ದುರ್ಗದಹಳ್ಳಿಯಳ್ಳಿ ಸಿಲುಕಿಕೊಂಡಿದ್ದಾರೆ 50 ಕ್ಕೂ ಹೆಚ್ಚು ಜನರು
ನಾಲ್ಕು ದಿನದಿಂದ ಸಂಪರ್ಕ ಕಳೆದುಕೊಂಡಿರೋ ಗ್ರಾಮಸ್ಥರು
Team Udayavani, Aug 12, 2019, 9:56 AM IST
ಪ್ರವಾಹದ ಸಾಂದರ್ಭಿಕ ಚಿತ್ರ
ಚಿಕ್ಕಮಗಳೂರು: ಮಲೆನಾಡಿನಲ್ಲಿ ಕಳೆದೊಂದು ವಾರದಿಂದ ಬಿರುಸಾಗಿ ಸುರಿಯುತ್ತಿದ್ದ ಮಳೆ ರವಿವಾರದಿಂದ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ.
ಆದರೆ ಜಿಲ್ಲೆಯ ದುರ್ಗದಹಳ್ಳಿ ಗುಡ್ಡ ಎಂಬ ಪ್ರದೇಶದಲ್ಲಿ ಸುಮಾರು 50ಕ್ಕೂ ಹೆಚ್ಚು ಜನ ಸಿಲುಕಿದ್ದು, ರಕ್ಷಣಾ ಕಾರ್ಯ ನಡೆಯುತ್ತಿದೆ.
ಮೂಡಿಗೆರೆ ತಾಲೂಕಿನ ಎರಡು ಮೂರು ಗ್ರಾಮದಲ್ಲಿ ಜನರು ಸಿಲುಕಿದ್ದು, ಪರದಾಟ ನಡೆಸುತ್ತಿದ್ದಾರೆ. ಕಳೆದ ನಾಲ್ಕು ದಿನದಿಂದ ಇಲ್ಲಿನ ಗ್ರಾಮಸ್ಥರು ಹೊರಗಿನ ಸಂಪರ್ಕ ಕಳೆದುಕೊಂಡಿದ್ದಾರೆ.
ಕಳೆದ ಮೂರು ದಿನದಿಂದ ರಕ್ಷಣಾ ಕಾರ್ಯಾಚರಣೆ ಮಾಡಿದ್ದರೂ ಈ ಸ್ಥಳಕ್ಕೆ ಹೋಗುವುದು ಸಾಧ್ಯವಾಗಿರಲಿಲ್ಲ. ಇಂದು ಜನರನ್ನ ಸುರಕ್ಷಿತ ಸ್ಥಳಕ್ಕೆ ಕರೆ ತರಲು ಜಿಲ್ಲಾಡಳಿತ ಪ್ರಯತ್ನ ನಡೆಸುತ್ತಿದ್ದು, ದುರ್ಗದಹಳ್ಳಿಗೆ ಯೋಧರ ತಂಡ ತೆರಳುತ್ತಿದೆ.
ರಸ್ತೆಯೆಲ್ಲಾ ಕುಸಿತವಾಗಿರುವುದರಿಂದ ಸ್ಥಳಕ್ಕೆ ಹೋಗುವುದೇ ದುಸ್ತರವಾಗಿದೆ. ರಸ್ತೆಯನ್ನು ತೆರಳುಗೊಳಿಸಿಕೊಂಡು ಯೋಧರು ಸ್ಥಳಕ್ಕೆ ಹೋಗಲು ಹರಸಾಹಸ ಪಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