ಪ್ರಧಾನ ಮಂತ್ರಿ ಕುರ್ಚಿ ಕುಟುಂಬದ ಆಸ್ತಿಯೇ?


Team Udayavani, May 10, 2018, 6:00 AM IST

180509kpn97.jpg

ಚಿಕ್ಕಮಗಳೂರು/ಕೋಲಾರ: ಕರ್ನಾಟಕ ಓಟಿನ ಬೇಟೆಗೆ ಇನ್ನೆರಡು ದಿನ ಬಾಕಿ ಉಳಿದಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಕಡೇ ದಿನದ ರ್ಯಾಲಿಯಲ್ಲಿ ಕಾಂಗ್ರೆಸ್‌ ವಿರುದ್ಧ ಮತ್ತಷ್ಟು ವಾಗ್ಧಾಳಿ ನಡೆಸಿದ್ದಾರೆ.

ಚಿಕ್ಕಮಗಳೂರಿನ ರ್ಯಾಲಿಯಲ್ಲಿ ನೇರವಾಗಿಯೇ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರನ್ನೇ ಗುರಿಯಾಗಿಸಿಕೊಂಡ ಅವರು, ಕಾಂಗ್ರೆಸ್‌ ಪಕ್ಷ ತಮ್ಮ ಕುಟುಂಬದ್ದು ಎನ್ನುವ ರೀತಿಯಲ್ಲಿ ವರ್ತಿಸುತ್ತಿರುವ ಕೆಲವರು ಪ್ರಧಾನ ಮಂತ್ರಿ ಕುರ್ಚಿ ತನ್ನ ಕುಟುಂಬದ ಆಸ್ತಿ ಎಂದು ಭಾವಿಸಿದ್ದಾರೆ ಎಂದು ಟಾಂಗ್‌ ನೀಡಿದರು. ಈ ಕುರ್ಚಿಯಲ್ಲಿ ಬೇರೆ ಯಾರೂ ಅದರಲ್ಲಿ ಕೂರುವ ಹಾಗಿಲ್ಲ. 2004 ರಿಂದ 10 ವರ್ಷಗಳ ಕಾಲ ಸೋನಿಯಾ ಹಾಗೂ ಮನಮೋಹನ್‌ಸಿಂಗ್‌ ಈ ದೇಶವನ್ನು ಆಳಿದರು. ಆದರೆ ಎಲ್ಲ ರಾಜ್ಯಗಳಲ್ಲೂ ಕಾಂಗ್ರೆಸ್‌ ಪರಾಭವಗೊಂಡು ಕೇವಲ 40 ಸ್ಥಾನ ಪಡೆಯಿತು. ಆದರೂ ಈಗಲೂ ಈ ಕುಟುಂಬದ ಅಹಂಕಾರ ಕಡಿಮೆಯಾಗಲಿಲ್ಲ. 2019 ರಲ್ಲಿ ನಾನೇ ಪ್ರಧಾನ ಮಂತ್ರಿ ಎಂದು ಹೇಳುವಷ್ಟು ಅಹಂ ಇದೆ ಎಂದು ವ್ಯಂಗ್ಯವಾಡಿದರು.

ಬೆಂಗಳೂರಿನಲ್ಲಿ ಸಿಕ್ಕಿರುವ ಭಾರಿ ಪ್ರಮಾಣದ ಮತಚೀಟಿಗಳ ಬಗ್ಗೆಯೂ ಮಾತನಾಡಿದ ಅವರು, ಅಧಿಕಾರ ಹಿಡಿಯಲು ಕಾಂಗ್ರೆಸ್‌ ಯಾವ ಮಾರ್ಗ ಹಿಡಿಯಲು ಬೇಕಾದರೂ ಮುಂದಾಗುತ್ತದೆ ಎಂಬುದಕ್ಕೆ ಇದೇ ಸಾಕ್ಷಿ ಎಂದು ಆರೋಪಿಸಿದರು.

