ಚೆಕ್‌ಪೋಸ್ಟ್‌ ಮೇಲೆ ಪೆಟ್ರೋಲ್‌ ಬಾಂಬ್‌ ದಾಳಿ


Team Udayavani, Feb 18, 2019, 12:30 AM IST

petrol-bomb.jpg

ಚಿಕ್ಕಮಗಳೂರು: ಇಲ್ಲಿಗೆ ಸಮೀಪದ ಬಸರೀಕಲ್‌ ಅರಣ್ಯ ಚೆಕ್‌ಪೋಸ್ಟ್‌ ಮೇಲೆ ಭಾನುವಾರ ಬೆಳಗಿನ ಜಾವ ದುಷ್ಕರ್ಮಿಗಳು ಪೆಟ್ರೋಲ್‌ ಬಾಂಬ್‌ ಸಿಡಿಸಿದ್ದಾರೆ. ನಕ್ಸಲ್‌ ಪೀಡಿತ ಪ್ರದೇಶ ಎಂದು ಗುರುತಿಸಲ್ಪಟ್ಟ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಬಸರೀಕಲ್‌ ಅರಣ್ಯ ಚೆಕ್‌ ಪೋಸ್ಟ್‌ ಮೇಲೆ ದಾಳಿ ನಡೆದಿದ್ದು, ಅದೃಷ್ಟವಶಾತ್‌ ಹೆಚ್ಚಿನ ಹಾನಿಯಾಗಿಲ್ಲ. ಇದು ನಕ್ಸಲರ ಕೃತ್ಯ ಇರಬಹುದೆಂಬ ಸಂಶಯ ಮೂಡಿದೆ. ಅಲ್ಲದೆ, ಕಾಡುಗಳ್ಳರು ಅಥವಾ ಅಕ್ರಮ ಗೋ ಸಾಗಣೆ ಮಾಡುವವರು ಈ ಕೃತ್ಯ ಎಸಗಿರಬಹುದೆಂಬ ಶಂಕೆಯೂ ವ್ಯಕ್ತವಾಗಿದೆ.

ಐದು ಪೆಟ್ರೋಲ್‌ ಬಾಂಬ್‌: ದುಷ್ಕರ್ಮಿಗಳು ಭಾನುವಾರ ಬೆಳಗಿನ ಜಾವ 3.30ರ ಸುಮಾರಿಗೆ ಒಟ್ಟು 5 ಪೆಟ್ರೋಲ್‌ ಬಾಂಬ್‌ಗಳನ್ನು ಸಿಡಿಸಿದ್ದಾರೆ. ಪೆಟ್ರೋಲ್‌ ಬಾಂಬ್‌ ಎಸೆದ ಸಂದರ್ಭದಲ್ಲಿ ಚೆಕ್‌ ಪೋಸ್ಟ್‌ ಒಳಗೆ ಯಾರೂ ಇಲ್ಲದಿದ್ದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ. ಚೆಕ್‌ಪೋಸ್ಟ್‌ ಒಳಗೆ ಸಿಬ್ಬಂದಿ ಕೂರುತ್ತಿದ್ದ ಸ್ಥಳದ ಮೇಲೆ ನೇರವಾಗಿ ಪೆಟ್ರೋಲ್‌ ಬಾಂಬ್‌ಗಳನ್ನು ಎಸೆಯಲಾಗಿದೆ. ಇದರ ಪರಿಣಾಮ ಕೆಲವೊಂದು ದಾಖಲೆಗಳು ಸುಟ್ಟು ಹೋಗಿವೆ.

ಭಾನುವಾರ ರಾತ್ರಿ ಚೆಕ್‌ಪೋಸ್ಟ್‌ನಲ್ಲಿ ಇಬ್ಬರು ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದರು. ಬಾಂಬ್‌ ದಾಳಿ ನಡೆಯುವ ಸ್ವಲ್ಪ ಮೊದಲು ಓರ್ವ ಸಿಬ್ಬಂದಿ ಹೊರಗೆ ಹೋಗಿದ್ದರು. ನಂತರ ಮತ್ತೂಬ್ಬರು ಮೂತ್ರ ವಿಸರ್ಜನೆಗೆಂದು ಹೊರಗೆ ಬಂದಿದ್ದರು. ಆ ಸಂದರ್ಭದಲ್ಲಿಯೇ ಈ ದಾಳಿ ನಡೆದಿದೆ.

ದುಷ್ಕರ್ಮಿಗಳು ಖಾಲಿ ಬಾಟಲಿಗೆ ಮರಳನ್ನು ತುಂಬಿ ಅದರ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಎಸೆದಿದ್ದಾರೆ. ಬಾಂಬ್‌ ಸಿಡಿಸಿರುವ ವಿಚಾರ ತಿಳಿದ ಕೂಡಲೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಶಿಲ್ಪಾ ಸೇರಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಇದು ನಕ್ಸಲ್‌ ಪೀಡಿತ ಪ್ರದೇಶವಾಗಿರುವುದರಿಂದ ನಕ್ಸಲರೇ ಪೆಟ್ರೋಲ್‌ ಬಾಂಬ್‌ ಸಿಡಿಸಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಈ ಪ್ರದೇಶಗಳಲ್ಲಿ ಎಲ್ಲಿಯೂ ನಕ್ಸಲರ ಚಟುವಟಿಕೆ ಕಂಡು ಬಂದಿಲ್ಲ. ಹೀಗಾಗಿ, ಬೇರೆ ಯಾರೋ ಈ ಕೃತ್ಯ ಎಸಗಿರಬಹುದು ಎಂದೂ ಹೇಳಲಾಗುತ್ತಿದೆ. ತನಿಖೆ ನಂತರವೇ ಸತ್ಯ ಬಹಿರಂಗವಾಗಬೇಕಿದೆ. ಆದರೆ ಘಟನೆ ನಂತರ ನಕ್ಸಲ್‌ ನಿಗ್ರಹ ದಳದವರು ಕೂಂಬಿಂಗ್‌ ತೀವ್ರಗೊಳಿಸಿದ್ದಾರೆ.

ಬಸರೀಕಲ್‌ ಅರಣ್ಯ ಚೆಕ್‌ಪೋಸ್ಟ್‌ ಮೇಲೆ 5 ಪೆಟ್ರೋಲ್‌ ಬಾಂಬ್‌ ಗಳನ್ನು ಸಿಡಿಸಲಾಗಿದೆ. ಬಾಂಬ್‌ ಎಸೆದವರು ಸ್ಥಳೀಯ ದುಷ್ಕರ್ಮಿಗಳು ಎಂಬ ಅನುಮಾನ ಬಂದಿದೆ. ಪ್ರಕರಣ ಕುರಿತು ತನಿಖೆ ಆರಂಭಿಸಲಾಗಿದೆ.ಬಾಂಬ್‌ ಎಸೆದವರು ನಕ್ಸಲರು ಎಂಬುದಕ್ಕೆ ಯಾವುದೇ ಸಾಕ್ಷಿಗಳು
ದೊರೆತಿಲ್ಲ.
– ಹರೀಶ್‌ ಪಾಂಡೆ, ಜಿಲ್ಲಾ
ಪೊಲೀಸ್‌ ವರಿಷ್ಠಾಧಿಕಾರಿ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.