ಕೈಗಾರಿಕೆ ಸ್ಥಾಪಿಸದ ಭೂಮಿ ವಶಪಡಿಸಿಕೊಳ್ಳಿ

•ಅರ್ಹರಿಗೆ ಭೂಮಿ ನೀಡಲು ಅಧಿಕಾರಿಗಳಿಗೆ ಸೂಚನೆ •ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಸಿ.ಟಿ.ರವಿ ಚಾಲನೆ

Team Udayavani, Jun 18, 2019, 11:01 AM IST

cm-tdy-2..

ಚಿಕ್ಕಮಗಳೂರು: ಕೈಗಾರಿಕಾ ವಸಾಹತುನಲ್ಲಿ ಮೂಲಭೂತ ಸೌಕರ್ಯಗಳ ವಿವಿಧ ಕಾಮಗಾರಿಗಳಿಗೆ ಶಾಸಕ ಸಿ.ಟಿ.ರವಿ ಗುದ್ದಲಿ ಪೂಜೆ ನೆರವೇರಿಸಿದರು.

ಚಿಕ್ಕಮಗಳೂರು: ಕೈಗಾರಿಕಾ ವಸಾಹತುಗಳಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಭೂಮಿ ಪಡೆದು ಕೈಗಾರಿಕೆ ಸ್ಥಾಪನೆ ಮಾಡದಿರುವ ಪ್ರಕರಣಗಳಲ್ಲಿ ಭೂಮಿಯನ್ನು ಮುಟ್ಟುಗೋಲು ಹಾಕಿಕೊಂಡು ಯುವ ಉತ್ಸಾಹಿ ಕೈಗಾರಿಕೋದ್ಯಮಿಗಳಿಗೆ ಹಂಚಿಕೆ ಮಾಡಬೇಕೆಂದು ಶಾಸಕ ಸಿ.ಟಿ.ರವಿ ಸೂಚನೆ ನೀಡಿದರು.

ನಗರದ ಜಿಲ್ಲಾ ಪಂಚಾಯತ್‌ ಸಮೀಪದ ಕೈಗಾರಿಕಾ ವಸಾಹತಿನಲ್ಲಿ ಮೂಲಭೂತ ಸೌಕರ್ಯ ಒದಗಿಸಲು ವಿವಿಧ ಕಾಮಗಾರಿಗಳಿಗೆ ಸೋಮವಾರ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.

ಸರ್ಕಾರ ನಿಯಮಕ್ಕೆ ತಿದ್ದುಪಡಿ ತಂದು ಅಥವಾ ಕಾಯ್ದೆ ರೂಪಿಸಿ ಕೈಗಾರಿಕೆ ಆರಂಭದ ಹೆಸರಿನಲ್ಲಿ ಭೂಮಿ ಪಡೆದು ಅದನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ರಿಯಲ್ ಎಸ್ಟೇಟ್ ದಂಧೆಗೆ ಅವಕಾಶವಾಗದಂತೆ ತಕ್ಷಣ ಈ ಭೂ ಮಂಜೂರಾತಿಯನ್ನು ರದ್ದುಪಡಿಸಬೇಕೆಂದು ಹೇಳಿದರು.

ರಿಯಲ್ ಎಸ್ಟೇಟ್ ದಂಧೆ: ಈ ಹಿನ್ನೆಲೆಯಲ್ಲಿ ಮುಂದಿನ ಅಧಿವೇಶನದಲ್ಲಿ ವಿಷಯವನ್ನು ಪ್ರಸ್ತಾಪಿಸಿ ಸರ್ಕಾರದ ಗಮನ ಸೆಳೆಯುವುದಾಗಿ ತಿಳಿಸಿದ ಶಾಸಕರು, ಜಿಲ್ಲೆಯಲ್ಲಿ ರಿಯಲ್ ಎಸ್ಟೇಟ್ ದಂಧೆ ತೀವ್ರವಾಗಿರದೇ ಇರಬಹುದು. ಆದರೆ, ಬೆಂಗಳೂರು ಹಾಗೂ ದೊಡ್ಡ ನಗರಗಳಲ್ಲಿ ಇದೊಂದು ದೊಡ್ಡ ದಂಧೆಯಾಗಿ ಮಾರ್ಪಟ್ಟಿದೆ ಎಂದು ಹೇಳಿದರು.

