ಆಪರೇಷನ್‌ ಗಜ ಯಶಸ್ವಿ; ಒಂಟಿ ಸಲಗ ಸೆರೆ

ಮೂರ್ನಾಲ್ಕು ತಿಂಗಳಿನಿಂದ ಉಪಟಳ ನೀಡುತ್ತಿದ್ದ ಸಲಗ

Team Udayavani, Apr 10, 2022, 3:19 PM IST

elephant

ಚಿಕ್ಕಮಗಳೂರು: ಹಂಪಾಪುರ, ಬೀಕನಹಳ್ಳಿ ಹಾಗೂ ಚುರ್ಚೆಗುಡ್ಡ ಸುತ್ತಮುತ್ತಲಿನ ಜನರಿಗೆ ಕಳೆದ ಮೂರ್ನಾಲ್ಕು ತಿಂಗಳಿನಿಂದ ಉಪಟಳ ನೀಡುತ್ತಿದ್ದ ಒಂಟಿ ಸಲಗವನ್ನು ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

ಸೆರೆ ಹಿಡಿದ ಸಲಗವನ್ನು ಬಂಡೀಪುರ ಅಭಯಾರಣ್ಯಕ್ಕೆ ರವಾನಿಸಲಾಗಿದೆ. ಕಳೆದ ಮೂರ್ನಾಲ್ಕು ತಿಂಗಳಿನಿಂದ ಚಿಕ್ಕಮಗಳೂರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಓಡಾಡುತ್ತಿದ್ದ ಒಂಟಿ ಸಲಗ ರೈತರ ಜಮೀನುಗಳಿಗೆ ದಾಳಿ ಮಾಡಿ ಅಪಾರ ಪ್ರಮಾಣದ ಬೆಳೆಗಳನ್ನು ನಾಶಗೊಳಿಸಿತ್ತು. ಈ ಭಾಗದ ಜನ ದಿನವೂ ಜೀವ ಭಯದಲ್ಲಿ ಓಡಾಡುವ ಸ್ಥಿತಿ ನಿರ್ಮಾಣವಾಗಿತ್ತು.

ಒಂಟಿ ಸಲಗವನ್ನು ಸೆರೆ ಹಿಡಿಯುವಂತೆ ಅಥವಾ ಕಾಡಿಗಟ್ಟುವಂತೆ ಜನ ಅರಣ್ಯ ಇಲಾಖೆಗೆ ಪದೇ ಪದೇ ಒತ್ತಡ ತಂದಿದ್ದರು. ಒಂಟಿ ಸಲಗ ಸೆರೆ ಹಿಡಿಯಲು ಕಳೆದ ಎರಡು ವಾರಗಳಿಂದ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದರು. ಶನಿವಾರ ಬೆಳಗ್ಗೆ ಕಾರ್ಯಾಚರಣೆ ಆರಂಭಿಸಿದ ಸಿಬ್ಬಂದಿ ಚಿಕ್ಕಮಗಳೂರು ಸಮೀಪದ ಬೀಕನಹಳ್ಳಿಯಲ್ಲಿ ಸಲಗವನ್ನು ಸೆರೆ ಹಿಡಿದಿದ್ದಾರೆ. ಎರಡು ವಾರಗಳ ಹಿಂದೆ ಅರಣ್ಯ ಇಲಾಖೆ ಅಧಿಕಾರಿಗಳು ನಾಗರಹೊಳೆಯಿಂದ ಭೀಮ ಮತ್ತು ಅರ್ಜುನ ಹೆಸರಿನ ಸಾಕಾನೆಗಳನ್ನು ಕರೆಸಿ ಕಾರ್ಯಾಚರಣೆ ಆರಂಭಿಸಿದ್ದರು. ಚರ್ಚೆಗುಡ್ಡ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸುವ ವೇಳೆ ಸಾಕಾನೆಗಳ ಮೇಲೆ ಕಾಡಾನೆ ಎಗರಿ ಬಂದಿದ್ದು, ಈ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಗಾಳಿಯಲ್ಲಿ ಗುಂಡು ಹಾರಿಸಿದ್ದರು. ಆಗ ಮಾವುತನಿಗೆ ಸಣ್ಣಪುಟ್ಟ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಒಂಟಿ ಸಲಗವನ್ನು ಸೆರೆ ಹಿಡಿಯಬೇಕೆಂದು ಹಠಕ್ಕೆ ಬಿದ್ದ ಅರಣ್ಯ ಇಲಾಖೆ ಸಿಬ್ಬಂದಿ ನಾಗರಹೊಳೆಯ ಭೀಮ ಮತ್ತು ಅರ್ಜುನ ಜೊತೆಗೆ ಶಿವಮೊಗ್ಗ ಜಿಲ್ಲೆಯ ಸಕ್ರೆಬೈಲು ಆನೆ ಬಿಡಾರದ ಬಾಲಣ್ಣ, ಸಾಗರ್‌ ಮತ್ತು ಭಾನುಮತಿ ಹೆಣ್ಣಾನೆಯನ್ನು ಕರೆಸಿಕೊಳ್ಳಲಾಗಿತ್ತು.

