರಿಸಲು ಅವಕಾಶ ಕಲ್ಪಿಸಲಾಗಿತ್ತು. ಆದರೆ ಈ ಬಾರಿ ಮಳೆ ಜೋರಾಗಿ ಇರುವುದರಿಂದ ಅಲ್ಲಲ್ಲಿ ಮಣ್ಣು ಕುಸಿಯುವ ಸಾಧ್ಯತೆಯಿದೆ. ರಸ್ತೆಗಳಿಗೆ ತಾತ್ಕಾಲಿಕ ತಡೆಗೋಡೆ ನಿರ್ಮಿಸಿದ್ದು , ರಾತ್ರಿಯ ವೇಳೆ ಸಂಚರಿಸಲು ಸೂಕ್ತವಿಲ್ಲ. ಬೃಹತ್ ಗಾತ್ರದ ಮರಗಳು ಉರುಳಿ ಬೀಳುವ, ಭೂ ಕುಸಿತವಾಗುವ ಸಂಭವನೆಗಳು ಇದೆ ಎಂದು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಿದ್ದರು.
ಈ ಕುರಿತು ಪರಿಶೀಲನೆ ಮಾಡಿದ ಚಿಕ್ಕಮಗಳೂರು ಜಿಲ್ಲಾಧಿಕಾರಿ ಡಾ. ಗೌತಮ್ ಬಗಾದಿ ಅವರು, ಮುಂದಿನ ಆದೇಶ ಬರುವವರೆಗೂ ರಾಷ್ಟ್ರೀಯ ಹೆದ್ದಾರಿ 73ರ ಮಂಗಳೂರು- ತುಮಕೂರು ರಸ್ತೆಯ ಚಾರ್ಮಾಡಿ ಘಾಟಿ ಚಿಕ್ಕಮಗಳೂರು ಜಿಲ್ಲಾ ಗಡಿಯಿಂದ ಕೊಟ್ಟಿಗೆಹಾರವರೆಗೆ ಪ್ರತಿ ದಿನ ಸಂಜೆ 7ರಿಂದ ಬೆಳಿಗ್ಗೆ 7ರ ವರೆಗೆ ವಾಹನ ಸಂಚಾರ ನಿರ್ಬಂಧಿಸಿ ಆದೇಶಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
MUST WATCH
ಹೊಸ ಸೇರ್ಪಡೆ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…