ಗುಣಮಟ್ಟ ಕಾಪಾಡದಿದ್ದರೆ ಕ್ರಮ: ನಗರದ ಕೈಗಾರಿಕಾ ವಸಾಹತಿನಲ್ಲಿ 2.42 ಕೋಟಿ ರೂ. ವೆಚ್ಚದಲ್ಲಿ 1,700 ಮೀಟರ್‌ ಡಾಂಬರು ರಸ್ತೆ ನಿರ್ಮಾಣ, 2,725 ಮೀಟರ್‌ ಚರಂಡಿ ದುರಸ್ತಿ, 820 ಮೀಟರ್‌ ಹೊಸ ಚರಂಡಿ ನಿರ್ಮಾಣ ಹಾಗೂ ನೀರು ಸರಬರಾಜು ವ್ಯವಸ್ಥೆಗೆ ಗುದ್ದಲಿ ಪೂಜೆ ನೆರವೇರಿಸಿದ್ದು, ಕಾಮಗಾರಿಯನ್ನು ಗುಣಮಟ್ಟದಲ್ಲಿ ಮಾಡದಿದ್ದರೆ ಕ್ರಮ ಕೈಗೊಳ್ಳುವುದಾಗಿ ಗುತ್ತಿಗೆದಾರರಿಗೆ ಎಚ್ಚರಿಕೆ ನೀಡಿದರು. ವಸಾಹತಿನಲ್ಲಿರುವ ಕೈಗಾರಿಕೋದ್ಯಮಿಗಳು ಕಾಮಗಾರಿ ಬಗ್ಗೆ ಗಮನ ಹರಿಸಿ ಲೋಪಗಳು ಕಂಡು ಬಂದಲ್ಲಿ ತಕ್ಷಣ ತಿಳಿಸಬೇಕೆಂದು ಹೇಳಿದರು.

ಜನಸಂಖ್ಯೆ ಪ್ರಗತಿಗೆ ವಿರೋಧವಲ್ಲ. ಆದರೆ, ಅದನ್ನು ಮಾನವ ಸಂಪನ್ಮೂಲವಾಗಿ ಪರಿವರ್ತಿಸಬೇಕಾಗಿದೆ. ಜನ ಒಂದು ಕಸುಬಿನಲ್ಲಿ ಪರಿಣತಿ ಪಡೆದರೆ ಆಗ ಅದು ಕೌಶಲ್ಯಪೂರ್ಣ ಸಂಪನ್ಮೂಲವಾಗುತ್ತದೆ. ಇಂದು ಕೇಂದ್ರ ಸರ್ಕಾರ ಯಾವುದೇ ಭದ್ರತೆ ಇಲ್ಲದೆ 5 ಸಾವಿರ ರೂ.ನಿಂದ 10 ಲಕ್ಷ ರೂ.ವರೆಗೆ ಮುದ್ರಾ ಯೋಜನೆಯಡಿ ಹಾಗೂ ಇನ್ನು ಕೆಲವು ಯೋಜನೆಗಳ ಮೂಲಕ 50 ಲಕ್ಷ ರೂ. ವರೆಗೆ ವಾಣಿಜ್ಯ ಬ್ಯಾಂಕ್‌ಗಳಲ್ಲಿ ಸಾಲ ನೀಡುವ ವ್ಯವಸ್ಥೆ ಜಾರಿಗೆ ತಂದಿದೆ. ಇದನ್ನು ಉಪಯೋಗಿಸಿಕೊಳ್ಳಬೇಕು. ಸಾಲಕ್ಕಾಗಿ ಕೈಗಾರಿಕಾ ಯೋಜನಾ ವರದಿ ರೂಪಿಸದೇ ಕೈಗಾರಿಕಾ ಯೋಜನಾ ವರದಿ ರೂಪಿಸಿ ಸಾಲ ಪಡೆದು ಕೈಗಾರಿಕೆಗಳನ್ನು ಸ್ಥಾಪಿಸಬೇಕೆಂದು ಸಲಹೆ ಮಾಡಿದರು.