ಐದು ಸಾಕಾನೆ ಮತ್ತು ಮಾವುತರು, ನಾಗರಹೊಳೆಯ 15 ಜನ ಸಿಬ್ಬಂದಿ, ಸಕ್ರೇಬೈಲು ಆನೆ ಬಿಡಾರದ 15 ಜನ ಸಿಬ್ಬಂದಿ, ಶಿವಮೊಗ್ಗದ ಡಾ|ವಿನಯ್‌ ಹಾಗೂ ಬಂಡೀಪುರದ ಡಾ|ವಾಸೀಂ ಸೇರಿದಂತೆ 100 ಜನ ಸಿಬ್ಬಂದಿ ಶನಿವಾರ ಬೆಳಗ್ಗೆ ಕಾರ್ಯಾಚರಣೆಗಿಳಿದರು. ಸಾಕಾನೆ ಮತ್ತು ಸಿಬ್ಬಂದಿ ಕಾಡಂಚಿನಲ್ಲಿ ಸಂಚರಿಸಿದರು. ಬೀಕನಹಳ್ಳಿ ಸಮೀಪ ಬೆಳಗ್ಗೆ 9 ಗಂಟೆ ಸುಮಾರಿಗೆ ಐದು ಸಾಕಾನೆಗಳು ಒಂಟಿ ಸಲಗವನ್ನು ಸುತ್ತುವರಿಯುತ್ತಿದ್ದಂತೆ ವೈದ್ಯರು ಒಂಟಿ ಸಲಗಕ್ಕೆ ಅರಿವಳಿಕೆ ಚುಚ್ಚುಮದ್ದು ನೀಡಿದರು.

ಪ್ರಜ್ಞೆ ತಪ್ಪುತ್ತಿದ್ದಂತೆ ಕುತ್ತಿಗೆಗೆ ಹಗ್ಗ ಬಿಗಿದು ಸರಪಳಿಯಿಂದ ಬಂಧಿಸಲಾಯಿತು. ಬಳಿಕ ಸಾಕಾನೆಗಳ ಸಹಾಯ ಮತ್ತು ಕ್ರೇನ್‌ ಮೂಲಕ ಒಂಟಿ ಸಲಗವನ್ನು ಲಾರಿ ಹತ್ತಿಸಿ 11 ಗಂಟೆ ವೇಳೆಗೆ ಬಂಡೀಪುರ ಅಭಯಾರಣ್ಯಕ್ಕೆ ರವಾನಿಸಲಾಯಿತು. ಕಳೆದ ಅನೇಕ ದಿನಗಳಿಂದ ಒಂಟಿ ಸಲಗದ ಉಪಟಳದಿಂದ ಜೀವ ಭಯದಲ್ಲಿದ್ದ ಜನ ಆನೆ ಸೆರೆಯಿಂದ ನಿಟ್ಟುಸಿರು ಬಿಟ್ಟಿದ್ದಾರೆ.

ಚಿಕ್ಕಮಗಳೂರು ಸುತ್ತಮುತ್ತ ಕಳೆದ ಮೂರ್ನಾಲ್ಕು ತಿಂಗಳಿಂದ ಸಂಚರಿಸುತ್ತಿದ್ದ ಒಂಟಿ ಸಲಗವನ್ನು ಐದು ಸಾಕಾನೆ ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಶನಿವಾರ ಸೆರೆ ಹಿಡಿದಿದ್ದು, ಬಂಡೀಪುರ ಅರಣ್ಯಕ್ಕೆ ಬಿಡಲಾಗುತ್ತದೆ. -ಎನ್‌.ಇ.ಕ್ರಾಂತಿ, ಡಿಎಫ್‌ಒ

ಟಾಪ್ ನ್ಯೂಸ್

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

4-chikkamagaluru

Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.