ಕಾಮಗಾರಿ ಪೂರ್ಣಗೊಳಿಸದ ಗುತ್ತಿಗೆದಾರನಿಗೆ ದಂಡ

• ಶಾಸಕ ಸಿ.ಟಿ. ರವಿ ಸೂಚನೆ •ಅವಧಿ ಮೀರಿದರೂ ಮುಗಿಯದ ಯೋಜನೆ

Team Udayavani, Jun 4, 2019, 8:13 AM IST

cm-tdy-2..

ಚಿಕ್ಕಮಗಳೂರು: ನಗರಸಭೆಯಲ್ಲಿ ಶಾಸಕ ಸಿ.ಟಿ. ರವಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

ಚಿಕ್ಕಮಗಳೂರು: ಅಮೃತ್‌ ಯೋಜನೆಯಡಿ ಕಾಮಗಾರಿ ನಿರ್ವಹಿಸುತ್ತಿರುವ ಗುತ್ತಿಗೆದಾರರಿಗೆ ಸಮಯ ಮೀರಿದ್ದರೂ ಕಾಮಗಾರಿ ಪೂರ್ಣಗೊಳಿಸದ ಹಿನ್ನೆಲೆ ದಂಡ ವಿಧಿಸುವಂತೆ ಶಾಸಕ ಸಿ.ಟಿ. ರವಿ ಸೂಚಿಸಿದರು.

ನಗರಸಭೆ ಕಚೇರಿಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಅಮೃತ್‌ ಯೋಜನೆಯಡಿ ನಗರಕ್ಕೆ ದಿನದ 24 ಗಂಟೆ ನೀರು ಪೂರೈಸುವ ಕಾಮಗಾರಿಯನ್ನು ಗುತ್ತಿಗೆದಾರರು ಮೇ ಅಂತ್ಯಕ್ಕೆ ಪೂರ್ಣಗೊಳಿಸಬೇಕಿತ್ತು. ಆದರೂ ಕಾಮಗಾರಿ ಈವರೆಗೂ ಪೂರ್ಣಗೊಳಿಸಿಲ್ಲ ಎಂದರು.

ರಾಮನಹಳ್ಳಿಯ ನೀರು ಶುದ್ಧೀಕರಣ ಘಟಕದಲ್ಲಿ ಕೇವಲ 5-6 ಜನ ಕೆಲಸ ಮಾಡುತ್ತಿದ್ದಾರೆ. ಇಷ್ಟು ಜನ ಕೆಲಸ ಮಾಡಿದರೆ ಕಾಮಗಾರಿ ಪೂರ್ಣಗೊಳ್ಳುವುದಾದರೂ ಹೇಗೆ. ನಗರದ ವಿವಿಧೆಡೆಗಳಲ್ಲಿ ಪೈಪ್‌ಲೈನ್‌ ಅಳವಡಿಸಲು ರಸ್ತೆಯನ್ನು ಅಗೆಯಲಾಗಿದೆ. ಗುತ್ತಿಗೆ ಕರಾರಿನಂತೆ ರಸ್ತೆ ಅಗೆದು ಪೈಪ್‌ಲೈನ್‌ ಅಳವಡಿಸಿದ ನಂತರ ಅದನ್ನು ಮುಚ್ಚಿ ಮೊದಲಿದ್ದ ರೀತಿಯಲ್ಲಿಯೇ ರಸ್ತೆ ಮಾಡಬೇಕು. ಆದರೆ ನಗರದ ಯಾವುದೇ ಭಾಗದಲ್ಲಿಯೂ ಈ ಕೆಲಸ ಆಗಿಲ್ಲ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್‌ ಮಾತನಾಡಿ, 154 ಕೋಟಿ ರೂ. ವೆಚ್ಚದ ಕಾಮಗಾರಿಯನ್ನು ಕೇವಲ 5-10 ಕೆಲಸಗಾರರನ್ನಿಟ್ಟುಕೊಂಡು ಮಾಡಿದರೆ ಹೇಗೆ. ಈ ರೀತಿ ಕೆಲಸ ಮಾಡಿದರೆ ಎಷ್ಟು ವರ್ಷವಾದರೂ ಕಾಮಗಾರಿ ಮುಗಿಯುವುದಿಲ್ಲ. ನಿಮಗೆ ಆಗುವುದಿಲ್ಲ ಎಂದಾದರೆ ಬರೆದುಕೊಡಿ ಬೇರೆಯವರಿಂದ ಕೆಲಸ ಮಾಡಿಸುತ್ತೇವೆ. ನಗರಸಭೆ, ಜಿಲ್ಲಾಡಳಿತದಿಂದ ಎಲ್ಲ ರೀತಿಯ ಸಹಕಾರ ಕೊಟ್ಟರೂ ಕೆಲಸ ಮಾಡಲು ಏನು ತೊಂದರೆ ಎಂದು ಪ್ರಶ್ನಿಸಿದರು.

