ಸ್ವಾಬ್ ನೀಡಿ 15 ದಿನವಾದರೂ ವರದಿಯಿಲ್ಲ: ಚಿಕ್ಕಮಗಳೂರು ಜಿಲ್ಲಾಡಳಿತದ ವಿರುದ್ಧ ಪ್ರತಿಭಟನೆ
Team Udayavani, Jul 23, 2020, 12:11 PM IST
ಚಿಕ್ಕಮಗಳೂರು: ಕೋವಿಡ್ ಪರೀಕ್ಷೆಗಾಗಿ ಗಂಟಲು ದ್ರವ ಮಾದರಿ ನೀಡಿ 15 ದಿನವಾದರೂ ವರದಿ ನೀಡಿದ ಜಿಲ್ಲಾಡಳಿತದ ವಿರುದ್ಧ ಜನರು ಅಸಮಧಾನಗೊಂಡಿದ್ದು, ಅಸಹಕಾರ ಚಳವಳಿ ನಡೆಸಲು ಕಳಸದ ಜನರು ನಿರ್ಧರಿಸಿದ್ದಾರೆ.
ಸ್ವಾಬ್ ಮಾದರಿ ನೀಡಿ ಎರಡು ವಾರಗಳು ಕಳೆದರೂ ಪರೀಕ್ಷಾ ಫಲಿತಾಂಶವನ್ನು ಜಿಲ್ಲಾಡಳಿತ ನೀಡುತ್ತಿಲ್ಲ. ಹೀಗಾಗಿ ನಾವು ಕೋವಿಡ್ ಪರೀಕ್ಷೆ ನಡೆಸುವುದಿಲ್ಲ ಎಂದು ಅಭಿಯಾನ ಆರಂಭಿಸಲಾಗಿದೆ.
ಆಕ್ರೋಶಗೊಂಡ ಜನರು ಸಾಮಾಜಿಕ ಜಾಲತಾಣದ ಮೂಲಕ ಅಭಿಯಾನ ಆರಂಭಿಸಿದ್ದು, ಕಳಸದಲ್ಲಿ ಯಾರೂ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಡಿ, ಎರಡು ದಿನದಲ್ಲಿ ವರದಿ ನೀಡುವ ಭರವಸೆ ನೀಡಿದರೆ ಮಾತ್ರ ಟೆಸ್ಟ್ ಮಾಡಿಸಿ, ಇಲ್ಲವಾದಲ್ಲಿ ಟೆಸ್ಟ್ ಮಾಡಿಸಿಕೊಳ್ಳುವುದು ಬೇಡ ಎನ್ನುವ ಅಭಿಯಾನ ಆರಂಭಿಸಿದ್ದಾರೆ.
ರಿಪೋರ್ಟ್ ಬರುವುದು ವಿಳಂಬವಾದಲ್ಲಿ ಸೋಂಕು ಖಚಿತ ಎಂಬಂಥ ಪರಿಸ್ಥಿತಿ ಉಂಟಾಗಿದೆ. ಹೀಗಾಗಿ ಗಂಟಲು ದ್ರವ ಮಾದರಿ ಸಂಗ್ರಹಿಸಿದ ಎರಡು ದಿನದಲ್ಲಿ ವರದಿ ನೀಡಬೇಕು ಎಂದು ಒತ್ತಾಯಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