ಸಂವಿಧಾನ ಬದಲಿಸಲ್ಲ: ಕೋಲಾರದಲ್ಲಿ ಮಾತನಾಡಿದ ಮೋದಿ ಅವರು, ದೇಶದಲ್ಲಿ ಅಟಲ್‌ ಬಿಹಾರಿ ವಾಜಪೇಯಿ ಅವರು ಅಧಿಕಾರಕ್ಕೆ ಬಂದಾಗ ಕಾಂಗ್ರೆಸ್‌ ಪಕ್ಷ ಸಂವಿಧಾನ ಬದಲಾವಣೆಯಾಗುತ್ತದೆ. ಮೀಸಲಾತಿ ರದ್ದಾಗುತ್ತದೆ ಎಂದು ಗುಲ್ಲೆಬ್ಬಿಸಿತ್ತು. ಆದರೆ, ವಾಜಪೇಯಿ ಸರ್ಕಾರ ಅಂತಹ ಕೆಲಸವನ್ನು ಮಾಡಲಿಲ್ಲ ಎಂದರು. ಈಗಲೂ ಅದೇ ರೀತಿಯ ಸುಳ್ಳಿನ ಆರೋಪಗಳನ್ನು ಮಾಡಲಾಗುತ್ತಿದೆ. ಆದರೆ, ಬಿಜೆಪಿ ಸರಕಾರ ಯಾವುದೇ ಕಾರಣಕ್ಕೂ ಸಂವಿಧಾನ ಬದಲಾವಣೆ ಮಾಡುವುದಿಲ್ಲ. ಮೀಸಲಾತಿಯನ್ನು ರದ್ದುಪಡಿಸುವುದಿಲ್ಲ. ಇದನ್ನು ದಲಿತರು ಅರ್ಥ ಮಾಡಿಕೊಳ್ಳಬೇಕು. ಬಿಜೆಪಿ ಅಧಿಕಾರದಲ್ಲಿ ಪರಿಶಿಷ್ಟ ಜಾತಿ, ವರ್ಗದ ಕಾಯ್ದೆ ಬಲಪಡಿಸಲಾಗಿದೆ ಎಂದು ಹೇಳಿದರು.

ಕಾಂಗ್ರೆಸ್‌ನಿಂದ ಅಂಬೇಡ್ಕರ್‌ಗೆ ಅವಮಾನ: ಸಂವಿಧಾನ ಶಿಲ್ಪಿಗೆ ಹೆಚ್ಚು ಅವಮಾನ ಮಾಡಿದ್ದು ಕಾಂಗ್ರೆಸ್‌ ಎಂದ ಮೋದಿ ಅವರು, ಕಾಂಗ್ರೆಸ್‌ ಅಧಿಕಾರದಲ್ಲಿದ್ದಾಗ ತಂದೆಗೆ ಮಗಳು, ಅಮ್ಮನಿಗೆ ಮಗ, ಗಂಡನಿಗೆ ಹೆಂಡತಿ ಭಾರತ ರತ್ನ ನೀಡುವ ಮೂಲಕ ಒಂದೇ ಕುಟುಂಬದಲ್ಲಿ ನಾಲ್ವರು ಭಾರತ ರತ್ನಗಳು ಇರುವಂತೆ ಮಾಡಿಕೊಂಡರು. ಸರ್ಕಾರದ ಎಲ್ಲ ಯೋಜನೆಗಳಿಗೂ ಅವರದೇ ಕುಟುಂಬದ ಸದಸ್ಯರ ಹೆಸರುಗಳನ್ನು ಇಟ್ಟುಕೊಂಡರು. ಆದರೆ, ವಾಜಪೇಯಿ ಸರಕಾರ ಅಂಬೇಡ್ಕರ್‌ರಿಗೆ ಭಾರತ ರತ್ನ ಗೌರವ ನೀಡಿತು ಎಂದರು.

ಕಾಂಗ್ರೆಸ್‌ನ ಆರು ರೋಗಾಣು
ಕಾಂಗ್ರೆಸ್‌ ಸಂಸ್ಕೃತಿ, ಕೋಮುವಾದ, ಜಾತೀಯತೆ, ಅಪರಾಧ, ಭ್ರಷ್ಟಾಚಾರ ಹಾಗೂ ಗುತ್ತಿಗೆದಾರಿಕೆ ಎಂಬ ಆರು ರೋಗಾಣುಗಳು ಕರ್ನಾಟಕದ ಆಡಳಿತ ವ್ಯವಸ್ಥೆಯನ್ನು ಹಾಳು ಮಾಡಿವೆ ಎಂದು ಮೋದಿ ಟೀಕಿಸಿದ್ದಾರೆ. ಕಾಂಗ್ರೆಸ್‌ನ ದೆಹಲಿ ದರ್ಬಾರಿಗೆ ಬಹು ಪರಾಖ್‌ ಹೇಳುವ ಹಾಗೂ ಕಪ್ಪು ಕಾಣಿಕೆ ಒಪ್ಪಿಸುವ ಜನರು ದೇಶದ ವಿವಿಧ ರಾಜ್ಯಗಳಲ್ಲಿದ್ದಾರೆ. ಕರ್ನಾಟಕದಲ್ಲೂ ಇಂತಹದ್ದೇ ಕೆಟ್ಟ ಸರಕಾರ ಆಡಳಿತ ನಡೆಸಿದೆ. ಈ ಸರ್ಕಾರವನ್ನು ತೊಲಗಿಸಿ ರಾಜ್ಯದ ಪ್ರಗತಿಗೆ ಜನತೆ ಸಹಕರಿಸಬೇಕು. ಹೆಸರು ಆಧಾರಿತ ಕಾಂಗ್ರೆಸ್‌ ಸಂಸ್ಕೃತಿಯನ್ನು ತೊಲಗಿಸಿ, ಕೆಲಸ ಆಧಾರಿತ ಬಿಜೆಪಿ ಪಕ್ಷವನ್ನು ಬೆಂಬಲಿಸಬೇಕು ಎಂದರು.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.