ಶಾಸಕ ಸಿ.ಟಿ. ರವಿ ಮಾತನಾಡಿ, ನಾಳೆಯೇ ಗುತ್ತಿಗೆದಾರರನ್ನು ಕರೆಸಿ ಅವರೊಂದಿಗೆ ಚರ್ಚಿಸಿ. ಮತ್ತೂಮ್ಮೆ ಎಷ್ಟು ದಿನದಲ್ಲಿ ಯಾವ ಯಾವ ಕೆಲಸ ಮಾಡಬೇಕೆಂಬ ಬಗ್ಗೆ ನಿರ್ಧರಿಸಿ. ಅಷ್ಟು ಕೆಲಸ ಪೂರ್ಣಗೊಳಿಸಲು ಎಷ್ಟು ಜನ ಕೆಲಸಗಾರರು ಬೇಕಾಗುತ್ತದೆ ಎಂಬುದನ್ನು ತೀರ್ಮಾನಿಸಿ. ಅಷ್ಟು ಜನ ಕೆಲಸಗಾರರನ್ನು ಪೂರೈಸಲು ಗುತ್ತಿಗೆದಾರರಿಗೆ ಸಾಧ್ಯವಿದೆಯೋ ಇಲ್ಲವೋ ಎಂಬುದನ್ನು ಖಚಿತಪಡಿಸಿಕೊಂಡು ನಂತರ ಕಾಲವನ್ನು ವಿಸ್ತರಿಸಿಕೊಡಿ ಎಂದು ತಿಳಿಸಿದರು.

ಜಿಲ್ಲಾಕಾರಿ ಡಾ. ಬಗಾದಿ ಗೌತಮ್‌ ಮಾತನಾಡಿ, ನಾಳೆಯೇ ಗುತ್ತಿಗೆದಾರರನ್ನು ನಮ್ಮ ಕಚೇರಿಗೆ ಕಳುಹಿಸಿ. ನಿಗದಿತ ಸಮಯದಲ್ಲಿ ಕಾಮಗಾರಿ ಪೂರ್ಣಗೊಳಿಸದ ಹಿನ್ನೆಲೆಯಲ್ಲಿ ಅವರಿಗೆ ದಂಡ ವಿಧಿಸಿ ಎಂದು ಸೂಚಿಸಿದರು. ಒಳಚರಂಡಿ ಕಾಮಗಾರಿ ಕುರಿತು ಮಾಹಿತಿ ಕೇಳಿದಾಗ ಮಾತನಾಡಿದ, ಒಳಚರಂಡಿ ಮಂಡಳಿ ಅಧಿಕಾರಿಗಳು, 1, 2 ಮತ್ತು 3ನೇ ಹಂತದ ಕಾಮಗಾರಿಗಳು ಇನ್ನೂ ನಡೆಯುತ್ತಿವೆ. 4, 5 ಮತ್ತು 6ನೇ ಹಂತದ ಕಾಮಗಾರಿಗಳು ಪೂರ್ಣಗೊಂಡಿವೆ. ಮೊದಲ 3 ಹಂತದ ಕಾಮಗಾರಿಗಳು ಪೂರ್ಣಗೊಳ್ಳದಿರುವುದರಿಂದ ಸಮಸ್ಯೆಯಾಗಿದೆ. ಗುತ್ತಿಗೆದಾರರು ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ತಿಳಿಸಿದರು. ಶಾಸಕ ಸಿ.ಟಿ. ರವಿ ಮಾತನಾಡಿ, ಈ ಕಾಮಗಾರಿಯು 2013ನೇ ಸಾಲಿಗೇ ಪೂರ್ಣಗೊಳ್ಳಬೇಕಿತ್ತು. ಈಗಾಗಲೇ ಹಲವು ಬಾರಿ ಹೆಚ್ಚುವರಿ ಸಮಯ ನೀಡಲಾಗಿದೆ. ಇದರಿಂದಾಗಿ ಸರ್ಕಾರದ ಬೊಕ್ಕಸಕ್ಕೂ ಕೋಟ್ಯಂತರ ರೂ. ವೆಚ್ಚವಾಗಿದೆ. ಇಷ್ಟಾದರೂ ಕಾಮಗಾರಿ ಪೂರ್ಣಗೊಂಡಿಲ್ಲವೆಂದರೆ ಹೇಗೆ ಎಂದು ಪ್ರಶ್ನಿಸಿ, ಗುತ್ತಿಗೆದಾರರ ಮೇಲೆ ಒತ್ತಡ ಹಾಕಿ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಿ ಎಂದು ಸೂಚಿಸಿದರು.

