ತಲೆನೋವು ಎಂದು ಹೇಳಿದ್ದಕ್ಕೆ 6ನೇ ತರಗತಿ ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹಲ್ಲೆ!
Team Udayavani, Jun 2, 2022, 11:37 AM IST
ಚಿಕ್ಕಮಗಳೂರು: ತಲೆನೋವು ಎಂದು ಹೇಳಿದ್ದಕ್ಕೆ ಆರನೇ ತರಗತಿ ವಿದ್ಯಾರ್ಥಿಗೆ ದೈಹಿಕ ಶಿಕ್ಷಕರೊಬ್ಬರು ಮೈಮೇಲೆ ಬಾಸುಂಡೆ ಬರುವಂತೆ ಹಲ್ಲೆ ನಡೆಸಿದ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ ನಡೆದಿದೆ.
ಕೊಪ್ಪ ತಾಲೂಕಿನ ಬಂಡೀಗಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ. ಶ್ರೇಯಸ್ ಹಲ್ಲೆಗೊಳಗಾದ ಬಾಲಕ. ದೈಹಿಕ ಶಿಕ್ಷಕ ನಾಗರಾಜ್ ಎಂಬುವರು ಹಲ್ಲೆ ಮಾಡಿದ್ದಾಗಿ ಆರೋಪಿಸಲಾಗಿದೆ.
ಇದನ್ನೂ ಓದಿ:ಹುಣಸೆ ಹಣ್ಣಿನ ಬೆಲೆ ದಿಢೀರ್ ಕುಸಿತ: ಕೆ.ಜಿ.ಗೆ 40 ರೂ. ಇದ್ದ ಹಣ್ಣಿಗೆ ಈಗ 15 ರೂಪಾಯಿ
ತರಗತಿಯಲ್ಲಿ ಸರಿಯಾಗಿ ಬರೆಯಬೇಕು ಎಂದು ಶ್ರೇಯಸ್ ತಲೆಗೆ ನಾಗರಾಜ್ ಹೊಡೆದಿದ್ದಾರೆ. ಬಾಲಕ ತಲೆನೋವು ಎಂದು ಹೇಳಿದ್ದಕ್ಕೆ ಕಾಲಿಗೆ-ಬೆನ್ನಿಗೆ ಹೊಡೆದಿದ್ದಾರೆ. ಶಿಕ್ಷಕನ ಏಟಿನ ಪರಿಣಾಮ ಬಾಲಕನ ಬೆನ್ನಿನ ಮೇಲೆ ಬಾಸುಂಡೆಗಳು ಬಿದ್ದಿವೆ.
ಶಿಕ್ಷಕನ ವಿರುದ್ಧ ಸ್ಥಳೀಯರು, ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದು, ಅವರನ್ನು ಸೇವೆಯಿಂದ ವಜಾ ಮಾಡಬೇಕೆಂದು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