ಚತುಷ್ಪಥ ರಸ್ತೆಗೆ ಮನವಿ: ಈ ಕೈಗಾರಿಕಾ ವಸಾಹತಿನಲ್ಲಿ ಡಿಸೆಂಬರ್‌ ತಿಂಗಳೊಳಗೆ ಒಳಚರಂಡಿ ವ್ಯವಸ್ಥೆ ಕಲ್ಪಿಸಲಾಗುವುದು. ಜೂ.20ರಂದು ಚಿಕ್ಕಮಗಳೂರು-ಬೇಲೂರು-ಹಾಸನಕ್ಕೆ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಕೇಂದ್ರ ಸಂಪರ್ಕ ಖಾತೆ ಸಚಿವ ನಿತಿನ್‌ ಗಡ್ಕರಿ ಅವರನ್ನು ಭೇಟಿ ಮಾಡಿ ಹಣ ಮಂಜೂರಾತಿಗೆ ಮನವಿ ಮಾಡಲಾಗುವುದು. ಚಿಕ್ಕಮಗಳೂರು-ಸಕಲೇಶಪುರ ರೈಲ್ವೆ ಮಾರ್ಗದ ಬದಲು ಯಾವುದೇ ಕಾಡು ನಾಶವಾಗದ, ಏರುತಿಟ್ಟುಗಳಿಲ್ಲದ ಸಮತಟ್ಟು ಭೂಮಿಯಲ್ಲಿ ಸಾಗುವ ಚಿಕ್ಕಮಗಳೂರು-ಬೇಲೂರು-ಹಾಸನ ರೈಲ್ವೆ ಮಾರ್ಗ ನಿರ್ಮಾಣಕ್ಕೆ ರೈಲ್ವೆ ಖಾತೆ ಸಚಿವ ಪಿಯೂಷ್‌ ಗೋಯೆಲ್ ಅವರನ್ನು ಸಂಸದರೊಂದಿಗೆ ಭೇಟಿ ಮಾಡಿ ಮಾರ್ಗ ಬದಲಾವಣೆಗೆ ಒತ್ತಾಯಿಸಲಾಗುವುದು ಎಂದು ಹೇಳಿದರು.

ಹೊಸ ವಸಾಹತಿಗೆ ಭೂಮಿ: ತಾಲೂಕಿನ ಕಳಸಾಪುರ, ಹಿರೇಗೌಜದಲ್ಲಿ ಅಥವಾ ಮಾಗಡಿ-ಕಳಸಾಪುರ ಮಧ್ಯದಲ್ಲಿ ಕೈಗಾರಿಕಾ ವಸಾಹತು ಸ್ಥಾಪನೆಗೆ ಭೂಮಿ ಪಡೆಯಲು ಕೈಗಾರಿಕಾ ಇಲಾಖೆ ಆಲೋಚಿಸಬೇಕು. ಈಗಾಗಲೇ ದೇವನೂರು ಸಮೀಪ ಕೈಗಾರಿಕಾ ವಸಾಹತು ನಿರ್ಮಿಸಿ ಜವಳಿ ಪಾರ್ಕ್‌ ನಿರ್ಮಿಸಲು ಸರ್ವೆ ಕಾರ್ಯ ಕೈಗೊಳ್ಳಲಾಗಿದೆ. ಈ ಭಾಗದ 3 ರಿಂದ 4 ಸಾವಿರಕ್ಕೂ ಹೆಚ್ಚು ಯುವಜನರು ಬೆಂಗಳೂರಿನಲ್ಲಿ ಟೆಕ್ಸ್‌ಟೈಲ್ಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಇಲ್ಲೇ ಪಾರ್ಕ್‌ ನಿರ್ಮಿಸಿದರೆ ಅವರಿಗೆ ಮನೆ ಸಮೀಪವೇ ಉದ್ಯೋಗ ನೀಡಬಹುದೆಂದು ಹೇಳಿದರು.

ಕಾರ್ಯಕ್ರಮದಲ್ಲಿ ಹಿರಿಯ ಕೈಗಾರಿಕೋದ್ಯಮಿ ಹಾಗೂ ಕೈಗಾರಿಕೋದ್ಯಮಿಗಳ ಸಂಘದ ಅಧ್ಯಕ್ಷ ಮುನೀರ್‌ ಅಹಮ್ಮದ್‌, ಕೈಗಾರಿಕೋದ್ಯಮಿ ಎಂ.ಎಸ್‌.ಜಯರಾಮ್‌, ನಾಸೀರ್‌, ಇಂದ್ರೇಶ್‌, ಸುಭಾಷ್‌ಚಂದ್ರ ಭಟ್, ಇಲಾಖೆಯ ಜಂಟಿ ನಿರ್ದೇಶಕ ಗಣೇಶ್‌, ಸಹಾಯಕ ನಿರ್ದೇಶಕ ರವಿಕುಮಾರ್‌ ಇತರರಿದ್ದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.