ಕೋಟ್ಯಂತರ ರೂ. ಬಾಕಿ: ಕಂದಾಯ ವಸೂಲಾತಿ ಬಗ್ಗೆ ಪ್ರಶ್ನಿಸಿದಾಗ ಅಧಿಕಾರಿಗಳು ಪ್ರಸ್ತುತ ಸಾಲಿನಲ್ಲಿ 2.50 ಕೋಟಿ ರೂ. ಕಂದಾಯ ವಸೂಲಿ ಬಾಕಿ ಇದೆ ಎಂದು ಹೇಳಿದರು. ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್‌, ಇಷ್ಟೊಂದು ಕಂದಾಯ ಬಾಕಿ ಹೇಗೆ ಉಳಿಯಿತು ಎಂದು ಪ್ರಶ್ನಿಸಿದರು. ಇದರಲ್ಲಿ ಹಳೆಯ ಬಾಕಿಯೂ ಸೇರಿದೆ. ಹಳೇ ಬಾಕಿ ವಸೂಲಾತಿಗೆ ಹೆಚ್ಚಿನ ಶ್ರಮ ಹಾಕುತ್ತಿರುವುದಾಗಿ ಅಧಿಕಾರಿಗಳು ತಿಳಿಸಿದಾಗ, ಶಾಸಕ ಸಿ.ಟಿ. ರವಿ ಮಾತನಾಡಿ, ಹಳೇ ಬಾಕಿ ಉಳಿಯಲೂ ನೀವೇ ಕಾರಣ. ಸಮಯಕ್ಕೆ ಸರಿಯಾಗಿ ಕಂದಾಯ ವಸೂಲಿ ಮಾಡಬೇಕು ಎಂದರು.

ಸರ್ಕಾರಿ ಇಲಾಖೆಗಳಿಂದಲೇ ಹೆಚ್ಚಿನ ಕಂದಾಯ ಬಾಕಿ ಇದೆ ಎಂದು ತಿಳಿಸಿದಾಗ ಮಾತನಾಡಿದ ಜಿಲ್ಲಾಧಿಕಾರಿಗಳು, ಈ ಬಗ್ಗೆ ತಮಗೆ ಮಾಹಿತಿ ನೀಡಿ, ಸಂಬಂಧಪಟ್ಟ ಕಚೇರಿಗಳೊಂದಿಗೆ ಮಾತನಾಡಿ ಕಂದಾಯ ಕಟ್ಟಿಸುವುದಾಗಿ ಹೇಳಿದರು. ಶಿಕ್ಷಣ ಸಂಸ್ಥೆಗಳ ಕಂದಾಯ ಬಾಕಿ ಬಗ್ಗೆ ಮಾತನಾಡಿದ ಶಾಸಕ ಸಿ.ಟಿ.ರವಿ, ಶಿಕ್ಷಣ ಸಂಸ್ಥೆಗಳು ಸೆಸ್‌ ಅನ್ನು ಕಡ್ಡಾಯವಾಗಿ ಕಟ್ಟಲೇಬೇಕು. ಅದಕ್ಕೆ ಯಾವುದೇ ರೀತಿಯ ರಿಯಾಯಿತಿ ಇಲ್ಲ ಎಂದು ತಿಳಿಸಿದರು.

ನಗರದಲ್ಲಿ ಕಸ ಸಂಗ್ರಹಣೆ ಸರಿಯಾಗಿ ಆಗುತ್ತಿಲ್ಲ. ಆರೋಗ್ಯ ನಿರೀಕ್ಷಕರು ಈ ಬಗ್ಗೆ ಹೆಚ್ಚಿನ ಗಮನಹರಿಸಬೇಕೆಂದು ಶಾಸಕ ಸಿ.ಟಿ. ರವಿ ತಿಳಿಸಿದಾಗ ಮಾತನಾಡಿದ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್‌, ಕಂದಾಯ ನಿರೀಕ್ಷಕರು, ತಾವು ಮತ್ತು ಶಾಸಕರುಗಳನ್ನೊಳಗೊಂಡ ವಾಟ್ಸ್‌ ಅಪ್‌ ಗ್ರೂಪ್‌ ಮಾಡಿ, ಆರೋಗ್ಯ ನಿರೀಕ್ಷಕರು ಪ್ರತಿನಿತ್ಯ ಹಾಜರಾತಿ ಪಡೆಯುವುದು, ಪ್ರತಿಯೊಂದು ವಾರ್ಡಿಗೆ ಭೇಟಿ ನೀಡಿ ಕೆಲಸ ಪರಿಶೀಲಿಸಿರುವ ಭಾವಚಿತ್ರಗಳನ್ನು ವಾಟ್ಸ್‌ ಅಪ್‌ ಗ್ರೂಪಿಗೆ ಹಾಕಬೇಕೆಂದು ಸೂಚಿಸಿದರು.

ಟಾಪ್ ನ್ಯೂಸ್

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್‌ಡಿಡಿ

9 ವರ್ಷದ ಬಾಲಕಿ ಕಿಡ್ನ್ಯಾಪ್ ಮಾಡಿ ಡಿಕೆಶಿ ಆಸ್ತಿ ಬರೆಯಿಸಿಕೊಂಡ್ರು: ಎಚ್‌ಡಿಡಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.