![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಂಚೆ ಕಾರ್ಡ್ ಚಳುವಳಿ
Team Udayavani, Oct 3, 2020, 6:09 PM IST
![ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಂಚೆ ಕಾರ್ಡ್ ಚಳುವಳಿ](https://www.udayavani.com/wp-content/uploads/2020/10/CM-TDY-1-1-620x372.jpg)
ಶೃಂಗೇರಿ: ತಾಲೂಕಿನಲ್ಲಿ ಹಕ್ಕುಪತ್ರ, ಕೃಷಿ ಸಾಗುವಳಿ ಮಂಜೂರಾತಿ ಹಾಗೂ ಮೆಣಸೆಯಲ್ಲಿ ಹೆಚ್ಚುವರಿ ವಿದ್ಯುತ್ ಪರಿವರ್ತಕಕ್ಕಾಗಿ ಆಗ್ರಹಿಸಿ ಗಾಂಧಿ ಜಯಂತಿ ದಿನದಂದು ಜಿಲ್ಲಾ ಧಿಕಾರಿಗಳು ಹಾಗೂ ಮೆಸ್ಕಾಂಗೆ ಅಂಚೆ ಕಾರ್ಡ್ ಚಳುವಳಿ ಆರಂಭಿಸಲಾಯಿತು.
ಮೆಣಸೆ ಅಂಚೆ ಕಚೇರಿ ಎದುರು ಶುಕ್ರವಾರ ಏರ್ಪಡಿಸಿದ್ದ ಅಂಚೆ ಕಾರ್ಡ್ ಚಳುವಳಿ ಸಂದರ್ಭದಲ್ಲಿ ಮಾತನಾಡಿದ ಹೊಸ್ತೋಟ ತ್ರಿಮೂರ್ತಿ, 2002 ರಿಂದಮನೆದಳ ಮಂಜೂರಾಗಿಲ್ಲ. 2014 ರಲ್ಲಿ 94ಸಿ ಯೋಜನೆಯಡಿ ಸಾವಿರಾರು ಜನರುಮನೆ ಮಂಜೂರಾತಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಯಾವುದೇ ಮಂಜೂರಾತಿಗೆ ಸೊಪ್ಪಿನ ಬೆಟ್ಟ ಎಂಬ ಕಾರಣ ಒಡ್ಡಿ ಇಲ್ಲಿ ಮಂಜೂರಾತಿ ಆಗುತ್ತಿಲ್ಲ. ಕೊಪ್ಪ, ಎನ್.ಆರ್. ಪುರ ತಾಲೂಕಿನಲ್ಲಿ ಹಕ್ಕುಪತ್ರ ನೀಡಲಾಗುತ್ತಿದೆ. ತಾಲೂಕಿನಲ್ಲಿ ಹಲವಾರು ಪರಿಸರದ ಯೋಜನೆಗಳನ್ನು ಸರಕಾರ ಅಳವಡಿಸುತ್ತಿದ್ದು, ಮೀಸಲು ಅರಣ್ಯ ಘೋಷಣೆ, ಕಸ್ತೂರಿ ರಂಗನ್ ವರದಿ, ಹುಲಿ ಯೋಜನೆ ಮುಂತಾದ ಯೋಜನೆ ಜಾರಿಯಾಗುತ್ತಿದೆ. ಈಗಾಗಲೇ ಹಕ್ಕು ಪತ್ರ ಹೊಂದಿರುವವರು ಇ- ಸ್ವತ್ತು ಪಡೆಯಲು ಸರಕಾರದ ಕಾನೂನು ಅಡ್ಡಿಯಾಗುತ್ತಿದ್ದು, ಸೊಪ್ಪಿನ ಬೆಟ್ಟ ಎಂಬ ಯೋಜನೆ ಬಗ್ಗೆ ಕಂದಾಯ ಇಲಾಖೆ ಸಾರ್ವಜನಿಕರಿಗೆ ಸ್ಪಷ್ಟ ಮಾಹಿತಿ ನೀಡಬೇಕು. ಗಾಂಧಿ ಜಯಂತಿ ಸಂದರ್ಭದಲ್ಲಿ ನಮಗೆ ಅನಿವಾರ್ಯವಾಗಿರುವ ವಿಷಯದ ಬಗ್ಗೆ ಜಿಲ್ಲಾ ಧಿಕಾರಿಗಳ ಗಮನ ಸೆಳೆಯಲು ಅಂಚೆ ಕಾರ್ಡ್ ಚಳುವಳಿ ಆರಂಭಿಸಲಾಗುತ್ತಿದೆ ಎಂದರು.
ಪಿ.ಬಿ. ಶ್ರೀನಿವಾಸ್ ಮಾತನಾಡಿ, ನೂರಾರು ಮನೆಗಳಿರುವ ಮೆಣಸೆಯಲ್ಲಿ ವಿದ್ಯುತ್ ವೋಲ್ಟೆàಜ್ ಸಮಸ್ಯೆ ತೀವ್ರವಾಗಿದೆ. ವಿದ್ಯುತ್ ಪರಿವರ್ತಕದ ಬೇಡಿಕೆಗಾಗಿ ಕಳೆದ ವರ್ಷವೇ ಇಲಾಖೆ ಅಂದಾಜು ಪಟ್ಟಿ ಆಗಿದೆ. ವೋಲ್ಟೆàಜ್ ಸಮಸ್ಯೆಯಿಂದ ಸಣ್ಣ ಕೈಗಾರಿಕೆ, ಗೃಹೋಪಯೋಗಕ್ಕೆ ತೀವ್ರ ಸಮಸ್ಯೆಯಾಗಿದೆ. ಕೆಲ ದಿನದಲ್ಲಿ ಅಡಕೆ ಕೊಯ್ಲು ಆರಂಭಗೊಳ್ಳುತ್ತಿದ್ದು, ಅಡಕೆ ಸುಲಿಯುವ ಯಂತ್ರದ ಚಾಲನೆಗೆ ವೋಲ್ಟೆàಜ್ ಅಗತ್ಯವಿದೆ. ಮೆಸ್ಕಾಂ ತುರ್ತಾಗಿ ವಿದ್ಯುತ್ ಪರಿವರ್ತಕ ಅಳವಡಿಸುವಂತೆ ಮೆಸ್ಕಾಂಗೆ ಅಂಚೆ ಕಾರ್ಡ್ ಚಳುವಳಿ ಆರಂಭಿಸಲಾಗುತ್ತಿದೆ ಎಂದರು. ರೈತ ಸಂಘದ ಮುಂಡಗೋಡು ಶ್ರೀನಿವಾಸಮೂರ್ತಿ, ಕಣದಮನೆ ಜಗದೀಶ್, ಬಸವಣ್ಣ, ಮರಿಯಪ್ಪ ನಾಯ್ಕ, ಚಂದ್ರಶೇಖರ್,ಮಹಾಬಲ ಶೆಟ್ಟಿ, ಎಂ.ಎಲ್. ಶಿವಶಂಕರ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-aaaa](https://www.udayavani.com/wp-content/uploads/2024/07/1-aaaa-8-150x100.jpg)
ಚಾರ್ಮಾಡಿ ಘಾಟಿ ; ರಸ್ತೆಗೆ ಅಡ್ಡಲಾಗಿ ಬಿದ್ದ ಮರ: ವಾಹನ ಸಂಚಾರಕ್ಕೆ ತಾತ್ಕಾಲಿಕ ತಡೆ
![1-sadasd](https://www.udayavani.com/wp-content/uploads/2024/07/1-sadasd-150x90.jpg)
July27;ಚಿಕ್ಕಮಗಳೂರಿನ 6 ತಾಲೂಕುಗಳಲ್ಲಿ ಪ್ರೌಢ ಶಾಲೆಗಳವರೆಗೆ,ಕೊಡಗಿನಲ್ಲಿ ಪಿಯುಸಿವರೆಗೆ ರಜೆ
![N.R.Pura; ಸೊಂಟಕ್ಕೆ ವೈರ್ ಕಟ್ಟಿಕೊಂಡು ಈಜಿ ಕೆಲಸ ಮಾಡಿದ ಲೈನ್ ಮ್ಯಾನ್; ವಿಡಿಯೋ ವೈರಲ್](https://www.udayavani.com/wp-content/uploads/2024/07/lineman-150x83.jpg)
N.R.Pura; ಸೊಂಟಕ್ಕೆ ವೈರ್ ಕಟ್ಟಿಕೊಂಡು ಈಜಿ ಕೆಲಸ ಮಾಡಿದ ಲೈನ್ ಮ್ಯಾನ್; ವಿಡಿಯೋ ವೈರಲ್
![Rain: ರಾಷ್ಟ್ರೀಯ ಹೆದ್ದಾರಿಗೆ ಉರುಳಿ ಬಿದ್ದ ಮರ… ತಪ್ಪಿದ ಭಾರಿ ಅನಾಹುತ, ಕಾರುಗಳು ಜಖಂ](https://www.udayavani.com/wp-content/uploads/2024/07/mara-1-150x101.jpg)
Rain: ರಾಷ್ಟ್ರೀಯ ಹೆದ್ದಾರಿಗೆ ಉರುಳಿ ಬಿದ್ದ ಮರ… ತಪ್ಪಿದ ಭಾರಿ ಅನಾಹುತ, ಕಾರುಗಳು ಜಖಂ
![Kadur; ಪಶ್ಚಿಮ ಘಟ್ಟಗಳ ಸಾಲಿನ ಭಾರೀ ಮಳೆ; ಕೋಡಿ ಬಿದ್ದ ಮದಗದ ಕೆರೆ](https://www.udayavani.com/wp-content/uploads/2024/07/madaga-150x83.jpg)
Kadur; ಪಶ್ಚಿಮ ಘಟ್ಟಗಳ ಸಾಲಿನ ಭಾರೀ ಮಳೆ; ಕೋಡಿ ಬಿದ್ದ ಮದಗದ ಕೆರೆ
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.